ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 14 ದಿನಗಳ ಕಾಲ (14 days lockdown in karnataka ) ಲಾಕ್ಡೌನ್ ವಿಧಿಸಲಾಗಿದೆ. ಮಂಗಳವಾರ (ಏಪ್ರೀಲ್ 27ರಿಂದ) ರಾತ್ರಿ 9 ಗಂಟೆಯಿಂದ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀಕೆಂಡ್ ಕರ್ಫ್ಯೂ ಸಮಯದಲ್ಲಿದ್ದ ನಿಯಮಾವಳಿಗಳು ವಾರ ಪೂರ್ತಿ ಅನ್ವಯವಾಗಲಿದೆ. ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10ಕ್ಕೆ ಎಲ್ಲರೂ ವ್ಯಾಪಾರ ಸ್ಥಗಿತಗೊಳಿಸಬೇಕು. ಪೊಲೀಸರು ಬಲ ಪ್ರಯೋಗಿಸಲು ಅವಕಾಶ ನೀಡಬಾರದು. ಎಲ್ಲವೂ ಬಂದ್ ಇರುತ್ತದೆ. ಸಾರ್ವಜನಿಕರು ಮನೆ ಬಿಟ್ಟು ಹೊರಬರಬಾರದು. ಮುಖ್ಯ ಕಾರ್ಯದರ್ಶಿ ಈ ಸಂಬಂಧ. ಮಾರ್ಗಸೂಚಿ ಹೊರಡಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಸಾರಿಗೆ ಬಸ್ಗಳು ಸೇರಿ ಯಾವುದೇ ಸಾರಿಗೆ ಸಂಚಾರ ಇರುವುದಿಲ್ಲ. ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ. ಜವಳಿ, ಕಟ್ಟಡ ನಿರ್ಮಾಣ, ಕೃಷಿ ಬಿಟ್ಟು ಬೇರೆಲ್ಲ ಚಟುವಟಿಕೆ ಬಂದ್ ಆಗಲಿವೆ. ಅಂತರರಾಜ್ಯ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೋಡಲ್ ಅಧಿಕಾರಿಗಳಾಗಿರುತ್ತಾರೆ. ಕೋವಿಡ್ ಹರಡದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಕಸಾಪ ಚುನಾವಣೆ ಸೇರಿ ಎಲ್ಲಾ ಚುನಾವಣೆ 6 ತಿಂಗಳು ಮುಂದೂಡಿ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ
ಹಾಲು, ತರಕಾರಿ, ಹಣ್ಣು ಹಂಪಲು ಮುಂತಾದ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಮಧ್ಯ ಖರೀದಿಗೆ ಬೆಳಗ್ಗೆ 6 ರಿಂದ10ರವರೆಗೆ ಅವಕಾಶ ನೀಡಲಾಗಿದೆ. ಮೆಡಿಕಲ್ ಶಾಪ್, ಬ್ಯಾಂಕ್, ಎಟಿಎಂ ಸೇವೆ, ರಕ್ತನಿಧಿ ಕೇಂದ್ರ, ಆಸ್ಪತ್ರೆ, ಕ್ಲಿನಿಕ್ ಗಳು,ಲಾಕ್ಡೌನ್ ಅವಧಿಯಲ್ಲಿ ತೆರೆದಿರುತ್ತವೆ.