ಬರಗಾಲ ಪಟ್ಟಿಯಲ್ಲಿರುವ ಈ ತಾಲೂಕಿನ ರೈತರಿಗೆ ಪರಿಹಾರ ಜಮೆ

Written by Ramlinganna

Updated on:

195 drought taluks declared  ರಾಜ್ಯದಲ್ಲಿ ಯಾವ ಯಾವ ತಾಲೂಕುಗಳನ್ನು ಬರಗಾಲ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂಬುದನ್ನು ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದಲ್ಲಿ 216 ಕ್ಕೂಹೆಚ್ಚು ತಾಲೂಕುಗಳನ್ನು ಬರಗಾಲ ಳ ಬರಪೀಡಿತ ಪ್ರದೇಶಗಳೆಂದು  ಘೋಷಣೆ ಮಾಡಲಾಗಿದೆ.  ಬರಗಾಲ ತಾಲೂಕುಗಳ ಪಟ್ಟಿಯನ್ನು  ತಮ್ಮ ಬಳಿಯಿರುವ ಮೊಬೈಲ್ ನಲ್ಲೆ ಚೆಕ್ ಮಾಡಬಹುದು.

ರಾಜ್ಯದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ತೀರ್ಮಾನಿಸಿದೆ.

ಹೌದು, ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಂಪುಟ ಉಪ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಂದ ಬಂದ ವರದಿ ಆಧರಿಸಿ ಬರಪಡಿತ ತಾಲೂಕುಗಳ ಪಟ್ಟಿ ಸಿದ್ದಪಡಿಸಲಾಯಿತು.  ರಾಜ್ಯದ 236 ತಾಲೂಕುಗಳ ಪೈಕಿ 195 ತಾಲೂಕುಗಳು ಬರಪೀಡಿತ ಪ್ರದೇಶವೆಂದು  ಘೋಷಿಸಿಲು ನಿರ್ಣಯಿಸಲಾಗಿದೆ. ಈ ಸಂಖ್ಯೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.  ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಎನ್.ಡಿಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಕಂದಾಯ ಇಲಾಖೆ ಸೂಚಿಸಿದೆ.

195 drought taluks declared  ನಿಮ್ಮ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆಯೇ? ಲ್ಲೇ ಚೆಕ್ ಮಾಡಿ

ರೈತರು ತಮ್ಮ ತಾಲೂಕು ಬರಗಾಲ ಪೀಡಿತ ಪ್ರದೇಶದಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

ಬರಗಾಲ ತಾಲೂಕುಗಳ ಪಟ್ಟಿ

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ 2023 ರ ಮುಂಗಾರಿನಲ್ಲಿ ತೀವ್ರ ಬರ ಪೀಡಿತ 161 ತಾಲೂಕುಗಳಪಟ್ಟಿ,  ಹಾಗೂ 2023 ರ ಮುಂಗಾರಿನಲ್ಲಿ ಸಾಧಾರಣ ಬರ ಪೀಡಿತ 34 ತಾಲೂಕುಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಹಾಗೂ ಆ ಜಿಲ್ಲೆಯಲ್ಲಿ ಯಾವ ಯಾವ ತಾಲೂಕುಗಳು ಬರಗಾಲ ಪೀಡತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ ಎಂಬುದರ ಪಟ್ಟಿ ಇರುತ್ತದೆ.

ಪಿಡಿಎಫ್ ಪೇಜ್ ನ ಮೊದಲ ಪುಟದಲ್ಲಿ ಕರ್ನಾಟಕ ಸರ್ಕರಾದ ನಡವಳಿ ಅಂದರೆ 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಿಸುವ ಕುರಿತು ಮಾಹಿತಿ ಇರುತ್ತದ. ಅದರ ಕೆಳಗಡೆ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ನೀಡಲಾಗಿದೆ.

ತೀವ್ರ ಬರಪೀಡಿತ 161 ತಾಲೂಕುಗಳ ಪಟ್ಟಿ

ಬೆಂಗಳೂರು ಪೂರ್ವ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ಕಲಕಪುರ, ರಾಮನಗರ, ಹಾರೋಹಳ್ಳಿ, ಬಂಗಾರಪೇಟೆ, ಕೋಲಾರ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್, ಬಾಗೇಪಲ್ಲಿ, ಚಿಕ್ಕಬಳ್ಳಾಪರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶೀಡ್ಲಘಟ್ಟ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಘಡ, ಶಿರಾ, ತಿಪಟೂರು, ತುರುವೆಕೆರೆ, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರ, ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ, ಹೆಚ್.ಡಿ. ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾಪಟ್ಟಣ, ಟಿ.ನರಸಿಪುರ, ಸರಗೂರು, ಸಾಲಿಗ್ರಾಮ, ಕೃಷ್ಣರಾಜಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣ, ಬಳ್ಳಾರಿ, ಸಂಡೂರು ಶಿರುಗುಪ್ಪ, ಕುರುಗೋಡು, ಕಂಪ್ಲಿ, ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗ, ಕರಟಗಿ, ಕುಕನೂರು, ಕನಕಗಿರಿ, ಲಿಂಗಸೂಗುರು, ಮಾನ್ವಿ, ರಾಯಚೂರು, ಶಿರವಾರ, ಅಫಜಲ್ಪುರ, ಆಳಂದ, ಚಿಂಚೋಳಿ, ಚಿತ್ತಾಪುರ, ಕಲಬುರಗಿ, ಜೇವರ್ಗಿ, ಸೇಡಂ, ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಬಾದ್, ಭಾಲ್ಕಿ, ಬಸವಕಲ್ಯಾಣ, ಹುಲಸೂರು, ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ರಾಮದುರ್ಗ, ರಾಯಬಾಗ್, ಸವದತ್ತಿ, ಕಿತ್ತೂರು, ನಿಪ್ಪಾಣಿ, ಕಾಗವಾಡ, ಮುದಲಗಿ, ಯರಗಟ್ಟಿ, ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಳ, ಗುಳೇದಗುಡ್ಡ, ಇಳಕಲ್, ರಬಕವಿ ಬನಹಟ್ಟಿ, ಬಸವನಬಾಗೇವಾಡಿ, ವಿಜಯಪುರ, ಇಂಡಿ, ಮುದ್ದೇಬಿಹಾಳ, ಸಿಂಧಗಿಸೇರಿದಂತೆ  ಒಟ್ಟು 161 ತೀವ್ರ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

Leave a Comment