74 ಕೋಟಿ ಬರ ಪರಿಹಾರ ಜಮೆ: ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ

Written by Ramlinganna

Published on:

74 crore bara parihara : ಬರಗಾಲ ಪರಿಹಾರ ಹಣ ಈಗ ರೈತರ ಖಾತೆಗೆ ಜಮೆಯಾಗುತ್ತಿರುವುದು ಸಂತಸದ ಸಂಗತಿಯಾಗಿದೆ. ಈಗ ಒಂದೊಂದಾಗಿ ಎಲ್ಲಾ ಜಿಲ್ಲೆಗಳ ರೈತರ ಖಾತೆಗೆ ಬರ ಪರಿಹಾರ ಹಣ ಜಮೆಯಾಗುತ್ತಿದೆ

ಹೌದು, ಕೆೆೆೆಲವು ಜಿಲ್ಲೆಗಳ ರೈತರ ಖಾತೆಗೂ ಬರಗಾಲ ಪರಿಹಾರ ಹಣ ಜಮೆಯಾಗಿದೆ. ಯಾವ ರೈತರಿಗೆ ಎಷ್ಟು  ಬರಗಾಲ ಪರಿಹಾರ ಹಣ ಜಮೆಯಾಗಿದೆ? ಯಾವ ಖಾತೆಗೆ ಬರ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ತುಮಕೂರು ಜಿಲ್ಲೆಯ 1,23,332 ರೈತರ ಖಾತೆಗೆ 74 ಕೋಟಿ ರೂಪಾಯಿ ಬರ ಪರಿಹಾರದ ಹಣವನ್ನುಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದದಲ್ಲಿ  ತಾಲೂಕು ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್  ಸಭೆ ನಡೆಸಿ ಮಾತನಾಡಿದರು.ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ 15975 ರೈತರಿಗೆ 9,28,23,283 ರೂಪಾಯಿ ಗುಬ್ಬಿಯ 8234 ರೈತರಿಗೆ 4,10,29,295 ರೂಪಾಯಿ ಬರ ಪರಿಹಾರ ಜಮೆ ಮಾಡಲಾಗಿದೆ.

ಕೊರಟಗೆರೆಯ 12144 ರೈತರಿಗೆ 7,2813,925 ರೂಪಾಯಿ ಬರ ಪರಿಹಾರ ಜಮೆ ಮಾಡಲಾಗಿದೆ. ಅದೇ ರೀತಿ ಕುಣಿಗಲ್  ತಾಲೂಕಿನ 19,022 ರೈತರಿಗೆ 9,64,53,201 ರೈತರಿಗೆ, ಮುಧುಗಿರಿ ತಾಲೂಕಿನ 15,548 ರೈತರಿಗೆ 8,97,83,195 ರೂಪಾಯಿ ಜಮೆ ಮಾಡಲಾಗಿದೆ. ಪಾವಗಡ ತಾಲೂಕಿನ 5641 ರೈತರಿಗೆ 4,25,83,561 ರೂಪಾಯಿ, ಶಿರಾ ತಾಲೂಕಿನ 17013 ರೈತರಿಗೆ 11,19,28,237 ರೂಪಾಯಿ ಜಮೆ ಮಾಡಲಾಗಿದೆ. ತಿಪಟೂರ ತಾಲೂಕಿನ 14,955 ರೈತರಿಗೆ 7,78,65,493 ರೂಪಾಯಿ ತುಮಕೂರು ತಾಲೂಕಿನ 11,004 ರೈತರಿಗೆ 5, 20,55,965 ರೂಪಾಯಿ ತುರುವೆಕೇರೆ ತಾಲೂಕಿನ 12786 ರೈತರಿಗೆ 6,48,09,796 ರೂಪಾಯಿ ಸೇರಿದಂತೆ 1,32,332 ರೈತರಿಗೆ 74,21,45,951 ರೂಪಾಯಿ ಬರ ಪರಿಹಾರವನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಿಮ್ಮ ಖಾತೆಗೆ ಬರ ಪರಿಹಾರ ಜಮೆಯಾಗಿದೆಯೇ ಇಲ್ಲೇ ಚೆಕ್ ಮಾಡಿ 

ಬರ ಪರಿಹಾರ ಹಣ ಯಾವ ಯಾವ ರೈತರಿಗೆ   ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92/       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ  ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಕಾಣಿಸುತ್ತದೆ.

ಅಲ್ಲಿ ನೀವು Select Year / ವರ್ಷ  2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಸರ್ವೆ ನಂಬರ್  ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಯಾವುದಾದರೊಂದನ್ನು ಆಯ್ಕೆ ಮಾಡಿಕೊಂಡು ಬರ ಪರಿಹಾರಜಮೆ ಚೆಕ್ಮಾಡಬಹುದು.

ಇದನ್ನೂ ಓದಿ ನಿಮ್ಮ ಸರ್ವೆ ನಂಬರಿನಲ್ಲಿ ಯಾವ ರೈತರಿಗೆಷ್ಟು ಜಮೀನಿದೆ? ಚೆಕ್ ಮಾಡಿ

 

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಈಗಾಗಲೇ ಇದ್ದರೆ ಚೆಕ್ ಮಾಡಿ

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಚೆಕ್ ಮಾಡಬಹುದು. ಹೌದು, ಆನ್ನಲೈನ್ ನಲ್ಲಿ ಪ್ರೂಟ್ಸ್ ಐಡಿ ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫಾರ್ಮರ್ಸ್ ಡಿಟೇಲ್ ಕೆಳಗಡೆ ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಫ್ರೂಟ್ಸ್ ಐಡಿ ನಂಬರ್ ಕಾಣಿಸುತ್ತದೆ.ಈ  ಫ್ರೂಟ್ಸ್ ಐಡಿ ನಂಬರ್ ಸಹಾಯದಿಂದ ನೀವು ಸರ್ಕಾರಿ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆಯಬಹುದು.

ಇನ್ನೂ ಕಾಲ ಮಿಂಚಿಲ್ಲ. ಯಾವ ಯಾವ ರೈತರ ಫ್ರೂಟ್ಸ್ ಐಡಿ ಮಾಡಿಸಿಲ್ಲವೋ ಅವರು ಕೂಡಲೇ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.ಇದಕ್ಕಾಗಿ ರೈತರು ತಮ್ಮ ಆಧಾರ್ ಕಾರ್ಡ್, ಜಮೀನಿನ ಪಹಣಿ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಿ ಕೂಡಲೇ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು.

ಬೆಳೆ ವಿಮೆ ಮಾಡಿಸುವಾಗಲೂ ಫ್ರೂಟ್ಸ್ ಐಡಿ ಕಡ್ಡಾಯಗೊಳಿಸಲಾಗಿದೆ. ಹಾಗಾಗಿ ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸುವಾಗ ಫ್ರೂಟ್ಸ್ ಐಡಿಯನ್ನು ಸಲ್ಲಿಸಬೇಕಾಗುತ್ತದೆ.

Leave a Comment