ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ

Written by Ramlinganna

Updated on:

Ganga Kalyana scheme subsidies : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್‌ದಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಅರ್ಜಿದಾರರು

https://www.kaushalkar.com

ವೆಬ್‌ಸೈಟ್‌ದಲ್ಲಿ ಅರ್ಜಿ ಸಲ್ಲಿಸಬೇಕು.

ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ,  ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗಲಿದೆ.

Ganga Kalyana scheme subsidies ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ:

ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.

ಘಟಕವೆಚ್ಚ: ರೂ.3.75ಲಕ್ಷಗಳು. ರೂ.3.25ಲಕ್ಷಗಳ ಸಹಾಯಧನ(ಸಬ್ಸಿಡಿ) ಹಾಗೂ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ರೂ.50,000/-ಗಳ ಸಾಲ.

ರೂ.3.25ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವೆಚ್ಚ, ಪಂಪ್‌ಸೆಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.2.50ಲಕ್ಷಗಳ ವೆಚ್ಚ ಭರಿಸಲಾಗುವುದು.

ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್. ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ಧೀಕರಣ ವೆಚ್ಚವಾಗಿ, ಪ್ರತಿ ಕೊಳವೆ ಬಾವಿಗೆ ರೂ.75,000/-ಗಳಂತೆ ಪಾವತಿಸಲಾಗುವುದು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.75ಲಕ್ಷಗಳು, ಇದರಲ್ಲಿ ರೂ.4.25ಲಕ್ಷಗಳ ಸಹಾಯಧನ ಹಾಗೂ ರೂ.50000/-ಗಳ ಸಾಲವಾಗಿರುತ್ತದೆ.

ಇದನ್ನೂ ಓದಿ : ನಿಮ್ಮ ಜಮೀನಿನ 20 ವರ್ಷ ಹಳೆಯ ಪಹಣಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಈ ಕಾರ್ಯಕ್ರಮಕ್ಕೆ ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಿದ ಆರ್ಥಿಕ ಗುರಿಯನ್ವಯ ಮೀಸಲಾತಿ ಅನುಪಾತ ಪ್ರವರ್ಗ-1 ಮತ್ತು 2ಎಗೆ 85% ಹಾಗೂ ಪ್ರವರ್ಗ-3ಎ ಮತ್ತು 3ಬಿಗೆ 15%ರಂತೆ ನೀರಾವರಿ ಘಟಕಗಳನ್ನು ಆಯ್ಕೆ ಮಾಡಿ ಸೌಲಭ್ಯ ಒದಗಿಸಬೇಕು. ಸಾಲದ ಮರುಪಾವತಿ ಅವಧಿ 3 ವರ್ಷಗಳು.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in

ಮೂಲಕ ಗ್ರಾಮಒನ್, ಗುಲಬರ್ಗಾ  ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ 2025ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in

ವೆಬ್‌ಸೈಟ್‌ದಿಂದ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಅಥವಾ ಕಲಬುರಗಿ ಜಿಲ್ಲಾ  ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment