ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

Written by Ramlinganna

Published on:

Today heavy rain : ರಾಜ್ಯದ ಹಲವೆಡೆ ಇದೇ ಸೋಮವಾರದಿಂದ ಅಂದರೆ ಜೂನ್ 9 ರಿಂದ  ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರದಿಂದ ಮೂರು ದಿನಗಳ ಕಾಲ ಅಂದರೆ ಜೂನ್ 9 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಹೌದು,  ರಾಜ್ಯದ 28 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ ನಿಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ? ಚೆಕ್ ಮಾಡಿ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಜೂನ್ 11 ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Today heavy rain  ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?

ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

 

Leave a Comment