1.50 lakh subsidy for udyoginischeme : ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಉದ್ಯೋಗಿನಿ, ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಮಹಿಳೆಯರು ಸೇವಾ ಸಿಂಧು ಪೋರ್ಟಲ್ ನಲ್ಲಿ ಜನವರಿ 15 ರೊಳಗಾಗಿ ಅರ್ಜಿ ಅರ್ಜಿ ಸಲ್ಲಿಸಲು ಕೋರಲಾಗಿದೆ
ಅರ್ಹ ಮಹಿಳೆಯರು ಸೇವಾ ಸಿಂಧು ಪೋರ್ಟಲ್ ನಲ್ಲಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
1.50 lakh subsidy for udyoginischeme ಉದ್ಯೋಗಿನಿ ಯೋಜನೆ
55 ವಯಸ್ಸಿನ ಒಳಗಿನ ಮತ್ತು ವಾರ್ಷಿಕ ಆದಾಯ ರೂಪಾಯಿ 1,50,000 ದ ಒಳಗಿರುವ ನಿರುದ್ಯೋಗಿ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆ ಕೈಕೊಳ್ಳಲು ಬ್ಯಾಂಕುಗಳಿಂದ ಗರಿಷ್ಠ 3 ಲಕ್ಷ ರೂಪಾಯಿಯವರಿಗೆ ಸಾಲ ಮತ್ತು ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಬ್ಯಾಂಕ್ ಸಾಲದ ಶೇ. 50 (ಗರಿಷ್ಠ 1,50,000 ಸಹಾಯಧನ ಮತ್ತು ಎಸ್.ಸಿ.ಎಸ್.ಟಿ ಹೊರತುಪಡಿಸಿ ಉಳಿದ ಎಲ್ಲಾ ಸಮುದಾಯದವರಿಗೂ ಶೇ. 30 ರಷ್ಟು (ಗರಿಷ್ಠ 90 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು.
ಇದನ್ನೂ ಓದಿ : ಮಹಿಳೆಯರಿಗೆ ಗುಡ್ ನ್ಯೂಸ್ ಇಂದು ಈ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ- ನಿಮ್ಮ ಹೆಸರು ಚೆಕ್ ಮಾಡಿ
ಚೇತನಾ ಯೋಜನೆ ಅಡಿಯಲ್ಲಿ ದಮನಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು 30 ಸಾವಿರ ರೂಪಾಯಿಯವರಿಗೆ ಪ್ರೋತ್ಸಾಹಧನ ನೀಡಲಾಗುವುದು.
ಧನಶ್ರೀ ಯೋಜನೆ
ಧನಶ್ರೀ ಯೋಜನೆಡಿಯಲ್ಲಿ ಎಚ್.ಐ.ವಿ ಸೋಂಕಿತ ಮತ್ತು ಬಾಧಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ರೂಪಾಯಿ 30 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿಗಳನ್ನು ಆಫ್ ಲೈನ್ ಮೂಲಕವೂ ಸಲ್ಲಿಸಬಹುದು
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಟ್ರಾನ್ಸ್ ಜೆಂಡರ್ಸ್ ತೃತೀಯ ಲಿಂಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು 30 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿಗಳನ್ನು ಆಫ್ಲೈನ್ ಮೂಲಕವೂ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ ಹಾಗೂ ಅಗತ್ಯ ದಾಖಲೆಗಳು
ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಮಹಿಳೆಯರಿಗೆ 18 ರಿಂದ 55 ವಯೋಮಿತಿಯೊಳಗಿರಬೇಕು. ವಾಸಸ್ಥಳ ದೃಢೀಕರಣ ಪತ್ರ, ಮತದಾರರ ಗುರುತಿನ ಚೀಟಿ ಹಾಗೂ ಪಡಿತರ ಚೀಟಿ ಹೊಂದಿರಬೇಕು. ಅರ್ಜಿದಾರರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ವಿವರ ಸಲ್ಲಿಸಬೇಕು. ಆಧಾರ್ ಕಾರ್ಡ್ ಸಲ್ಲಿಸಬೇಕು. ಸಂಬಂಧಪಟ್ಟ ತಹಶೀಲ್ದಾರರು ನೀಡಿರುವ ಆದಾಯ ದೃಢೀಕರಣ ಪ್ರಮಾಣ ಪತ್ರ (ವಾರ್ಷಿಕ ಆದಾಯ ಮಿತಿ ಸಾಮಾನ್ಯ ಅಥವಾ ವಿಶೇಷ ವರ್ಗದವರಿಗೂ 1.5 ಲಕ್ಷ ಒಳಗೆ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರೆಗೂ 2 ಲಕ್ಷ ರೂಪಾಯಿ ಒಳಗೆ ಇರಬೇಕು. ಸಂಬಂಧಪಟ್ಟ ತಹಶೀಲ್ದಾರರು ನೀಡಿರುವ ಜಾತಿ ಪ್ರಮಾಣ ಪತ್ರ ಇರಬೇಕು.
ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ನೆರವಾಗುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರು ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಲ್ಲಿ ಸ್ವ ಉದ್ಯೋಗ ಪ್ರಾರಂಭಿಸುವುದ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಚ್ಚಿಸುವ ಮಹಿಳೆಯರಿಗೆ ಬ್ಯಾಂಕುಗಳ ಮೂಲಕ ಸಾಲ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನವನ್ನು ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ
ಉದ್ಯೋಗಿನಿ,ಚೇತನಾ ಯೋಜನೆ, ಹಾಗೂ ಧನಶ್ರೀ ಯೋಜನೆಯ ಕುರಿತಂತೆ ಹೆಚ್ಚಿನ ಮಾಹಿತಿ ಪಡೆಯಲು ಈ
https://kswdc.karnataka.gov.in/21/udyogini/kn
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ಎಲ್ಲಾ ಮಾಹಿತಿಗಳು ಸಿಗಲಿವೆ.





