Bele sameekshe mobilnalli madi : 2026-27ನೇ ಸಾಲಿನ ಬೆಳೆ ಸಮೀಕ್ಷೆ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಮಾಹಿತಿಯನ್ನು ಸ್ವಯಂ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬೆಳೆ ಸಮೀಕ್ಷೆಯ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, ಪರಿಹಾರ ಮತ್ತು ವಿವಿಧ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಬಳಸಲಾಗುತ್ತದೆ. ಸ್ವಯಂ ಪ್ರೇರಣೆಯಿಂದ ಮೊಬೈಲ್ ಯಾಪ್ ಮೂಲಕ ಬೆಳೆ ವಿವರ ಅಪ್ಲೋಡ್ ಮಾಡಿದರೆ ನ್ಯೂನತೆ ಕಡಿಮೆಯಾಗಿ ಎಲ್ಲಾ ಸೌಲಭ್ಯಗಳೂ ಸಕಾಲದಲ್ಲಿ ರೈತರಿಗೆ ಲಭಿಸಲಿದೆ.
Bele sameekshe mobilnalli madi ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವುದು ಹೇಗೆ ?
ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಬೇಕಾದರೆ ರೈತರು
https://play.google.com/store/apps/details?id=com.csk.farmer23_24.cropsurvey&hl=kn
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮಂಗಾರು ರೈತರ ಬೆಳೆ ಸಮೀಕ್ಷೆ 26-26 ಕಾಣಿಸುತ್ತದೆ. ಅಲ್ಲಿ ನೀವು ಇನಸ್ಟಾಲ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಅದನ್ನು ಕ್ಲಿಕ್ ಮಾಡಿದ ನಂತರ ಅಲ್ಲಿ ಕೇಳಲಾದ ಒಂದು ಮಾಹಿತಿಗಳನ್ನು ಭರ್ತಿ ಮಾಡಬೇಕು.
ಒಂದು ವೇಳೆ ಮೇಲಿನ ಲಿಂಕ್ ಕೆಲಸ ಮಾಡದಿದ್ದರೆ ಪ್ಲೇ ಸ್ಟೋರ್ ನಲ್ಲಿ ಅಥವಾ ಕ್ಯೂ ಆರ್ ಕೋಡ್ ಬಳಸಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಯಾಪ್ 2026-27 ಡೌನ್ಲೋಡ್ ಮಾಡಿಕೊಳ್ಳಬೇಕು. ಇ ಕೆವೈಸಿಗಾಗಿ ಆಧಾರ್ ಸಂಖ್ಯೆ ನಮೂದಿಸಿ, ಆಧಾರ್ ಗೆ ಜೋಡಣೆಯಾದ ಮೊಬೈಲ್ ಗೆ ಬರುವ ಒಟಿಪಿ ದಾಖಲಿಸಬೇಕು. ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರೀಯಗೊಳಿಸಿದ ನಂತರ ಮತ್ತೆ ಮೊಬೈಲ್ ಓಟಿಪಿ ಮೂಲಕ ಖಚಿತಪಡಿಸಿಕೊಳ್ಳಬೇಕು.
ರೈತರು ಗುರುತಿನ ಸಂಖ್ಯೆ ಎಫ್ಐಡಿಯಲ್ಲಿ ಹಿಂದಿನ ಎಲ್ಲಾ ಪಹಣಿ, ಪಾಲಿಗಾನ್ ಮತ್ತು ಜಿಐಎಸ್ ಮ್ಯಾಪ್ ಮಾಹಿತಿ ದೊರೆಯಲಿದೆ. ಬೆಳೆ ಸಮೀಕ್ಷೆ ಪ್ರಾರಂಭಿಸಲು ಸರ್ವೆ ನಂಬರ್ ಆಯ್ಕೆ ಮಾಡಬೇಕು. ಬೆಳೆದ ಬೆಳೆಯ 2 ಚಿತ್ರ ತೆಗೆದು ವಿವರ ಸಮೇತ ಅಪ್ಲೋಡ್ ಮಾಡಬೇಕು.
ಯಾಪ್ ನ್ನು ಒಮ್ಮೆ ಲೋಡ್ ಮಾಡಿ ಯಾಕ್ಟಿವೇಟ್ ಮಾಡಿಕೊಂಡರೆ ಪ್ರತಿ ಋತುವಿನಲ್ಲೂ ಅಪ್ಲೇಡ್ ಮಾಡಿಕೊಳ್ಳಬಹುದು.
ರೈತರು ಈ ಯೋಜನೆಯ ಸದುಪಯೋಗ ಪಡೆದು ನಿಗದಿತ ಸಮಯದೊಳಗೆ ಬೆಳೆ ವಿವ ಅಪ್ಲೋಡ್ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಪ್ರೀ ಸಂಖ್ಯೆ 18004253553 ಗೆ ಸಂಪರ್ಕಿಸಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಸಾಂಖ್ಯೀಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಮುಂಗಾರು ಬೆಳೆ ವಿಮೆ ನೋಂದಣಿ ಆರಂಭ
2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಶಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
ಎಲ್ಲಾ ಅರ್ಹ ರೈತರು (ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು) ನಿಗದಿತ ಅವಧಿಯೊಳಗೆ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು.
ಇದನ್ನೂ ಓದಿ ಬೆಳೆ ವಿಮೆ ಹೆಕ್ಟೇರಿಗೆ ಎಷ್ಟು ಕಟ್ಟಿದರೆ ಎಷ್ಟು ಜಮೆಯಾಗುತ್ತದೆ ? ಇಲ್ಲಿದೆ ಮಾಹಿತಿ
ಜೋಳ, ಸೂರ್ಯಕಾಂತಿ, ಹತ್ತಿ, ಕೆಂಪು ಮೆಣಸಿನ ಕಾಯಿ, ಈರುಳ್ಳಿ, ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ಸಜ್ಜೆ, ನೆಲಗಡಲೆ, ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶವಿದೆ.
ಕೃಷಿ ಇಲಾಖೆಯ ನಿಯಮಾವಳಿಗಳ ಪ್ರಕಾರ ಭತ್ತ (ನೀರಾವರಿ) ಮುಸುಕಿನ ಜೋಳ ಗ್ರಾಪಂ ಮಟ್ಟದ ಬೆಳೆ, ಇನ್ನುಳಿದ ಬೆಳೆಗಳನ್ನು ಹೋಬಳಿ ಮಟ್ಟದ ಬೆಳೆಗಳೆಂದು ಪರಿಗಣಿಸಲಾಗಿದೆ.
ಅರ್ಹ ರೈತರು ತಮ್ಮ ಹತ್ತಿರದ ಯಾವದೇ ಸ್ಥಳೀಯ ಬ್ಯಾಂಕುಗಳು, ಸಾರ್ವಜನಿಕ ಸೇವಾ ಕೇಂದ್ರಗಳು, ಗ್ರಾಪಂ ಮಟ್ಟದಲ್ಲಿ ಹೊಸದಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ವಿಮೆ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಶಿ ನಿರ್ದೇಶಕರ ಕಟೇರಿಗೆ ಸಂಪರ್ಕಿಸಲು ಕೋರಲಾಗಿದೆ.





