ಜೀವಜಲ ಯೋಜನೆಯಡಿ 3.50 ಲಕ್ಷವರೆಗೆ ಸಬ್ಸಿಡಿ

Written by By: janajagran

Updated on:

3 lakh subsidy under Jeevajal  ಜೀವಜಲ ಯೋಜನೆಯಡಿಯಲ್ಲಿ ರೈತರು ತಮ್ಮ ಜಮೀನುಗಳಲ್ಲಿ ವೈಯಕ್ತಿಕವಾಗಿ  ಕೊಳವೆ ಬಾವಿ ಕೊರೆಯಲು 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಗಂಗಾ ಕಲ್ಯಾಣ ಯೋಜನೆಯಂತೆ ಜೀವಜಲ ಯೋಜನೆಯಡಿಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗದ ವತಿಯಿಂದ ನೀರಾವರಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಪ್ರ ವರ್ಗ-3 ಬಿ ಯಲ್ಲಿ ಒಳಪಡುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

3 lakh subsidy under Jeevajal  ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹತೆ

ಜೀವ ಜಲಯ ಯೋಜನೆಯಡಿಯಲ್ಲಿ ಸೌಲಭ್ಯಪಡೆಯಲಿಚ್ಚಿಸುವ ರೈತರು ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.   ವಾರ್ಷಿಕ ವರಮಾನ 40, ಸಾವಿರ ರೂಪಾಯಿಗಳ ಮಿತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55   ವರ್ಷಗಳ ಮಿತಿಯಲ್ಲಿರಬೇಕು.

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1ಎಕರೆ ಜಮೀನು ಹೊಂದಿರಬೇಕು.

ಮೇಲೆ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ 2.50 ಲಕ್ಷ ರೂಪಾಯಿ ನಿಗದಿಪಡಿಸಲಾಗಿದ್ದು, ಇದರಲ್ಲಿ 2 ಲಕ್ಷ ರೂಪಾಯಿ ಸಹಾಯಧನ ಹಾಗೂ 50 ಸಾವಿರ ರೂಪಾಯಿ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚ4 ಲಕ್ಷ ರೂಪಾಯಿ ನಿಗದಿಪಡಿಸಲಾಗಿದ್ದು, ಇದರಲ್ಲಿ 3.50 ಲಕ್ಷ ಸಹಾಯಧನ ಹಾಗೂ 50 ಸಾವಿರ ರೂಪಾಯಿ ಶೇ. 4 ರ ಬಡ್ಡಿದರಲ್ಲಿಸಾಲ ನೀಡಲಾಗುವುದು. ನಿಗದಿತ ಘಟಕ ವೆಚ್ಚದಿಂದ ಜೀವಜಲ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಜೀವಜಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲಿಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಫಲಾನುಫೇಕ್ಷಿಗಳು ನಿಗದ ವೆಬ್ ಸೈಟ್ https://dbcdc.karnataka.gov.in ನಲ್ಲಿ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರಕಚೇರಿಯ ದೂರವಾಣಿ ಸಂಖ್ಯೆ 080 22865522 ಅಥವಾ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳನ್ನು ವೆಬ್ ಸೈಟ್ನನಲ್ಲಿ ನೀಡಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರೀಲ್ 25 ರೊಳಗಾಗಿ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಡಿ. ದೇವರಾಜ ಅರಸು ನಿಗಮ ನಿಯಮಿತ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.

ಇದನ್ನೂ ಓದಿ :ಜಮೀನುಗಳ ಸರ್ವೆ ನಂಬರ್ ಸಹಿತ ಬಂಡಿದಾರಿ, ಹಳ್ಳಕೊಳ್ಳಗಳ ಮ್ಯಾಪ್ ಬೇಕೆ? ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸುವ ರೈತರಿಗೆ ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರಪಡೆದಿರಬೇಕು. ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗು ಅವರ ಕಾಯಂ ವಿಳಾಸ ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ ಕಾರ್ಡ್ ಹೊಂದಿರಬೇಕು.

ಒಂದು ಕುಟುಂಬದಲ್ಲಿಒಬ್ಬರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈಗಾಲೇ ಬೇರೆ ಯಾವುದೇ ನಿಗಮಗಳ ಯೋಜನೆಯಡಿಯಲ್ಲಿ ಅಥವಾ ನಿಗಮದಲ್ಲೇ ಈ ಹಿಂದೆ ಸಾಲ ಸೌಲಭ್ಯ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರು ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ.

Leave a Comment