ಪ್ರತಿ ಜಿಲ್ಲೆಯಲ್ಲೂ ಗೋ ಶಾಲೆ ಘೋಷಣೆ

Written by By: janajagran

Updated on:

ಪ್ರತಿ ಜಿಲ್ಲೆಗೆ ಒಂದರಂತೆ ಗೋ ಶಾಲೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು  ಘೋಷಣೆ ಮಾಡಿದ್ದಾರೆ.

ಹೌದು,ಸೋಮವಾರ ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿಗಳಿಗಳು ಈ ಘೋಷಣೆ ಮಾಡಿದ್ದಾರೆ.

ಕಳೆದೆರಡು ತಿಂಗಳ ಹಿಂದೆ ಪ್ರತಿಪಕ್ಷಗಳ ವಿರೋಧದ ನಡುವೆಯೂ ಗೋ ಹತ್ಯಾ ನಿಷೇಧ ವಿಧೇಯಕವನ್ನು ಮಂಡಿಸಿ ಉಭಯ ಸದನಗಳಲ್ಲೂ ಅಂಗೀಕಾರ ಪಡೆದ ಸರ್ಕಾರ, ಇದೀಗ ಗೋವುಗಳ ಸಂರಕ್ಷಣೆ ನಿಟ್ಟಿನಲ್ಲಿ ಗೋ ಶಾಲೆ ಸ್ಥಾಪನೆ ಗೆ ಮುಂದಾಗಿದೆ. ವಯಸ್ಸಾದ ಗೋವುಗಳ ಪಾಲನೆ, ಪೋಷಣೆ ಹಿನ್ನೆಲೆಯಲ್ಲಿ ಈ ಗೋ ಶಾಲೆಗಳು ನೆರವಿಗೆ ಬರಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಳೆಹಾನಿ ಪರಿಹಾರ ಯಾವ ರೈತರಿಗೆ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ

ಈ ಕುರಿತಾಗಿ ಬಜೆಟ್‌ನಲ್ಲಿ ವಿವರಣೆ ನೀಡಿರುವ ಸಿಎಂ ಯಡಿಯೂರಪ್ಪ, ಹೊರ ರಾಜ್ಯದ ದೇಶಿ ತಳಿಗಳಾದ ಗಿರ್, ಸಾಹಿವಾಲ್, ಒಂಗೋಲ್, ಥಾರ್ ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸಲು ಯೋಜನೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕುರಿ ಮೇಕೆ ಸಾಕಾಣಿಕೆ ಘಟಕ, ಮೀನು ಸಾಕಾಣಿಕೆಗೆ ಶೇ. 50 ರ ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಪಶುಪಾಲನೆ ಇಲಾಖೆ, ಮೀನುಗಾರಿಕೆ ಇಲಾಖೆಗಳ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕುರಿ ಮೇಕೆ ಸಾಕಾಣಿಕೆ ಘಟಕ, ಕಾವ್ ಮ್ಯಾಟ್, ಮೀನುಸಾಕಾಣಿಕೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖಾ ವತಿಯಿಂದ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌ ಮ್ಯಾಟ್ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾಗುವ ಪ್ರತಿ ಭಲಾನುಭವಿಗೆ ಎರಡು ಕೌ ಮ್ಯಾಟ್ ವಿತರಣೆ ಮಾಡಲಾಗುವುದು. ಘಟಕದ ವೆಚ್ಚ 2799 ರೂಪಾಯಿ ಇದ್ದು, ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಅಂದರೆ 1399 ರೂಪಾಯಿ ಸಬ್ಸಿಡಿ ನೀಡಲಾಗುವುದು.  ರೈತರು ಶೇ. 50 ರಷ್ಟು ಅಂದರೆ 1399 ರೂಪಾಯಿ ಫಲಾನುಭವಿ ವಂತಿಗೆ ಪಾವತಿಸಬೇಕು.

ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ, ಹಾನಗಲ್ಲ, ರಾಣಿಬೆನ್ನೂರ ಹಾಗೂ ಸವಣೂರು ತಾಲೂಕಿಗೆ ತಲಾ 50, ಹಿರೇಕೇರೂರ ಹಾಗೂ ರಟ್ಟಿಹಳ್ಳಿ ತಾಲೂಕಿಗೆ ತಲಾ 60 ಹಾಗೂ ಶಿಗ್ಗಾವಿ ತಾಲೂಕಿಗೆ 100 ಮ್ಯಾಟ್ ವಿತರಣೆ ಗುರಿ ನಿಗದಿಪಡಿಸಲಾಗಿದೆ.

ಅರ್ಜಿ ನಮೂನೆಗಳನ್ನು ಹತ್ತಿರದ ಪಶುವೈದ್ಯ ಸಂಸ್ಥೆಗಳಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಆಸಕ್ತ ರೈತರು ಆಧಾರ್ ಕಾರ್ಡ್, ಸ್ಥಳೀಯ ಪಶು ವೈದ್ಯ ಸಂಸ್ಥೆಗಳಿಂದ ಪಡೆದ ಜಾನುವಾರು ದೃಢೀಕರಣ ಪತ್ರ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮಾತ್ರ) ಪತ್ರಗಳ ನಕಲು ಪ್ರತಿಗಳೊಂದಿಗೆ ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆಗಸ್ಟ್ 22 ರೊಳಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳಿಂದ ಸಂಪರ್ಕಿಸಲು ಮತ್ತು ಜಿಲ್ಲೆಯ ರೈತರು ಈ ಯೋಜನೆಯ ಸದುಪಪಯೋಗ ಪಡೆದುಕೊಳ್ಳುವಂತೆ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುರಿ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಕುರಿ ಮೇಕೆ ಘಟಕಗಳ ಸ್ಥಾಪನೆಗೆ ಚಿಕ್ಕಮಗಳೂರು ಜಿಲ್ಲೆಯ ರೈತರಿಂದ  ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿನ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಪರಿಶಿಷ್ಟ ಜಾತಿ, ಪಂಗಡಗಳ ಮಹಿಳಾ ಸದಸ್ಯರಿಗೆ, ಮಹಿಳಾ ಸದಸ್ಯರು, ಇಲ್ಲದಿದ್ದಲ್ಲಿ 18-60 ವರ್ಷ ವಯೋಮಿತಿಯ ಪುರುಷ ಸದಸ್ಯರು ಆಗಸ್ಟ್ 25 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಸಿದ್ದಾರೆ.

Leave a Comment