FID ಆಗಿರುವ ಈ ರೈತರಿಗೆ ಮಾತ್ರ ಬೆಳೆ ಹಾನಿ ಪರಿಹಾರ ಜಮೆ

Written by Ramlinganna

Published on:

FID ಹೊಂದಿದ ರೈತರಿಗೆ ಮಾತ್ರ ಬೆಳೆ ಹಾನಿ ಪರಿಹಾರ ಹಣ ಜಮಯಾಗಲಿದೆ. ಹೌದು,

ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ

ಕೃಷಿ ಇಲಾಖೆಯಿಂದ ರೈತರಿಗೆ ಎಫ್ಐಡಿ ಮಾಡಲು ಅವಕಾಶ ನೀಡಲಾಗಿತ್ತು. ಕೆಲವು ರೈತರು ಆನ್ಲೈನ್ ಮೂಲಕವೂ ಎಫ್ಐಡಿ ಮಾಡಿದ್ದಾರೆ. ಆದರೆ ಇನ್ನೂ ಬಹಳಷ್ಟು ರೈತರು ಎಫ್ಐಡಿ ಮಾಡಿಸುವುದಿದೆ. ಹಾಗಾಗಿ ಯಾರು ಎಫ್ಐಡಿ ಮಾಡಿಸಿಲ್ಲವೋ ಅಂತಹವರು ಕೂಡಲೇ ಎಫ್ಐಡಿಮಾಡಿಕೊಳ್ಳಬಹುದು. ಇಲ್ಲದಿದ್ದರೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುವುದಿಲ್ಲ.

ರಾಜ್ಯದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ  ಹಾಗೂ ನೆರೆ ಹಾವಳಿಯಿಂದಾಗಿ ಬೆಳೆ ಹಾನಿಯಾಗಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳೊಳಗೆ ಬೆಳೆ ಹಾನಿಯಾದ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಈಗಾಗಲೇ ಜಂಟಿ ಸಮೀಕ್ಷೆ ಮುಗಿದಿರುವ 9 ಜಿಲ್ಲೆಗಳಲ್ಲಿನ ಸುಮಾರು 5.29 ಲಕ್ಷ ಹೆಕ್ಟೇರ್ ಬೆಳೆ ಹಾನಿಗೆ ಮೊದಲ ಹಂತದ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಯಾವ ಬೆಳೆಗೆ ಎಷ್ಟು ಬೆಳೆ ಹಾನಿ ಪರಿಹಾರ ನೀಡಲಾಗುವುದು

ಮಳೆಯಾಶ್ರೀತ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 17 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ನೀರಾವರಿ ಪ್ರದೇಶದ ಬೆಳೆ ಹಾನಿಯಾಗಿದ್ದರೆ ಪ್ರತಿ ಹೆಕ್ಟೇರಿಗೆ 25500 ರೂಪಾಯಿ ಪರಿಹಾರ ನೀಡಲಾಗುವುದು. ಅದೇ ರೀತಿ ದೀರ್ಘಕಾಲಿ ಬೆಳೆ ಹಾನಿಯಾಗಿದ್ದರೆ ಪ್ರತಿ ಹೆಕ್ಟೇರಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.

ಈವರೆಗೆ ಎಫ್ಐಡಿ ಮಾಡಿಸದೆ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ (CSC Centre) ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೊಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್ಐಡಿ ಮಾಡಿಸಬೇಕು.ಇದಕ್ಕೆ ತಪ್ಪಿದ್ದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

FID ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಿ

ಯಾವ ಯಾವ ರೈತರ ಎಫ್ಐಡಿ ಆಗಿದೆ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿದ ನಂತರ search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ FruitsID ಕಾಣಿಸುತ್ತದೆ. ಈ ಐಡಿ ಇದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗಲಿದೆ.

ಒಂದು ವೇಳೆ ಫ್ರೂಟ್ಸ್ ಐಡಿ ಆಗಿಲ್ಲವಾದಲ್ಲಿ ನೀವು ಈ

https://fruits.karnataka.gov.in/OnlineUserLogin.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ Citizen Registration ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮಆಧಾರ್ ಕಾರ್ಡಿನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು.ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು.  ಐ ಅಗ್ರಿ ಬಾಕ್ಸ್ ಆಯ್ಕೆ ಮಾಡಿಕೊಂಡು ನಲ್ಲಿ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ನಿಮಗೆ ಎಫ್ಐಡಿ ನಂಬರ್ ಸಿಗಲಿದೆ.

ಇದನ್ನೂ ಓದಿ ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಇಲ್ಲೆ ಚೆಕ್ ಮಾಡಿ

ಒಂದು ವೇಳೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಿಎಫ್ಐಡಿ ಪಡೆಬಹುದು.

ಕೀಟನಾಶಕ ಸಿಂಪರಣೆ ಮಾಡುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು

ರೈತರು ಬೆಳೆಗಳಿಗೆ ಕೀಟನಾಶಕ, ಶಿಲಿಂದ್ರನಾಶಕ ಸಿಂಪರಣೆ ಮಾಡುವಾಗ, ಅನುಸರಿಸಬೇಕಾದ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು. ಕೀಟನಾಶಕ ಸಿಂಪರಣೆ ಮಾಡುವಾಗ ಕೈಗಳಿಗೆ ಮಾಸ್ಕ್ ಹಾಗೂ ಗ್ಲೌಸ್ ಗಳನ್ನು ಧರಿಸಬೇಕು. ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಿಂಪರಣೆ ಮಾಡಬಾರದು. ಸಿಂಪರಣಾ ನಾಝಲ್ ರಂದ್ರ ಕಟ್ಟಿದಾಗ ಬಾಯಿಂದ ಊದಬಾರದು. ಪೀಡೆನಾಶಕವನ್ನು ಮಕ್ಕಳು ಮಿಶ್ರಣ ಮಾಡದಂತೆ ತಡೆಯಬೇಕು. ಕೀಟನಾಶಕ ಸಿಂಪರಣೆ ಸಮಯದಲ್ಲಿ ತಿನ್ನುವುದಾಗಲಿ, ಕುಡಿಯುವುದಾಗಲಿ ಅಥವಾ ಧೂಮ್ರಪಾನ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.

Leave a Comment