ರೈತರ ಕಬ್ಬು ಮಾರಾಟಕ್ಕೆ ಬರಲಿದೆ ಆ್ಯಪ್ – ಇಲ್ಲಿದೆ ಮಾಹಿತಿ

Written by By: janajagran

Updated on:

App for harvest and sell sugarcane ಕಬ್ಬು ಬೆಳೆಗಾರರಿಗೆ ಸಂತಸದ ಸುದ್ದಿ. ಇನ್ನು ಮುಂದೆ ಕಬ್ಬು ಮಾರಾಟಕ್ಕೆ ಆ್ಯಪ್ ಬರಲಿದೆ. ಹೌದು, ಕಬ್ಬು ಸಕಾಲದಲ್ಲಿ ಮತ್ತು ಎಲ್ಲಾ ರೈತರ ಕಬ್ಬು ಮಾರಾಟವಾಗುವಂತೆ ವಿನೂತನವಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಬೆಳೆಯಲಾಗುವ ಕಬ್ಬು ಸಕಾಲದಲ್ಲಿ ಮತ್ತು ಎಲ್ಲಾ ರೈತರ ಕಬ್ಬು ಮಾರಾಟವಾಗುವಂತೆ ದೀರ್ಘಾವಧಿ ವ್ಯವಸ್ಥೆಯಾಗಿ ಜಿಲ್ಲಾಡಳಿತದಿಂದ ವಿನೂತನವಾಗಿ ಆ್ಯಪ್ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕಬ್ಬು ಖರೀದಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಪ್ರಯತ್ನ ಮಾಡಲು ಮುಂದಾಗಿದ್ದೇವೆ. ಮೂರು ತಿಂಗಳಲ್ಲಿ ಆ್ಯಪ್ ಅಭಿವೃದ್ಧಿಪಡಿಸಿ ಮುಂದಿನ ವರ್ಷದಿಂದ ಇದನ್ನು ಜಾರಿಗೆ ತರಲಾಗುವುದು ಎಂದರು.

App for harvest and sell sugarcane ರೈತರ ಕಬ್ಬು ಮಾರಾಟಕ್ಕೆ ಬರಲಿದೆ ಆ್ಯಪ್

ರೈತರು ಆ್ಯಪ್ ನಲ್ಲಿಯೇ ತಮ್ಮ ಜಮೀನಿನ ಸರ್ವೆ ಸಂಖ್ಯೆ ಜೊತೆಗೆ ಕಬ್ಬು ಕಟಾವಿಗೆ ವೈಯಕ್ತಿಕ ವಿವರಗಳೊಂದಿಗೆ ಮನವಿ ಸಲ್ಲಿಸಬೇಕು.ಈ ಮಾಹಿತಿ ಸಕ್ಕರೆ ಕಾರ್ಖಾನೆ ಮತ್ತು ಜಿಲ್ಲಾಡಳಿತಕ್ಕೆ ಏಕಕಾಲದಲ್ಲಿ ರವಾನೆಯಾಗಲಿದೆ. ಅದರಂತೆ ಸಕ್ಕರೆ ಕಾರ್ಖಾನೆಯವರು ಕ್ಷೇತ್ರಕ್ಕೆ ಹೋಗಿ ಕಟಾವು ಮಾಡಿಕೊಳ್ಳುತ್ತಾರೆ. ಈ ರೀತಿಯ ತಂತ್ರಾಂಶ ಕಾರ್ಯನಿರ್ವಹಿಸಲಿದ್ದು, ಇದರ ಮೇಲೆ ಜಿಲ್ಲಾಡಳಿತ ನಿಗವಹಿಸಲಿದೆ ಎಂದರು.

ಪ್ರಸ್ತುತ ಕಲಬುರಗಿ ಜಿಲ್ಲೆಯಲ್ಲಿ ಆಳಂದ ತಾಲೂಕಿನ ಭೂಸನೂರ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಬಾಕಿ ಉಳಿದಂತಹ 4239 ಎಕರೆ ಪ್ರದೇಶದಲ್ಲಿ ಬೆಳೆಯಲಾದ ಕಬ್ಬನ್ನುಕಟಾವು ಮಾಡಲು ಗ್ರಾಮವಾರು ದಿನಾಂಕ ನಿಗದಿ ಮಾಡಿದೆ. ಏಪ್ರೀಲ್ 10ರೊಳಗೆ  ಕಾರ್ಖಾನೆ ವ್ಯಾಪ್ತಿಯ ಎಲ್ಲಾ ಕಬ್ಬು ಕಟಾವು ಮಾಡುವಂತೆ ಪ್ರಾಯೋಗಿಕ ಯೋಜನೆಯಾಗಿ ಎನ್ಎಸ್ಎಲ್ ಕಾರ್ಖಾನೆಯ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ.ಇದು ಯಶಕಂಡಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿಯೂ ಜಾರಿಗೆ ತರಲಾಗುವುದು ಎಂದರು.

ನಿಂಬರ್ಗಾ ವಿಭಾಗದಲ್ಲಿ 550 ಎಕರೆ, ಆಳಂದ ವಿಭಾಗದಲ್ಲಿ 410 ಎಕರೆ, ಕಲಬುರಗಿ ವಿಭಾಗದಲ್ಲಿ 1205 ಎಕರೆ, ಚೌಡಾಪುರ ವಿಭಾಗದಲ್ಲಿ 1458, ಅಫಜಲ್ಪುರ ವಿಭಾಗದಲ್ಲಿ 184 ಎಕರೆ, ಕರಜಗಿ ವಿಭಾಗದಲ್ಲಿ 130 ಎಕರೆ ಹಾಗೂ ಕಡಗಂಚಿ ವಿಭಾಗದಲ್ಲಿ 302 ಸೇರಿ ಒಟ್ಟು 4239 ಎಕರೆ ಪ್ರದೇಶಗಳಿಂದ ಅಂದಾಜಿ 1,24,768 ಮೆಟ್ರಿಕ್ ಟನ್ ಬಾಕಿ ಕಬ್ಬು  ಕಟಾವು ಮಾಡಲು ಸಮಯ ನಿಗದಿಪಡಿಸಲಾಗಿದೆ ಎಂದರು.

ಇದನ್ನೂಓದಿ: ರೈತರಿಗೆ ಬೆಳೆ ವಿಮೆಯ ಸ್ಟೇಟಸ್, ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕೆಂಬ ಮಾಹಿತಿ ನೋಡಬೇಕೆ? ಇಲ್ಲಿದೆ ಮಾಹಿತಿ

ರೈತರಿಂದ ಕಬ್ಬು ಕಟಾವು ಸಮಸ್ಯೆಗಳನ್ನು ಆಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ.ರೈತರು ದೂರವಾಣಿ ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು. ಇದರಿಂದ ಸರಿಯಾದ ಸಮಯದಲ್ಲಿ ರೈತರ ಕಬ್ಬು ಕಟಾವಾಗಲು ಅನುಕೂಲವಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಸದ್ಯ ಕಬ್ಬು ಬೆಳೆಗಾರರು ಅನೇಕ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕಬ್ಬು ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಕಬ್ಬು ಖರೀದಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತರಲಾಗುತ್ತಿರುವ ಆ್ಯಪ್ ಜಾರಿಯಾದರೆ ಲಕ್ಷಾಂತರ ರೈತರಿಗೆ ಅನುಕೂಲವಾಗಿಲಿದೆ. ವಿಶೇಷವಾಗಿ ಕಬ್ಬುಬೆಳೆಯುವ ರೈತರಿಗೆ ಇದರಿಂದ ಅನುಕೂಲವಾಗಲಿದೆ.

ಜಿಲ್ಲೆಯಾದ್ಯಂತ ಸಾಮಾಜಿಕ ಪಿಂಚಣಿ ಕುರಿತು ಸಮಸ್ಯೆ ಮತ್ತು ದೂರಗಳನ್ನು  ಆಲಿಸಲು ಟೋಲ್ ಫ್ರೀ ಸಹಾಯವಾಣಿ ಸ್ಥಾಪಿಸಲಾಗುತ್ತದೆ. ದೂರು ಬಂದ 72 ಗಂಟೆಯಲ್ಲಿಯೇ ಸಮಸ್ಯೆ ಪರಿಹಾರಕ್ಕೆ ಒದಗಿಸುವ ವಿನೂತನ ವ್ಯವಸ್ಥೆ ಜಿಲ್ಲಾಡಳಿತ ಜಾರಿಗೆ ತರುತ್ತಿದೆ ಎಂದರು.

ಇದನ್ನೂ ಓದಿ : ಜಮೀನುಗಳ ಸರ್ವೆ ನಂಬರ್ ಸಹಿತ ಬಂಡಿದಾರಿ, ಹಳ್ಳಕೊಳ್ಳಗಳ ಮ್ಯಾಪ್ ಬೇಕೆ? ಇಲ್ಲಿದೆ ಮಾಹಿತಿ

Leave a Comment