Bara parihara beneficiary listನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Published on:

Bara parihara beneficiary list ಬಿಡುಗಡೆಯಾಗಿದೆ. ಈ ಲಿಸ್ಟ್ ನಲ್ಲಿ ಯಾರ ಯಾರ ಹೆಸರಿದೆಯೋ ಅವರಿಗೆ ಬರ ಪರಿಹಾರ ಹಣ ಬಿಡುಗಡೆಯಾಗಿದೆ. ಅತೀ ಶೀಘ್ರದಲ್ಲಿ ಎಲ್ಲಾ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ. ಹಾಗಾದರೆ ಬರ ಪರಿಹಾರ ಲಿಸ್ಟ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ? ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

ಈಗಾಗಲೇ ರಾಜ್ಯದ ಬಹುತೇಕ ತಾಲೂಕುಗಳ ರೈತರಿಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಬರ ಪರಿಹಾರ ಹಣ ತಾಂತ್ರಿಕ ತೊಂದರೆಯಿಂದ ತಡೆಹಿಡಿಯಲಾಗಿದೆಯೋ ಅಥವಾ ನಿಮ್ಮ ಆ್ಯಕ್ಟಿವ್ ಇಲ್ಲದ ಬ್ಯಾಂಕ್ ಖಾತೆಗೆ ಜಮೆಯಾಗಿದೆಯೇ ಎಂಬುದನ್ನೇಲ್ಲಾ ಇಲ್ಲೇ ಚೆಕ್ ಮಾಡಬಹುದು.

Bara parihara beneficiary list ನಲ್ಲಿ ಹೆಸರು ಚೆಕ್ ಮಾಡುವುದು ಹೇಗೆ?

ಬರ ಪರಿಹಾರ ಲಿಸ್ಟ್ ನಲ್ಲಿ ತಮ್ಮ ಹೆಸರು ಇರುವುದನ್ನು ಚೆಕ್ ಮಾಡಲು ಈ

https://parihara.karnataka.gov.in/service87/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಪರಿಹಾರ ಬೆನಿಫಿಶಿಯರಿ ಪೇಮೆಂಟ್ ರಿಪೋರ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಯಾವ ಜಿಲ್ಲೆಯವರಾಗಿದ್ದೀರಿ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮಊರು ಆಯ್ಕೆ ಮಾಡಿಕೊಳ್ಳಬೇಕು.

ಯಾವ ವರ್ಷದ ಬೆಳೆ ಹಾನಿ ಪರಿಹಾರ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ವರ್ಷವನ್ನು select Year ನಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ನಂತರ select Season ನಲ್ಲಿ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು.  Select Calamity  ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಲ್ಲಿ ಯಾರು ಯಾರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಹಾಗೂ ಅವರಿಗೆ ಎಷ್ಟು ಹಣ ಜಮೆಯಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ View Status ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಿಲ್ಲೆ, ಬ್ಯಾಂಕಿನ ಹೆಸರು ಹಾಗೂ ನಿಮಗೆ ಎಷ್ಟು ಹಣ ಜಮೆಯಾಗಿದೆ? ನಿಮ್ಮ ಹೆಸರು ಹಾಗೂ ಪೇಮೆಂಟ್ ಸ್ಟೇಟಸ್ ಕಾಣಿಸುತ್ತದೆ. ಅದರ ಕೆಳಗಡೆ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಬೆಳೆ, ಹಾಗೂ ಎಷ್ಟು ಎಕರೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಯಾವ ಬೆಳೆಗೆ ಎಷ್ಟು ಪರಿಹಾರ ಹಣ ಜಮೆಯಾಗಲಿದೆ?

ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ., ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ. ಅದೇ ರೀತಿ  ಬಹುವಾರ್ಷಿಕ ಬೆಳೆಗೆ 22500 ಪರಿಹಾರ ನಿಗದಿ ಮಾಡಿದೆ. ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.

ಇದನ್ನೂ ಓದಿ :  ಜಮೀನಿಗೆ ಹೋಗಲು ಕಾಲುದಾರಿ ಬಂಡಿದಾರಿ ಇದೆಯೇ? ಇಲ್ಲೇ ಚೆಕ್ ಮಾಡಿ

ತಾತ್ಕಾಲಿಕವಾಗಿ ಬರಗಾಲ ಘೋಷಣೆಯಾದ ತಾಲೂಕುಗಳ ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದು ತಮಗೆಲ್ಲಾಗೊತ್ತಿದ್ದ ಸಂಗತಿ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡರವರು ಸಹ ಒಟ್ಟು ಎಷ್ಟು ರೈತರಿಗೆ ಎಷ್ಟು ಹಣ ಜಮೆ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದರು.

ಯಾವ ಯಾವ ರೈತರಿಗೆ ಇನ್ನೂ ಬರಗಾಲ ಪರಿಹಾರ ಹಣ ಜಮೆಯಾಗಿಲ್ಲವೋ ಅವರು ಒಮ್ಮೆ ಸ್ಟೇಟಸ್ ಚೆಕ್ ಮಾಡಿ ಪರಿಶೀಲಿಸಬಹುದು.

Leave a Comment