ಏಪ್ರೀಲ್ 29 ರೊಳಗೆ ಬರ ಪರಿಹಾರ ಬಿಡುಗಡೆ-ಸ್ಟೇಟಸ್ ಚೆಕ್ ಮಾಡಿ

Written by Ramlinganna

Published on:

Baragala Parihara beneficiary list :ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದರ್ ಸರ್ಕಾರ ಸುಪ್ರಿಂಕೋರ್ಟ್ ನಲ್ಲಿ ಒಪ್ಪಿಕೊಂಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ  ಅರ್ಜಿಯನ್ನು ಸುಪ್ರಿಂಕೋರ್ಟ್ ನ ನ್ಯಾಯಮೂರ್ತಿ ಬಿ.ಆರ್. ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಏಪ್ರೀಲ್ 29 ರೊಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು.

ರಾಜ್ಯದಲ್ಲಿ 216ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮೊದಲ ಕಂತಿನ ಹಣವನ್ನು ಸಹ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಬಹುತೇಕ ಜಿಲ್ಲೆಗಳಲ್ಲಿ ರೈತರ ಖಾತೆಗೆ ಬರಗಾಲ ಪರಿಹಾರದ ಮೊದಲ ಕಂತು ಜಮೆಯಾಗಿದೆ. ಇನ್ನೂ ಯಾರ ಯಾರ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡೋಣ.

ಯಾರ ಖಾತೆಗೆ ಬರಗಾಲ ಪರಿಹಾರದ ಮೊದಲ ಕಂತು ಜಮೆಯಾಗಿಲ್ಲವೋ ಅವರು ಆತಂಕ ಪಡಬೇಕಿಲ್ಲ, ಅತೀ ಶೀಘ್ರದಲ್ಲಿ ಜಮೆಯಾಗದ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು.

Baragala Parihara beneficiary list ನಲ್ಲಿ ನಿಮ್ಮಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ಬರಗಾಲ ಪರಿಹಾರ ಹಣ ಯಾರು ಯಾರು ಪಡೆಯಲಿದ್ದಾರೆ ಆ ಪಟ್ಟಿಯಲ್ಲಿ ಯಾವ ಯಾವ ರೈತರ ಹೆಸರಿದೆ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವೀಕ್ಷಿಸು ಮೇಲೆ ಕ್ಲಿಕ್ ಮಾಡಿದರೆ ಸಾಕು ಯಾರು ಯಾರು ಬರಗಾಲ ಪರಿಹಾರ ಹಣ ಪಡೆಯಬಲ್ಲರೋ ಅವರ ಹೆಸರು ಕಾಣಿಸುತ್ತದೆ.

Bara Parihara ನಿಮ್ಮ ಖಾತೆಗೆ ಜಮೆಯಾಗಿದೆಯೇ? ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.ಅಲ್ಲಿ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಡ್ರಾಟ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.

ಬೆಳೆ ಹಾನಿ ಪರಿಹಾರ ಪಾವತಸಲು ಅನುಮತಿ

ರಾಜ್ಯ ಸರ್ಕಾರದ ವತಿಯಿಂದ 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂಪಾಯಿಯವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿ ನೀಡಿದೆ.

ಇದನ್ನೂ ಓದಿ : ಗ್ರಾಪಂ ವ್ಯಾಪ್ತಿಯ ಈ ಆಸ್ತಿಗಳ ದಾಖಲೆ ಹೀಗೆ ಡೌನ್ಲೋಡ್ ಮಾಡಿ

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು

Leave a Comment