ಜಾತಿ ಪ್ರಮಾಣ ಪತ್ರ ಶಾಶ್ವತ ನಿವಾಸ ಪತ್ರ ಈಗ ಉಚಿತವಾಗಿ ಸಿಗಲಿದೆ

Written by Ramlinganna

Published on:

Caste resident certificate free : ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಜಾತಿ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಲಾಗಿದೆ.

ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಗೆ ಸೇರಿಸಲು ಅಗತ್ಯವಿರುವ 11 ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣ ಪತ್ರದ ಜೊತೆಗೆ ಆಯಾ ಜನರ ಜಾತಿ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುವ ಐತಿಹಾಸಿಕ ಸೇವೆಗ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಹೌದು, ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರರವರು ಜಂಟಿಯಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಯಿತು.

ದೇಶದಲ್ಲಿಯೇ ಮೊದಲ ಬಾರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಮತದಾರರ ಪಟ್ಟಿ ಪರಿಷ್ಕರಣೆಗೆ ಇದು ವರದಾನವಾಗಲಿದೆ.ಇನ್ನೂ ಮುಂದೆ ಜನಸಾಮಾನ್ಯರು ದಾಖಲೆಗಳಿಗೆ ಪರದಾಡುವ ಪ್ರಮೇಯ ಬರುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಬದುಕು ಕಟ್ಟಿಕೊಳ್ಳುವ ಪ್ರತಿಯೊಬ್ಬರಿಗೂ ಮೂಲಸೌಕರ್ಯ  ಒದಗಿಸಿಕೊಡುವ ಅವರ ಹಕ್ಕುಗಳನ್ನು ಸಂರಕ್ಷಿಸುವಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ.

ಇದೇ ಸಂದರ್ಭದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ಸೈಟ್ ಹಾಗೂ ವ್ಯಾಟ್ಸ್ ಯಾಪ್ ಸೇವೆಗೆ ಚಾಲನೆ ನೀಡಲಾಯಿತು. ರಾಜ್ಯದ ಜನರಿಗೆ  ರಾಜ್ಯ ಸರ್ಕಾರವು ಈಗಾಗಲೇ ಪಂಚ ಗ್ರಾಯೆಂಟಿಗಳ ಜೊತೆಗ ಭೂ ಗ್ಯಾರಂಟಿ ಯೋಜನೆಯನ್ನು ನೀಡುತ್ತಿದೆ. ಈಘ ಅವುಗಳ ಸಾಲಿಗೆ ಶಾಶ್ವತ ನಿವಾಸ ದೃಢೀಕರಣ ಪತ್ರ ಕೂಡ ಸೇರಿದೆ.

Caste resident certificate free ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು ?

ಅರ್ಜಿಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ ಸೇವಾ ಕೇಂದ್ರಗಳಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಾಡಕಚೇರಿ, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ವೆಬ್ಸೈಟ್ ಲಿಂಕ್ಗಳ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ ಪ್ರಮಾಣ ಪತ್ರ ಪಡೆಯಬಹುದು.

ಪಿಆರ್.ಸಿ

https://ajsk.karnataka.gov.in/nk5_online/login_public

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕಾಗಿ

https://nadakacheri.karnataka.gov.in/AJSKCertificates

ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಏಳು ದಿನಗಳಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ದೊರೆಯಲಿದೆ.

ಅರ್ಜಿ ಸಲ್ಲಿಸಿದ 21 ದಿನಗಳ ಒಳಗೆ ಪಿಆರ್.ಸಿ ಲಭ್ಯವಾಗಲಿದೆ.

ದೂರಿಗೆ ಸಕ್ಷಮ ಪ್ರಾಧಿಕಾರ

ಯಾವುದಾದರೂ ತೊಂದರೆ ಅಥವಾ ದೂರುಗಳು ಬಂದರೆ ಪರಿಶೀಲಿಸಲು ಸಕ್ಷಮ ಪ್ರಾಧಿಕಾರದ ತಹಶೀಲ್ದಾರ, ಉಪ ತಹಶೀಲ್ದಾರ್ ಹಾಗೂ ವಿಭಾಗಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಬಹುದು ದೂರು ಆಧರಿಸಿ ಮರುಪರಿಶೀಲಿಸುವ ಅವಕಾಶವನ್ನು ಜಿಲ್ಲಾಧಿಕಾರಿಗಳಿಗೆ ಕಲ್ಪಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಐದು ಗ್ಯಾರೆಂಟಿಗಳ ಜತೆ ಭೂಮಿ ಗ್ಯಾರೆಂಟಿ ಕೂಡ ನೀಡಲಾಗುತ್ತಿದೆ. ಜನರು ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸರ್ಟಿಫಿಕೇಟ್ ಪಡೆಯಲು ಬೇಕಾಗುವ ಅರ್ಹತೆಗಳೇನು ?

ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಜಿದಾರರು ಕರ್ನಾಟಕದಲ್ಲಿ ಜನಿಸಿರಬೇಕು.

ಇದನ್ನೂ ಓದಿ ಬೆಳೆ ವಿಮೆಗೆ ಯಾವ ದಾಖಲೆ ಬೇಕು? ಎಲ್ಲಿ ಮಾಡಬೇಕು ? ಇಲ್ದಿದೆ ಮಾಹಿತಿ

ಸಾಮಾನ್ಯ ಅರ್ಜಿದಾರರ ಪಾಲಕರು ಕನಿಷ್ಠ 10 ವರ್ಷ ರಾಜ್ಯದಲ್ಲಿ ವಾಸವಿರಬೇಕು.

ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷ ವ್ಯಾಸಂಗ ಮಾಡಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬ ರಾಜ್ಯದಲ್ಲಿ ವಸತಿ ಅಥವಾ ಇತರೆ ಸ್ಥಿರಾಸ್ತಿಯ ಮಾಲೀಕತ್ವ ಹೊಂದಿರಬೇಕು. ವಿವಾಹಿತ ಅರ್ಜಿದಾರರು ರಾಜ್ಯದಲ್ಲಿ ವಾಸವಿರುವ ವ್ಯಕ್ತಿಯನ್ನು ವಿವಾಹವಾಗಿದ್ದು, ಇಲ್ಲೇ ವಾಸವಿರಬೇಕು. ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರ ಅಥವಾ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಿರಬೇಕು.

Leave a Comment