ಯಾವ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಬೇಕು?

Written by Ramlinganna

Updated on:

Check your crop insurance last date ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಯಾವ ಬೆಳೆಗೆ ಯಾವ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಬೇಕೆಂಬುದನ್ನು ಈಗ ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ಈಗ ಕೊನೆಯ ದಿನಾಂಕ ಯಾವುದು? ಯಾವ ದಿನಾಂಕದೊಳಗೆ ಬೆಳೆ ವಿಮೆ ಮಾಡಿಸಬೇಕು? ನಿಮ್ಮ ಊರಿನಿಂದ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಎಲ್ಲಿಯೂ ಹೋಗಬೇಕಿಲ್ಲ. ರೈತರಿಗೆ ಮೊಬೈಲ್ ಕುರಿತು ಸ್ವಲ್ಪ ಮಾಹಿತಿ ಇದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಕ್ಷೀಪ್ತ ಮಾಹಿತಿ.

Check your crop insurance last date ಬೆಳೆ ವಿಮೆ ಮಾಡಿಸಲು ಯಾವ್ಯಾವ ಬೆಳೆಗಳಿಗೆ ಕೊನೆಯ ದಿನಾಂಕಗಳುಯಾವುವು?

ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕವನ್ನು ಚೆಕ್ ಮಾಡಲು ಈ

https://www.samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ View cut of Dates ಕೆಳಗಡೆ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮ್ಮ ಜಿಲ್ಲೆಯಲ್ಲಿ ಯಾವ್ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದರ ಪಟ್ಟಿ ಕಾಣಿಸುತ್ತದೆ. ಇದರೊಂದಗೆ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಹಾಗೂ ವಿಮೆ ಮಾಡಿಸಲು ಇನ್ನೂ ಎಷ್ಟುದಿನ ಉಳಿದಿದೆ ಎಂಬುದೆಲ್ಲಾ ಮಾಹಿತಿ ಕಾಣಿಸುತ್ತದೆ.

ಉದಾಹರಣೆಗೆ ನೀವು ಸೂರ್ಯಕಾಂತಿ ಬೆಳೆಗೆ ವಿಮೆ ಮಾಡಿಸುವುದಾದರೆ ಆಗಸ್ಟ್ 16 ಕೊನೆಯ ದಿನಾಂಕವಾಗಿದೆ. ಅದೇ ರೀತಿ ಭತ್ತಕೆ ವಿಮೆ ಮಾಡಿಸುವುದಾದರೆ ಆಗಸ್ಟ್ 16 ಕೊನೆಯ ದಿನಾಂಕವಾಗಿದೆ   ಹೆಸರು, ಉದ್ದು, ತೊಗರಿ, ಶೇಂಗಾ ಬೆಳೆಗಳಿಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.  ಇದೇ ರೀತಿ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ರೈತರೇಕೆ ಬೆಳೆ ವಿಮೆ ಮಾಡಿಸಬೇಕು?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಅಂದರೆ ಬರಗಾಲ, ಅತೀವೃಷ್ಟಿ, ಅನಾವೃಷ್ಟಿ, ಗುಡುಗು ಸಿಡಿಲು, ಭೂ ಕುಸಿತ, ಬಿರುಗಾಳಿ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ವಿಮೆ ಮಾಡಿಸಿದ ರೈತರಿಗೆ ಆರ್ಥಿಕ ಸಹಾಯ ಸಿಗಲಿದೆ. ಹೌದು, ರೈತರು  ಕಟ್ಟುವ ಬೆಳೆ ವಿಮೆ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ರೈತರು ಬೆಳೆ ವಿಮೆ ಮಾಡಿಸಬಹುದು. ಆಕಸ್ಮಾತ್ ನಿಮ್ಮ ಬೆಳೆ ಹಾನಿಯಾದರೆ ನಿಮಗೆ ವಿಮೆ ಹಣ ಸಿಗುತ್ತದೆ.

ಬೆಳೆ ಹಾನಿಯಾದಾಗ ರೈತರೇನು ಮಾಡಬೇಕು?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಬೆಳೆ ಹಾನಿಯಾದರೆ  72 ಗಂಟೆಯೊಳಗೆ ವಿಮಾ ಕಂಪನಿಯ ಸಿಬ್ಬಂದಿಗಳಿಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ನಿಮ್ಮ ಜಮೀನಿಗೆ ಬಂದು ಹಾನಿಯಾದ ಬೆಳೆಯನ್ನು ಪರಿಶೀಲನೆ ಮಾಡುತ್ತಾರೆ. ನಂತರ ವಿಮಾ ಕಂಪನಿಗೆ ವರದಿ ಸಲ್ಲಿಸುತ್ತಾರೆ. ನಂತರ ನಿಮಗೆ ಬೆಳೆ ವಿಮೆ ಹಣ ಜಮಯಾಗುತ್ತದೆ.

ಇದನ್ನೂ ಓದಿಜೂನ್ 30 ರೊಳಗೆ ಇಕೆವೈಸಿ ಮಾಡದಿದ್ದರೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ- ಮೊಬೈಲ್ ನಲ್ಲೇ ಇಕೆವೈಸಿ ಮಾಡಿ

ಳೆ ವಿಮೆ ಮಾಡಿಸುವಾಗ ರೈತರು ಯಾವ ವಿಮಾ ಕಂಪನಿಗೆ ಬೆಳೆ ವಿಮೆ ಕಟ್ಟುತ್ತಾರೆಂಬುದನ್ನು ತಿಳಿದುಕೊಳ್ಳಬೇಕು. ಏಕೆಂದರೆ ಪ್ರತಿಯೊಂದು ಜಿಲ್ಲೆಗೆ ಬೇರೆ ಬೇರೆ ವಿಮಾ ಕಂಪನಿಗಳನ್ನು ನಿಯೋಜಿಸಲಾಗಿರುತ್ತದೆ.  ಉದಾಹರಣೆಗೆ ಕಲಬುರಗಿ ಜಿಲ್ಲೆಗೆ  ಯೂನಿವರ್ಸಲ್ ಸ್ಯಾಂಪೋ, ಹಾವೇರಿ ಜಿಲ್ಲೆಗೆ ರಿಲಯನ್ಸ್ ಜನರಲ್ ಇನ್ಸುರೆನ್ಸ್ ಹಾೂಗ ಗದಗ, ಕೋಲಾರ ಜಿಲ್ಲೆಗಳಿಗೆ ಬಜಾಜ್ ಅಲಾಯನ್ಸ್ ಕಂಪನಿಗಳನ್ನು ನಿಯೋಜಿಸಲಾಗಿರುತ್ತದೆ. ಇದೇ ರೀತಿ ಬೇರೆ ಬೇರೆ ಜಿಲ್ಲೆಗಳಿಗೆ ವಿವಿಧ ವಿಮಾ ಕಂಪನಿಗಳನ್ನು ನಿಯೋಜಿಸಿರುತ್ತಾರೆ.

ನಿಮ್ಮ ಜಿಲ್ಲೆಯ ವಿಮಾ ಕಂಪನಿಯ ಸಹಾಯವಾಣಿ ನಂಬರ್ ಬೇಕಾದರೆ ಕೆಳಗಡೆ ಮೆಸೆಜ್ ಮಾಡಿ. ನಿಮಗೆ ವಿಮಾ ಕಂಪನಿಯ ನಂಬರ್ ಗಳನ್ನು ಜನಜಾಗರಣ ಸಿಬ್ಬಂದಿಗಳು ರಿಪ್ಲೈ ಮಾಡುತ್ತಾರೆ.

Leave a Comment