Check your crop survey

Written by Ramlinganna

Updated on:

Check your crop survey : ಬರಗಾಲ ಘೋಷಣೆಯಾದ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಆರಂಭವಾಗಿದೆ. ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರಾಜ್ಯದಲ್ಲಿ ಬರಗಾಲ ಘೋಷಣೆಯಾದ ಎಲ್ಲಾ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಯುತ್ತಿದ್ದು, ಬರ ಪರಿಹಾರಕ್ಕಾಗಿ ಪ್ರತಿಯೊಬ್ಬ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಯನ್ನು ಸಮೀಕ್ಷೆ ಮಾಡಿಸಬೇಕು. ಬೆಳೆ ಸಮೀಕ್ಷೆಯಾದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುತ್ತದೆ.

Check your crop survey ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ? ಇಲ್ಲೇ ಚೆಕ್ ಮಾಡಿ

ಬೆಳೆ ಸಮೀಕ್ಷೆ ಮಾಡಿಸಿಕೊಂಡ ರೈತರು ತಮ್ಮ ಬೆಳೆ ಸರಿಯಾಗಿ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಲು ಈ

https://play.google.com/store/apps/details?id=com.crop.offcskharif_2021

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ದರ್ಶಕ್ ಆ್ಯಪ್ ಓಪನ್ ಆಗುತ್ತದೆ. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲ ಕ್ಲಿಕಿ ಮಾಡಬೇಕಾಗುತ್ತದೆ.  ಅಲ್ಲಿ ನಿಮಗೆ ಎರಡು ಆಯ್ಕೆಗಳು ಕಾಣಿಸುತ್ತವೆ ಅದರಲ್ಲಿ ನೀವು ರೈತ ಆಯ್ಕೆ ಮಾಡಿಕೊಳ್ಳಬೇಕು. ನಂತರ ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಒತ್ತಿದ ನಂತರ ಅಲೋ ಬಟನ್ ಓತ್ತಬೇಕು. ನಂತರ 2023-24 ಆಯ್ಕೆ ಮಾಡಿಕೊಂಡು ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮ್ಡಿಕೊಳ್ಳಬೇಕಾಗುತ್ತದೆ. ನಿಮ್ಮ ತಾಲೂಕು, ಹೋಬಳಿ ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಊರು ಸೆಲೆಕ್ಟ್ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಸರ್ವೆ ನಂಬರ್ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಮಾಲಿಕರ ವಿವರ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಸೆಲೆಕ್ಟ್ ಮಾಡಿಕೊಳ್ಳಬೇಕು. ನಂತರ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.

ಬೆಳೆ ಸಮೀಕ್ಷೆ ಹೇಗೆ ಮಾಡಿಸಬೇಕು?

ಈಗಾಗಲೇ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಬೆಳೆ ಸಮೀಕ್ಷೆ ನಡೆಸುತ್ತಿದ್ದು, ಗ್ರಾಮ ಲೆಕ್ಕಿಗರು ಬೆಳೆ ಸಮೀಕ್ಷೆಗೆ ಬಂದಾಗ ಅವರಿಗೆ ಸಹಕರಿಸಬೇಕು. ಗ್ರಾಮ ಲೆಕ್ಕಿಗರು ಬರದಿದ್ದರೆ ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಬಹುದು. ಹೌದು, ರೈತರು ಸ್ವತಃ ಬೆಳೆ ಸಮೀಕ್ಷೆ ಮಾಡಲುಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ಮಾಡಿದೆ.

ಇದನ್ನೂ ಓದಿ ನಿಮ್ಮ ಜಮೀನಿಗೆ ಮುಟೇಶನ್ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರೈತರು ಬೆಳೆ ಸಮೀಕ್ಷೆಗೆ ಗೂಗಲ್ ಪ್ಲೇಸ್ಟೋರ್ ನಲ್ಲಿ ಬೆಳೆ ಸಮೀಕ್ಷೆ 2023 ಆ್ಯಪ್ ಟೈಪ್ ಮಾಡಿ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು.  ಆ್ಯಪ್ ಇನಸ್ಟಾಲ್ ಮಾಡಿಕೊಂಡ ನಂತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ನಿಖರವಾಗಿ ದಾಖಲಿಸಬೇಕು. ಈ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲಬೆಲೆ, ಕೃಷಿ ಸಾಲ ಸೌಲಭ್ಯ ಮತ್ತುಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಪಡೆಯಲು ಬೆಳೆ ಸಮೀಕ್ಷೆ ಯಾಗಿರಬೇಕು.

ಬೆಳೆ ಸಮೀಕ್ಷೆಯನ್ನು ಆಧಾರ್ ಕಾರ್ಡ್ನ ಮೂಲಕ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ನೋಂದಾಯಿಸಿಕೊಂಡು ತಮ್ಮ ಜಮೀನಿನ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ಜಮೀನಿಗೆ ತೆರಳಿಿ ಸಂಬಂಧಿಸಿದ ಸರ್ವೆನಂಬರ್ ನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರ ತೆಗೆದು ಅಪ್ಲೋಡ್ ಮಾಡಬೇಕಾಗುತ್ತದೆ.

Leave a Comment