ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

Written by By: janajagran

Updated on:

Click here to apply online for scholarships  ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ 2500 ರುಪಾಯಿಯಿಂದ 11 ಸಾವಿರ ರೂಪಾಯಿಯವರೆಗೆ ಶಿಷ್ಯವೇತನ ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮೊದಲು ಸರ್ಕಾರದ

https://ssp.postmatric.karnataka.gov.in

ವೆಬ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು.

Click here to apply online for scholarships  ಶಿಷ್ಯವೇತನಕ್ಕೆ ಬೇಕಾಗುವ ದಾಖಲೆಗಳು:

ವಿದ್ಯಾರ್ಥಿಗಳ ಎಸ್ಎಟಿಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ ಹೊಂದಿರಬೇಕು. ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆಯಿರಬೇಕು. ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ ಹೊಂದಿರಬೇಕು. ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ದಾಖಲಾತಿ ಸಂಖ್ಯೆ (ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ). ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ವಿದ್ಯಾರ್ಥಿಯ ಈ ಮೇಲ್ ಐಡಿ ಇರಬೇಕು.ನ ವಿದ್ಯಾರ್ಥಿಯು ರೈತನ ಮಗನಾಗಿರಬೇಕು.  ವಿದ್ಯಾರ್ಥಿಯು 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಹೊಂದಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿಯು ರೈತರ ಗುರುತಿನ ಸಂಖ್ಯೆ (ಎಫ್ಐಡಿ) ಹೊಂದಿರಬೇಕು.

ರೈತರ ಎಫ್ಐಡಿ ಗುರುತಿ ಸಂಖ್ಯೆ ಇರದಿದ್ದರೆ ಈ ಲಿಂಕ್

 https://janajagran.com/swabhimani-raita-card/

ಕ್ಲಿಕ್ ಮಾಡಿ ಇಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಎಫ್ಐಡಿ ಸಂಖ್ಯೆ ಪಡೆಯಿರಿ.

ಪಿಯುಸಿ/ಐಐಟಿ/ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 2500 ರೂಪಾಯಿ ವಿದ್ಯಾರ್ಥಿನಿಯರಿಗೆ 3000 ಸಾವಿರ ರೂಪಾಯಿ, ಬಿ.ಎ, ಬಿಎಸ್.ಸಿ, ಬಿಕಾಂ ಇನ್ನಿತರ ಪದವಿ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಗೆ 5000 ಹಾಗೂ ವಿದ್ಯಾರ್ಥಿನಿಯರಿಗೆ 5500 ರೂಪಾಯಿ ಶಿಷ್ಯವೇತನ ನೀಡಲಾಗುವುದು.

ಇದನ್ನೂ ಓದಿ  ಈ ರೈತರೇಕೆ ಪಿಎಂ ಕಿಸಾನ್ ಪಟ್ಟಿಯಿಂದ ಹೊರಗುಳಿಯಲಿದ್ದಾರೆ?

ಎಲ್ಎಲ್ಬಿ/ಪ್ಯಾರಾಮೆಡಿಕಲ್/ಬಿಫಾರ್ಮಾ/ನರ್ಸಿಂಗ್ ಇನ್ನಿತರ ವೃತ್ತಿಪರ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಗೆ 7500 ಹಾಗೂ ವಿದ್ಯಾರ್ಥಿನಿಯರಿಗೆ 8000 ರೂಪಾಯಿ ಶಿಷ್ಯ ವೇತನ ನೀಡಲಾಗುವುದು. ಎಂಬಿಬಿಎಸ್/ಬಿಇ/ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಗೆ 10000 ವಿದ್ಯಾರ್ಥಿನಿಯರಿಗೆ 11 ಸಾವಿರ ರೂಪಾಯಿ ಶಿಷ್ಯವೇತನ ನೀಡಲಾಗುವುದು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಈ ಲಿಂಕ್

https://ssp.postmatric.karnataka.gov.in

ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ಕಾರದ ಶಿಷ್ಯವೇತನದ ಪೇಜ್ ಓಪನ್ ಆಗುತ್ತದೆ. ಅಲ್ಲಿ ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಬಾಕ್ಸ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮಗೆ ಆಧಾರ್ ಇದೆಯೇ ಎಂದು ಕೇಳಲಾಗುತ್ತದೆ ಅಲ್ಲಿ ಹೌದು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆಧಾರ್ ಸಂಖ್ಯೆ ಹಾಗೂ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು.  ನಂತರ ಕೆಳಗಡೆ ಅಂಕೆಸಂಖ್ಯೆಯ ಕೂಡಿಸು, ಕಳೆಯಿರಿ. ಗುಣಕಾರಾ ಅಥವಾ ಭಾಗಕಾರದ ಸಂಖ್ಯೆ ಕೇಳಲಾಗುತ್ತದೆ. ಅಲ್ಲಿ ನಂಬರ್ ನಮೂದಿಸಿದ ಮುಂದುವರೆಸುವ ಮೇಲೆ ಕ್ಲಿಕ್ ಮಾಡಿ ಮುಂದೆ ಕೇಳಲಾದ ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

Leave a Comment