ಈ ದಿನಾಂಕದೊಳಗೆ ಈ ಬೆಳೆಗಳ ವಿಮೆ ಮಾಡಿಸಿ

Written by Ramlinganna

Published on:

Crop insurance last dates : ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಧಿಸೂಚಿಸಲಾಗಿದೆ.

ಗ್ರಾಮ ಪಂಚಾಯತ್ ಮಟ್ಟಕ್ಕೆ ಅಧಿಸೂಚಿಸಲಾದ ಮಳೆಯಾಶ್ರಿತ ಬೆಳೆಗಳಾದ ತೊಗರಿ, ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಮತ್ತು ತೊಗರಿ ಬೆಳೆಗಳಿಗೆ ವಿಮಾ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ಹೋಬಳಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾದ ಮಳೆಯಾಶ್ರಿತ ಉದ್ದು, ಹೆಸರು ಬೆಳೆಗೆ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ನೀರಾವರಿ ಈರುಳ್ಳಿ ಹಾಗೂ ಕೆಂಪು ಮೆಣಸಿನಕಾಯಿ ಹಾಗೂ ಮಳೆಯಾಶ್ರಿತ ಹತ್ತಿ ಬೆಳೆಗೆ ಆಗಸ್ಟ್ 16 ಕೊನೆಯ ದಿನವಾಗಿದೆ. ನೀರಾವರಿ ಶೇಂಗಾ ಹಾಗೂ ಇನ್ನುಳಿದ ಹೋಬಳಿ ಮಟ್ಟದ ಬೆಳೆಗಳಿಗೆಜುಲೈ 31 ಕೊನೆಯ ದಿನವಾಗಿದೆ.

ರೈತರು ನೋಂದಣಿಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೊಂದಿದ ಎಪ್ಐಡಿ ಸಂಖ್ಯೆಯನ್ನು ಹಾಗೂ ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆಗೆ ಎನ್.ಪಿ.ಸಿ.ಆಯ್ ಸೀಡಿಂಗ್ ಮಾಡಿಸಿರಬೇಕು. ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ, ಪಹಣಿ ಪತ್ರಿಕೆ, ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್ ಶಾಖೆಗಳಲ್ಲಿ ಅಥವಾ ಗ್ರಾಮಒನ್ ಕೇಂದ್ರ ಅಥವಾ ಸಿ.ಎಸ್.ಸಿ ಕೇಂದ್ರದಲ್ಲಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Crop insurance last dates ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಅಂತಿಮ ದಿನವಿದೆ?

ನಿಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಲು ಅಂತಿಮ ದಿನವಿದೆ ಎಂದು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ರೈತರು ಕೆಳಗೆ ನೀಡಲಾದ ಕೆಲವು ಮಾಹಿತಿಗಳ ಪ್ರಕಾರ ಅತೀ ಸುಲಭವಾಗಿ ಚೆಕ್ ಮಾಡಬಹುದು.

ರೈತರು ಪ್ರಸಕ್ತಸಾಲಿನಲ್ಲಿ ಮುಂಗಾರು ಹಂಗಾಮಿಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Premium Calculator, Crop you can insure, check status, Know your Insurance co. Find Gram panchayat,  Crop Insurance Detail on survey No and View cut of Details ಮೇಲೆ  ಕಾಣಿಸುತ್ತವೆ. ಅಲ್ಲಿ ನೀವು  View cut of Details ಮೇಲೆ ಕ್ಲಿಕ್ ಮಾಡಬೇಕು. ಅಥವಾ

https://samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮಗೆ ನಿಮ್ಮ ಜಿಲ್ಲೆಯಿಂದ ಯಾವ ಯಾವ ಬೆಳೆಗಳಿಗೆ ಯಾವುದು ಕೊನೆಯ ದಿನಾಂಕವಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಬೆಳೆ ವಿಮೆ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

ಜಿಲ್ಲೆ ಬೆಳೆಗೆ ಅನುಗುಣವಾಗಿ ಅಂತಿಮ ದಿನ

36 ವಿಧದ ಆಹಾರ, ಎಣ್ಣೆಕಾಳು, ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳಿಗೆ ಕೃಷಿ ಇಲಾಖೆಯಿಂದ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದ್ದು ತಮಗೆಲ್ಲಾ ಗೊತ್ತಿದ್ದ ಸಂಗತಿಯಾಗಿದೆ.

ಇದನ್ನೂ ಓದಿ Bara parihara beneficiary listನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಎಣ್ಣೆಕಾಳು  ಬೆಳೆಗಳಾಗಿ ಶೇ. 2 ರಷ್ಟು ಮತ್ತು ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳಿಗೆ ಶೇ. 5 ರಷ್ಟು ಪ್ರಿಮಿಯಂ ಅನ್ನು ರೈತರು ಪಾವತಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನುಳಿದ ಪ್ರಿಮಿಯಂ ಮೊತ್ತ ಪಾವತಿಸಲಿದೆ.

Leave a Comment