Drip irrigation subsidy ಶೇ. 90 ರಷ್ಟು ಸಬ್ಸಿಡಿ

Written by By: janajagran

Updated on:

Drip irrigation subsidy ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 2021-22ನೇ ಸಾಲಿನಲ್ಲಿ ರೈತರಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ರಾಮನಗರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

Drip irrigation subsidy ಯಾವ ಯಾವ ಬೆಳೆಗೆ ಎಷ್ಟು ಸಬ್ಸಿಡಿ ನೀಡಲಾಗುವುದು?

ತೋಟಗಾರಿಕೆ ಬೆಳೆಗಳಾದ ತೆಂಗು, ಬಾಳೆ, ಮಾವು, ಸಪೋಟಾ, ನಿಂಬೆ, ದಾಳಿಂಬೆ, ಪಪ್ಪಾಯ, ಹೂವಿನ ಬೆಳೆ, ತರಕಾರಿ ಬೆಳೆ ಹಾಗೂ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಸಣ್ಣ ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 2 ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಹಾಯಧನ ಹಾಗೂ 2 ರಿಂದ 5 ಹೆಕ್ಟೇರ್ ವರೆಗಿನ ರೈತರಿಗೆ ಶೇ. 45 ರಷ್ಟು ಸಹಾಯಧನ ನೀಡಲಾಗುತ್ತಿದೆ.

ಇದನ್ನೂ ಓದಿ : ನೀವು ಯಾವ ಯಾವ ಬ್ಯಾಂಕಿನಲ್ಲಿ ಎಷ್ಟೇಷ್ಟು ಸಾಲ ಪಡೆದಿದ್ದೀರಿ ಎಂಬುದನ್ನು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಆಸಕ್ತ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್) ಕಚೇರಿ ಕನಕಪುರ, ಇಳ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ 80730 45893, ಸಹಾಯಕ ತೋಟಗಾರಿಕೆ ಅಧಿಕಾರಿ ಹಾರೋಹಳ್ಳಿ 80951 46220, ಸಹಾಯಕ ತೋಟಗಾರಿಕೆ ಅಧಿಕಾರಿ ಮರಳವಾಡಿ 99808 02729, ಸಹಾಯಕ ತೋಟಗಾರಿಕೆ ಅಧಿಕಾರಿ ಸಾತನೂರ 80730 45893, ಸಹಾಯಕ ತೋಟಗಾರಿಕೆ ಅಧಿಕಾರಿ ಕೋಡಿಹಳ್ಳಿ 95916 74212, ಸಹಾಯಕ ತೋಟಗಾರಿಕೆ ಅಧಿಕಾರಿ ಉಯ್ಯಂಬಳ್ಳಿ 78926 50037 ರವರನ್ನು ಸಂಪರ್ಕಿಸಬಹುದು ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಲಿಹೌಸ್ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಅನುಷ್ಠಾನವಾಗಲಿರುವ ವಿವಿಧ ಇಲಾಖಾ ಕಾರ್ಯಕ್ರಮಗಳಡಿ ಚಿಕ್ಕಮಗಳೂರು ಜಿಲ್ಲೆಯ  ತರಕೇರಿ, ಅಜ್ಜಂಪುರ ತಾಲೂಕಿನ ಆಸಕ್ತ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಯತಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸುರಂಗ ಮಾದರಿಯ ಪಾಲಿಹೌಸ್, ಪುನೇಟ್ ಬಾಕ್ಸ್, ಪ್ಲಾಸ್ಟಿಕ್ ಕ್ರೇಟ್ಸ್,  ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳ ಮಿಶ್ರಣ, ಬೆಳೆ –ಹಣ್ಣು, ಹೂವು ಹೊದಿಕೆ, ಮೋಹಕ ಕೀಟ ಬಲೆಗಳು,  ಜಿಗುಟಾದ ಬಲೆಗಳು, ತೆಂಗು ಶೇಖರಣಾ ಘಟಕ, ಸೌರಶಕ್ತಿ ಆಧಾರಿತ ಕೃತಕ ಬುದ್ಧಿಯ ಕೀಟ ನಿಯಂತ್ರಕ ಬಲೆಗಳು ಹಾಗೂ ತಾಳೆಗಿಡ ಹಾಕಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಈಗಾಗಲೇ ಸಹಾಯಧನ ಪಡೆದು 7 ವರ್ಷವಾಗಿದ್ದ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು. ಇತರ ಪಂಗಡದ ರೈತರಿಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು. ಕಚೇರಿಯಂದ ರೈತರು ಅರ್ಜಿ ಪಡೆದು ಡಿಸೆಂಬರ್ 17 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Leave a Comment