ನಿಮ್ಮ ಹೆಸರಿಗೆ FID ಇದೆಯೇ? ಇಲ್ಲೇ ಚೆಕ್ ಮಾಡಿ

Written by Ramlinganna

Updated on:

Farmer identity card : ರೈತರ ಬಳಿ ಎಫ್ಐಡಿ ಕಾರ್ಡ್ ಅಂದರೆ ರೈತರು ಗುರುತಿನ ಚೀಟಿ ಇದ್ದರೆ ಮಾತ್ರ ಇನ್ನೂ ಮುಂದೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುವುದು.

ಹೌದು,  ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ರೈತನ ಗುರುತಿನ ಚೀಟಿ (ಎಫ್ಐಡಿ) ಮಾಡಿಸಿಕೊಳ್ಳಬೇಕು. ಎಫ್ಐಡಿ ಈಗಾಗಲೇ ಇದ್ದಲ್ಲಿ ಎಫ್ಐಡಿಯಲ್ಲಿ ನಿಮಗೆ ಸಂಬಂಧಿಸಿದ ಎಲ್ಲಾ ಜಮೀನುಗಳ ಸರ್ವೆ ನಂಬರ್ ಗಳು ಜೋಡಣೆಯಾಗಿದೆಯೋ ಇಲ್ಲವೋ ಎಂದು  ಪರಿಶೀಲಿಸಿಕೊಳ್ಳಬಹುದು. ಜಂಟಿ ಖಾತೆದಾರರು ಇದ್ದಲ್ಲಿ ಪ್ರತಿ ಒಬ್ಬ ಜಂಟಿ ಖಾತೆದಾರರು ಪ್ರತ್ಯೇಕವಾಗಿ ಎಫ್ಐಡಿ ಮಾಡಿಕೊಳ್ಳಬೇಕು. ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ದೂರವಾಣಿ ಸಂಖ್ಯೆ, ಎಸ್.ಸಿ, ಎಸ್.ಟಿ ಗೆ ಸೇರಿದ ರೈತರು ಜಾತಿ ಪ್ರಮಾಣ ಪತ್ರ ಒದಗಿಸುವುದು. ಎಫ್ಐಡಿ ಮಾಡಿಸದೆ ಇದ್ದಲ್ಲಿ ರೈತರಿಗೆ ಬರುವ ಬೆಳೆವಿಮೆ, ಬೆಳೆ ನಷ್ಟ  ಪರಿಹಾರದ ಹಣ ರೈತರ ಖಾತೆಗೆ ಜಮೆ ಆಗುವುದಿಲ್ಲ. ಹಾಗಾಗಿ ರೈತರ ಬಳಿ ಗುರುತಿನ ಚೀಟಿ ಇರುವುದು ಕಡ್ಡಾಯವಾಗಿದೆ.

ಸರ್ಕಾರವು ರೈತರ ಅನುಕೂಲಕ್ಕಾಗಿ ಕೃಷಿ ಮತ್ತು ಕೃಷಿ ಸಂಬಂಧಿಸಿದಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಈ ಯೋಜನೆಯ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಜಾತಿ ದೃಢೀಕರಣ ಪತ್ರ, ರೇಶನ್ ಕಾರ್ಡ್, ಫೋಟ ಹಾಗೂ ಜಮೀನಿನ ಪಹಣಿ ಇತ್ಯಾದಿ ದಾಖಲಾತಿಗಳೊಂದಿಗೆ ನೋಂದಾಯಿಸಿಕೊಂಡು ಫ್ರೂಟ್ಸ್ ಐಡಿ ಪಡೆದುಕೊಳ್ಳಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಫ್ರೂಟ್ಸ್ ಐಡಿಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೆ ನಂಬರ್ ಗಳ ಸಾಗುವಳಿ ವಿಸ್ತೀರ್ಣವನ್ನು ಸೇರ್ಪಡೆಗೆ ಆಧಾರ್, ಬ್ಯಾಂಕ್ ಪಾಸ್ ಬುಕ್, ಪಹಣಿ ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯ ಕೃಷಿ, ಕಂದಾಯ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ, ಸಹಕಾರ ಇಲಾಖೆಯ ಕಚೇರಿಗಳನ್ನುಸಂಪರ್ಕಿಸುವಂತೆ ಕೋರಲಾಗಿದೆ.

Farmer identity card ನಿಮ್ಮ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ

ರೈತರು ತಮ್ಮ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ಅಲ್ಲಿ ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡ ಕಾಣಿಸುತ್ತದೆ.

jame ಬರಗಾಲ ಪರಿಹಾರ ಹಣ ಕೆಲವು ರೈತರಿಗೇಕೆ ಜಮೆಯಾಗಿಲ್ಲ? ಇಲ್ಲಿದೆ ಪ್ರಮುಖ ಕಾರಣಗಳು

ರೈತರು ಮೊದಲು ಜಮೀನಿನ ಪಹಣಿಗೆ ತಮ್ಮ ಎಫ್ಐಡಿ ಇದೆಯೋ ಇಲ್ಲವೋ ಎಂಬುದು ಖಚಿತಪಡಿಸಿಕೊಳ್ಳಬೇಕು.

ತಮ್ಮ ಬ್ಯಾಂಕ್ ಖಾತೆಗೆ ಎನ್.ಪಿ.ಸಿ.ಐ ಲಿಂಕ್ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.

ಎನ್.ಪಿ.ಸಿ.ಐ (NPCI) ಲಿಂಕ್ ಇದ್ದಲ್ಲಿ ಎಫ್ಐಡಿಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆಗೂ ಎನ್.ಪಿ.ಸಿಐ ಲಿಂಕ್ ಇರುವ ಸಂಖ್ಯೆ ಒಂದೇ ಆಗಿರಬೇಕು.ಎನ್.ಪಿ.ಸಿ.ಐ ಲಿಂಕ್ ಹಾಗೂ ಎಫ್ಐಡಿ ಇರುವ ಬ್ಯಾಂಕ್ ಖಾತೆ ಸಂಖ್ಯೆ ಬೇರೆ ಬೇರೆ ಆಗಿದ್ದಲ್ಲಿ ಎಫ್ಐಡಿ ಇರುವ ಬ್ಯಾಂಕ್ ಖಾತೆ ಸಂಖ್ಯೆಯನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಬದಲಾವಣೆ ಮಾಡಿಸಿಕೊಳ್ಳಬೇಕು.

ಆಧಾರ್ ಕಾರ್ಡ್ ನಲ್ಲಿ ಇರುವ ಹೆಸರಿಗೂ ಬ್ಯಾಂಕ್ ಖಾತೆಯಲ್ಲಿರುವ ಹೆಸರು ಒಂದೇ ಆಗಿರಬೇಕು.

ಅಕೌಂಟ್ ಇನ್ ವ್ಯಾಲಿಡ್, ಕ್ಲೋಸ್, ಬ್ಲಾಕ್ ಆಧಾರ್ ನಾಟ್ ಸಿಡಿಂಗ್ ಹಾಗೂ ಇತರ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಳ್ಳುತ್ತಿದ್ದು ಪರಿಶೀಲಿಸಿಕೊಂಡು ಚಾಲ್ತಿ ಮಾಡಿಸಿಕೊಳ್ಳುವುದು.

ಆಧಾರ್ ಕಾರ್ಡ್ ದಲ್ಲಿ ಹಾಗೂ ಪಹಣಿ ಪತ್ರಿಕೆಯಲ್ಲಿ ಹೆಸರು ಒಂದೇ ಆಗಿರಬೇಕು. ಸರ್ಕಾರದ ವತಿಯಿಂದ ಇನ್ನೂ ಹಂತ ಹಂತವಾಗಿ ಬರಗಾಲ ಪರಿಹಾರ ಹಣ ಬಿಡುಗಡೆಗೊಳ್ಳುತ್ತದೆ. ಆಗ ಉಳಿದ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮೆಯಾಗಿಲದೆ.

Leave a Comment