ರೈತರ ಉತ್ಪನ್ನ ಮಾರಾಟ 4 ತಾಸಿನಲ್ಲಿ ಸಾಧ್ಯವೇ..?

Written by By: janajagran

Updated on:

ಕೋವಿಡ್ 2ನೇ ಅಲೆಯನ್ನು ತಡೆಯುವುದಕ್ಕಾಗಿ ಸರ್ಕಾರ ಹೇರಿದ್ದ ಜನತಾ ಕರ್ಫ್ಯೂ ರೈತರಿಗೆ (Farmers in trouble) ಗಾಯದ ಮೇಲೆ ಬರೆ ಎಳೆದಿದೆ. ನಾಲ್ಕು ಗಂಟೆಗಳ ಕಾಲ ನೀಡಿದ ಸಮಯಾವಕಾಶದಲ್ಲೇ ವ್ಯಾಪಾರ ವಹಿವಾಟು ಮುಗಿಸಲು ನಿಗದಿಮಾಡಿದ್ದರಿಂದ ಖರೀದಿದಾರರು ಬಾರದೆ ರೈತರು ಅನಿವಾರ್ಯವಾಗಿ ಕಡಿಮೆ ಬೆಲೆಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ದಲ್ಲಾಳಿಗಳು ನಿರ್ಮಿಸುತ್ತಿದ್ದಾರೆ.

Farmers in trouble ರೈತರ ಉತ್ಪನ್ನ ಮಾರಾಟ 4 ತಾಸಿನಲ್ಲಿ ಸಾಧ್ಯವೇ..?

ಕೃಷಿ ಉತ್ಪನ್ನಗಳನ್ನು ವಾಪಸ್ಸು ಕೊಂಡೊಯ್ಯುವಂತೆ ರೈತರಿಗೆ ಹೇಳುತ್ತಿದ್ದಾರೆ. ಇದರಿಂದ ರೈತರಿಗೆ ತರಕಾರಿ ಹಣ್ಣು ಕೊಯ್ಲು ಮಾಡುವುದು, ಸಾಗಾಟಕ್ಕೆ ಹಣ ವಿನಿಯೋಗಿಸಿದ್ದ ರೈತ ಮತ್ತೆ ಮನೆಗೆ ಕೊಂಡೊಯ್ಯಲು ಮತ್ತಷ್ಟು ಹಣ ಖರ್ಚು ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಅನಿವಾರ್ಯವಾಗಿ ದಲ್ಲಾಳಿಗಳು ಕೇಳಿದ ಬೆಲೆಗೆ ಮಾರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಕೆಲವು ರೈತರು ಖರೀದಿಯಾಗದೆ ಇರುವುದರಿಂದ ಮನೆಗೆ ತೆಗೆದುಕೊಂಡು ಹೋಗಲು ಸಾಧ್ಯವಾಗದೆ ರಸ್ತೆಯಲ್ಲಿಯೇ ಎಸೆಯುತ್ತಿದ್ದಾರೆ.

ಇದನ್ನೂ ಓದಿ 13 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ

ಎಲ್ಲಾ ಎಪಿಎಂಸಿಗಳು ಹಾಗೂ ತರಕಾರಿ ಮಾರುಕಟ್ಟೆಗಳು ಬೆಳಗ್ಗೆ 6 ರಿಂದ 10ರವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ. ಆದರೆ ಈ ನಾಲ್ಕು ತಾಸು ಅವಧಿಯಲ್ಲಿ ಮಾರಾಟ ಮಾಡಲು ಕಷ್ಟವಾಗುತ್ತಿದೆ.  ಬೆಲೆ ಕಡಿಮೆಯಿಂದ ಬೇಸತ್ತ ರೈತರು ತಾವು ಬೆಳೆದ ಬೆಳೆಯನ್ನು ಕಟಾವು ಮಾಡದೆ ತಮ್ಮ ಕೃಷಿ ಭೂಮಿಯಲ್ಲೇ ಕೊಳೆಯಲು ಬಿಡುವಂತಾಗಿದೆ.

ಸಾಲಮಾಡಿ ಬೆಳೆದ ಬೆಳೆಗೆ ಸೂಕ್ತ ಬೆಲೆ ಇರಲಿ, ಕನಿಷ್ಟ ಕೂಲಿ ಹಣವೂ ಸಿಗದೆ ಪರದಾಡುವಂತಾಗಿದೆ. ಟೊಮ್ಯಾಟೊ ಬೆಲೆ ಕುಸಿದು ರೈತರು ಮಾರುಕಟ್ಟೆಗೆ ಸಾಗಿಸಲು ಖರ್ಚು ಸಹ ಭರಿಸಲು ಸಾಧ್ಯವಾಗದೆ ತೋಟದಲ್ಲಿ ಬಿಡುತ್ತಿದ್ದಾರೆ.ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಾಲು ಉತ್ಪಾದಕರಿಗೆ ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸರ್ಕಾರ ಆದೇಶವನ್ನು ಪರಿಷ್ಕರಿಸಿ ರಾತ್ರಿ 8ರವರೆಗೆ ಸಮಯಾವಕಾಶ ಒದಗಿಸಿದೆ. ಹಾಲಿನ ಮಳಿಗೆ ತೆರೆದಿರುವ ಮಾದರಿಯಲ್ಲಿ ಎಪಿಎಂಸಿಯಲ್ಲೂ ರಾತ್ರಿ 8 ಗಂಟೆಯವರೆಗೆ ತರಕಾರಿ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ರೈತರು ತಮ್ಮಉತ್ಪನ್ನಗಳನ್ನು ಕೇವಲ ನಾಲ್ಕು ಗಂಟೆಗಳಲ್ಲಿ ಮಾರಾಟ ಮಾಡಿ ಹೋಗುವುದು ತುಂಬಾ ಕಷ್ಟವಾಗುತ್ತದೆ.  ಹಾಗಾಗಿ ರೈತರಿಗೆ ಹೆಚ್ಚಿನ ಸಮಯ ನೀಡಬೇಕು.ಅಂದಾಗ ಮಾತ್ರ ಎಲ್ಲಾ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಸಮಯಾವಕಾಶ ಬೇಕಾಗುತ್ತದೆ.  ಕಡಿಮೆ ಸಮಯದಲ್ಲಿ ಹೆಚ್ಚು ಉತ್ಪನ್ನಗಳನ್ನು ಮಾರಾಟ ಮಾಡಲು ಸಮಯ ಸಾಕಾಗುವುದಿಲ್ಲ. ರೈತರು ದೂರದ ಊರುಗಳಿಂದ ಬಂದಿರುತ್ತಾರೆ. ಅದರಲ್ಲಿಯೂ ಮದ್ಯವರ್ತಿಗಳು ಕಡಿಮೆ ದರದಲ್ಲಿ ಖರೀದಿ ಮಾಡುತ್ತಾರೆ. ಇದರಿಂಂದಾಗಿ ಮೊದಲೇ ರೈತರಿಗೆ ಅಪಾರ ಹಾನಿಯಾಗಿರುತ್ತದೆ. ಹಾಗಾಗಿ ಸರ್ಕಾರ ರೈತರಿಗೆ ಹೆಚ್ಚಿನ ಸಮಯವಕಾಶ ನೀಡಬೇಕು. ಅಂದಾಗ ಮಾತ್ರ ರೈತರಿಗೆ ನ್ಯಾಯ ಕೊಟ್ಟಂತಾಗುತ್ತದೆ.  ರೈತರ ಕೈಹಿಡಿಯುವ ಕೆಲಸ ಸರ್ಕಾರ ಮಾಡಬೇಕಿದೆ.

 

Leave a Comment