ಇಂದು ಆನ್ಲೈನ್ ಮೂಲಕ ಹೈನುಗಾರಿಕೆ ಕುರಿತು ತರಬೇತಿ

Written by By: janajagran

Updated on:

free dairy training ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ಹಾಗೂ ಹೈನುಗಾರಿಕೆ ಮಾಡುತ್ತಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಅರಕಲಗೂಡು ಹಾಗೂ ಪಶು ವೈದ್ಯಕೀಯ ಮಹಾವಿದ್ಯಾಲಯ ಹಾಸನ ಸಹಯೋಗದಲ್ಲಿ ಜುಲೈ 20 ರಂದು ಮಧ್ಯಾಹ್ನ 3 ರಿಂದ 5 ರವರೆಗೆ online ಮೂಲಕ ಹೈನುಗಾರಿಕೆ ಕುರಿತು  ತರಬೇತಿ ಆಯೋಜಿಸಲಾಗಿದೆ.

ಹವಾಮಾನ ಹಾಗೂ ಆರ್ಥಿಕ ವೈಪರೀತ್ಯಗಳಲ್ಲಿ ಸುಸ್ಥಿರ ಪಶುಸಂಗೋಪನೆ ಕುರಿತು ತರಬೇತಿ ನಡೆಯಲಿದೆ. ಪಶು ವೈದ್ಯಕೀಯ ಮಹಾವಿದ್ಯಾಲಯ ಹಾಸನದ ಸಹಾಯಕ ಪ್ರಾಧ್ಯಾಪಕ ಡಾ. ಹೇಮಂತ್ ಗೌಡ ಕೆರವರು ತರಬೇತಿ ನೀಡಲಿದ್ದಾರೆ. ರೈತರು ಮನೆಯಲ್ಲಿಯೇ ಕುಳಿತು ತರಬೇತಿಯ ಸೌಲಭ್ಯ ಪಡೆಯಬಹುದು.

ಇದನ್ನೂ ಓದಿ 13 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ

free dairy training ಹೈನುಗಾರಿಕೆ ತರಬೇತಿಯಲ್ಲಿ ಭಾಗವಹಿಸುವುದು ಹೇಗೆ?

ಈ ತರಬೇತಿಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಗೂಗಲ್ ಮೀಟ್ App ಇನ್ಸ್ ಸ್ಟಾಲ್ ಮಾಡಿಕೊಂಡಿರಬೇಕು. ಒಂದು ವೇಳೆ ಇನ್ಸ್ ಟಾಲ್ ಮಾಡಿಕೊಳ್ಳದಿದ್ದರೆ ತರಬೇತಿಯ ಮುಂಚೆ ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ತರಬೇತಿಯಲ್ಲಿ ಭಾಗವಹಿಸಬಹುದು.

ತರಬೇತಿಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಮಧ್ಯಾಹ್ನ 2..50 ಗಂಟೆಗೆ meet.google.com/yhf-eezn-jgx ಲಿಂಕ್ ಮೇಲೆ ಕ್ಲಿಕ್ ಮಾಡಿ ತರಬೇತಿಯಲ್ಲಿ ಭಾಗವಹಿಸಬಹುದು.

ಗೂಗಲ್ ಮೀಟ್ ನಲ್ಲಿ ಹಾಜರಾದ ತಕ್ಷಣ ರೈತರು ಮೊಬೈಲ್ ನ್ನು ಮ್ಯೂಟ್ ಮಾಡಬೇಕು. ತರಬೇತಿ ನೀಡುವ ಸಂಪನ್ಮೂಲ ವ್ಯಕ್ತಿಗೆ ತೊಂದರೆಯಾಗುವುದಿಲ್ಲ. ಇನ್ನಿತರ ರೈತರಿಗೆ ಸರಿಯಾಗಿ ಕೇಳಿ ಬರುತ್ತದೆ.  ತರಬೇತಿ ಪ್ರಾರಂಭದಲ್ಲಿ ಯಾರು ತಮ್ಮ ಮೊಬೈಲ್ ನಲ್ಲಿ Present now button ಒತ್ತಬಾರದು. ಬದಲಿಗೆ ask to join ಬಟನ್ ಒತ್ತಬೇಕು.  ಹೆಚ್ಚಿನ ಮಾಹಿತಿಗಾಗಿ ರೈತರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಅರಕಲಗೂಡು, ಹಾಸನ, ಸಹಾಯಕ ಕೃಷಿ ನಿರ್ದೇಶಕರ ಮೊ. ನಂಬರ್ 94484 21518 ಗೆ ಸಂಪರ್ಕಿಸಲು ಕೋರಲಾಗಿದೆ.

ಮೈಸೂರು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ರಾಷ್ಟೀಯ ಕೃಷಿ ವಿಕಾಸ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದವರಿಗೆ ಕುರಿ, ಮೇಕೆ 10+1 ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾನುಭವಿಗಳು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿತ ಮೈಸೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿಸದಸ್ಯರಾಗಿರುವ ಹಾಗೂ ಹಿಂದಿನ 3 ವರ್ಷಗಳಲ್ಲಿ ಪಶುಪಾಲನೆ ಇಲಾಖೆ, ಅಥವಾ ನಿಗಮದದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವವರು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದು.

ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಹೋಬಳಿಮಟ್ಟದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿ ಪಡೆದು ಅರ್ಜಿ ಸಲ್ಲಿಸಬೇಕು, ಭರ್ತಿ ಮಾಡಿದ ಅರ್ಜಿಯನ್ನು ಸಂಘದ ಅಧ್ಯಕ್ಷರು, ಕಾರ್ಯದರ್ಶಿಯವರ ಮೂಲಕ ಚಾಮುಂಡಿಪುರಂನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.

 

Leave a Comment