ಕುರಿ, ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Written by By: janajagran

Updated on:

Goat rearing and animal training ಕುರಿ, ಮೇಕೆ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಸಂತಸದ ಸುದ್ದಿ. ಕೃಷಿಯೊಂದಿಗೆ ಪಶುಸಾಕಾಣಿಕೆ ಮಾಡಿ ಆರ್ಥಿಕವಾಗಿ ರೈತರು ಅಭಿವೃದ್ಧಿಯಾಗುವುದಕ್ಕಾಗಿ ಕುರಿ, ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿಯ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರ ಜಿಲ್ಲೆಗಳ ರೈತರಿಗೆ 2022ರ  ಜನವರಿ 5 ಹಾಗೂ 6 ರಂದು ವ್ಶೆಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ  ಜನವರಿ 11 ಹಾಗೂ 12 ರಂದು ವ್ಶೆಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್ ಅವರೇ ತರಬೇಕು. ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ.

Goat rearing and animal training ಪಶುಪಾಲಕರಿಗಾಗಿ ಆರಂಭವಾಗಿದೆ ಸಹಾಯವಾಣಿ

ರಾಜ್ಯದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರಿಗಾಗಿ ಸರ್ಕಾರವು ಉಚಿತವಾಗಿ ಪಶುಪಾಲನೆ ಕುರಿತು ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದೆ. ರೈತರು ದಿನದ 24 ಗಂಟೆಯಲ್ಲಿ ಉಚಿತ ಸಹಾಯವಾಣಿ ನಂಬರ್ 8277 100 200 ಗೆ ಕರೆ ಮಾಡಿದರೆ ಸಾಕು, ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ರೈತರಿಗೆ ಬೇಕಾದ ಅಗತ್ಯ ಮಾಹಿತಿ ನೀಡುತ್ತಾರೆ.

ಇದನ್ನೂ ಓದಿ  13 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ

ಹೈನುಗಾರಿಕೆ, ಕುರಿ ಮತ್ತು ಮೇಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ದೇಶೀ ಹಾಗೂ ವಿದೇಶಿ ಜಾನುವಾರುಗಳ ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು. ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಮೀನು ಸಾಕಾಣಿಕೆ ತರಬೇತಿಗೆ ಹೆಸರು ನೋಂದಾಯಿಸಿ

ಕೃಷಿ ವಿಜ್ಞಾನ ಕೇಂದ್ರ ಬೀದರನಲ್ಲಿ ರಾಷ್ಟ್ರೀಯ ಮೀನು ಸಾಕಾಣಿಕೆ ಅಭಿವೃದ್ಧಿ ನಿಗಮ ಪ್ರಾಯೋಜನೆಯಡಿ ಜಿಲ್ಲೆಯ ಆಸಕ್ತ ರೈತರು ಮತ್ತು ಗ್ರಾಮೀಣ ಯುವ ಯುವತಿಯರಿಗಾಗಿ ಒಳನಾಡು ಮೀನು ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಒಳನಾಡು ಮೀನು ಸಾಕಾಣಿಕೆಯಲ್ಲಿ ಆಸಕ್ತವುಳ್ಳವರು ತಮ್ಮ ಹೆಸರನ್ನು ಜನವರಿ 5 ರೊಳಗೆ ನೋಂದಾಯಿಸಿಕೊಳ್ಳಬೇಕು. ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನೊಂದಿಗೆ ಕೃಷಿ ವಿಜ್ಞಾನ ಕೇಂದ್ರಕ್ಕೆ ಖುದ್ದಾಗಿ ಹಾಜರಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಬೀದರ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಸುನೀಲ್ ಕುರಮಾ ತಿಳಿಸಿದ್ದಾರೆ.

Leave a Comment