ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Goods vehicle purchase subsidies : ನಾಲ್ಕು ಚಕ್ರಗಳ ವಾಹನ ಖರೀದಿಗೆ ಸಹಾಯಧನ ನೀಡಲು ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು,  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಬ್ಸಿಡಿ  ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಾವಲಂಬಿ ಸಾರಥಿ ಯೋಜನೆಯೊಂದಿಗೆ ಇತರ ಅಂದರೆ ಗಂಗಾ ಕಲ್ಯಾಣ, ಹೊಲಿಗೆ ಯಂತ್ರ ವಿತರಣೆಗೆ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ನೀಡಲಾಗುವುದು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಹೆಸರಿಗೆ ಯಾವ ಯಂತ್ರೋಪಕರಣ ಮಂಜೂರಾಗಿದೆ? ಇಲ್ಲೇ ಚೆಕ್ ಮಾಡಿ

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್‌ದಲ್ಲಿ ಅರ್ಜಿ ಸಲ್ಲಿಸಬೇಕು.

Goods vehicle purchase subsidies  ಯೋಜನೆಯಲ್ಲಿ ಪ್ರಯೋಜನ ಪಡೆಯಲು ಇರಬೇಕಾದ ಅರ್ಹತೆಗಳು:

  1. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಅಭ್ಯರ್ಥಿಯು ಸರ್ಕಾರದ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ:03.2002ರಲ್ಲಿ ಗುರುತಿಸಿದ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಮತ್ತು ಇದರ ಉಪ ಸಮುದಾಯಗಳು, ಉಪ್ಪಾರ ಮತ್ತು ಇದರ ಉಪ ಸಮುದಾಯಗಳು, ಅಂಬಿಗ ಮತ್ತು ಇದರ ಉಪ ಸಮುದಾಯಗಳು ಸವಿತಾ ಮತ್ತು ಅದರ ಉಪ ಸಮುದಾಯಗಳು, ಮಡಿವಾಳ ಮತ್ತು ಅದರ ಉಪ ಸಮುದಾಯಗಳು, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳು ಒಕ್ಕಲಿಗ ಮತ್ತು ಅದರ ಉಪ ಸಮುದಾಯಗಳು, ಲಿಂಗಾಯತ ಮತ್ತು ಅದರ ಉಪ ಸಮುದಾಯಗಳು, ಮರಾಠ ಮತ್ತು ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)
  2. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
  3. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳನ್ನು ಮೀರಿರಬಾರದು.
  4. ಕರ್ನಾಟಕ ರಾಜ್ಯ ಖಾಯಂ ನಿವಾಸಿಯಾಗಿರಬೇಕು.
  5. ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 55 ವರ್ಷಗಳ ಮಿತಿಯೊಳಗಿರಬೇಕು.
  6. ಈ ಹಿಂದೆ/ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
  7. ಈ ಯೋಜನೆಯಲ್ಲಿ ಸವಲತ್ತು ಪಡೆಯ ಬಯಸುವ ಅರ್ಜಿದಾರರು ವಾಸಿಸುತ್ತಿರುವ ವ್ಯಾಪ್ತಿಗೆ ಬರುವ ಬ್ಯಾಂಕ್ ಶಾಖೆಯ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.
  8. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
  9. ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ್ ಸಂಯೋಜನೆಯಾಗಿರುವ ಖಾತೆ ಹೊಂದಿರಬೇಕು.

ಘಟಕ ವೆಚ್ಚ / ಸಾಲದ ಮೊತ್ತ:

ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ.50ರಷ್ಟು ಅಥವಾ ಗರಿಷ್ಠ ರೂ.3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು.  ಉಳಿದ ಮೊತ್ತವನ್ನು ಬ್ಯಾಂಕ್ / ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.

. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment