Gruhalakshmi scheme money ಈ ಮಹಿಳೆಯರಿಗೆ ಜಮೆ: ಮೊಬೈಲ್ ನಲ್ಲೇ ಇಲ್ಲೆ ಚೆಕ್ ಮಾಡಿ

Written by Ramlinganna

Published on:

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಮಹಿಳೆಯರ ಖಾತೆಗೆ ಯೋಜನೆಯ ಹಣ ಜಮೆಯಾಗಿದೆ. ಹೌದು,  ತಡವಾಗಿ ನೋಂದಣಿ ಮಾಡಿಸಿದ ಮಹಿಳೆಯರಿಗೂ ಈ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಜಮಯಾಗಿದೆ.

ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮೆಯಾಗಿದೆ? ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಮಹಿಳೆಯರು ಹೆಸರು ರೇಶನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯ,ಸ್ಥರೆಂದು  ನಮೂದಾಗಿರಬೇಕು. ನಿಮ್ಮ ಹೆಸರು ಕುಟುಂಬದ ಮುಖ್ಯಸ್ಥರೆಂದು ನಮೂದಿಸಲಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆ ರೇಶನ್ ಕಾರ್ಡ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಶೋ ವಿಲೇಜ್ ಲಿಸ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು.  ಆಗ ರೇಶನ್ ಕಾರ್ಡ್ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಅಲ್ಲಿಮಹಿಳೆಯ ಹೆಸರು ಮೊದಲು ಇರಬೇಕು. ಮಹಿಳೆಯ ಹೆಸರು ಇದ್ದರೆ ಅವರು ಕುಟುಂಬದ ಮುಖ್ಯಸ್ಥರಾಗಿರುತ್ತಾರೆ. ಈ ಮಹಿಳೆಯರ ಖಾತೆಗೆ ಹಣ ಜಮೆಯಾಗಿರುತ್ತದೆ.

ಗೃಹಲಕ್ಷ್ಮೀ ಯೋಜನೆಯ ಅರ್ಹತೆಗಳು

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.

ಹೌದು,  ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ. ಹೌದು ಮೇಲಿನ ಅರ್ಹತೆಯೊಂದಿಗೆ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಮಾತ್ರ ಹಣ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಇದನ್ನೂ ಓದಿ Baragala parihara ಜಮೆಯಾಗಲು ಕೂಡಲೇ ಇಲ್ಲಿ ನಿಮ್ಮ ಹೆಸರು ನೋಂದಾಯಿಸಿ

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಿರಬೇಕು. ಅರ್ಜಿದಾರರು ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕುಂಡಬಂದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.

ಗೃಹಲಕ್ಷ್ಮೀ ಯೋಜನೆಯ ಅನರ್ಹತೆಗಳು

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳಾಗಿರುತ್ತಾಳೆ.  ರೇಶನ್ ಕಾರ್ಡ್ ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.  ಅರ್ಜಿ ಸಲ್ಲಿಸುವಾಗ ರೇಶನ್ ಕಾರ್ಡ್ ನೊಂದಿಗೆ ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಚಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿರುತ್ತದೆ. ತಡೆಹಿಡಿಯಲಾದ ಅಥವಾ ರದ್ದು ಗೊಳಿಸಲಾದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುವುದಿಲ್ಲ. ಯೋಜನೆಗೆ ನೋಂದಣಿ ಮಾಡಿಸಿದರೂ ಸಹ ಅನರ್ಹತೆ ಹೊಂದಿದ್ದರೆ ಅವರ ಖಾತೆಗೆ ಹಣ ಜಮೆಯಾಗುವುದಿಲ್ಲ.

Leave a comment