Gruhalakshmi hana yarige jameyaguttade ರಾಜ್ಯ ಸರ್ಕಾರವು ಜಾರಿಗೆ ತಂದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಹಣ ಜುಲೈ ತಿಂಗಳ ಕಂತಿನ ಹಣ ಅಕ್ಟೋಬರ್ 7 ರಂದು ಆಗಸ್ಟ್ ತಿಂಗಳ ಕಂತಿನ ಹಣ 9 ರಂದು ಜಮೆಯಾಗುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಳೆದ ಗುರುವಾರ ಹೇಳಿಕೆ ನೀಡಿದ್ದರು.
ಮೇಲೆ ತಿಳಿಸಿದ ಎರಡೂ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಹೇಳಿದ್ದರು. ಈ ಹಣವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಹಾಗಾಗಿ ಈ ವಾರದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಲಾಾಗುತ್ತಿದೆ. ನಿಮಗೆ ಜಮೆಯಾಗಿದೆಯೋ ಇಲ್ಲವೋ ಕಾಮೆಂಟ್ ಮಾಡಿ.
ಗೃಹಲಕ್ಷ್ಮೀ ಯೋಜನೆಯ ಹಣವನ್ನು ಈಗಾಗಲೇ ರಾಜ್ಯ ಸರ್ಕಾರವು ಬಿಡುಗಡೆ ಮಾಡುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಆದರೆ ಗೃಹಲಕ್ಷೀ ಯೋಜನೆಗೆ ನೋಂದಣಿ ಮಾಡಿದ ಕೆಲವರಿಗೆ ಜಮೆಯಾದರೆ ಕೆಲವರಿಗೆ ಜಮೆಯಾಗಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾದರೂ ಹೆಸರು ನೋಂದಣಿ ಮಾಡಿಸಿದರೂ ಕೆಲವರಿಗೇಕೆ ಜಮೆಯಾಗಿಲ್ಲ ಎಂಬ ಸಂಶಯಕ್ಕೆ ಇಲ್ಲಿದೆ ಉತ್ತರ.
Gruhalakshmi hana yarige jameyaguttade ಗೃಹಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹರಿದ್ದಾರೆ?
ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಕಾಂಗ್ರೆಸ್ ಗೃಹಲಕ್ಷ್ಮೀ ಯೋಜನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವಂತಹ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗುತ್ತದೆ. ಒಂದು ವೇಳೆ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿ ಎಂದು ನಮೂದಾಗಿಲ್ಲವಾದರೆ ಆ ಮಹಿಳೆ ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ಅವರಿಗೆ ಜಮೆಯಾಗಲ್ಲ.
ತನ್ನ ಮಗನಿಗಾಗಿ ಅಪ್ಪ ಹೇಗೆ ಸಾಲಗಾರನಾಗುತ್ತಾನೆ? ಈ ಕೆಳಗಿನ ಫೋಟೋ ಕ್ಲಿಕ್ ಮಾಡಿ ಅದ್ಭುತವಾದ ವೀಡಿಯೋ ನೋಡಿ
ಗೃಹಲಕ್ಷ್ಮೀ ಯೋಜನೆಗೆ ಯಾರು ಅನರ್ಹರಾಗಿದ್ದಾರೆ?
ಗೃಹಲಕ್ಷ್ಮೀ ಯೋಜನೆಗೆ ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಅರ್ಹರಾಗಿರುವುದಿಲ್ಲ ಎನ್ನಲಾಗುತ್ತಿದೆ. ಆದರೆ ಈ ಕುರಿತು ಸರ್ಕಾರ ಅದಿಸೂಚನೆಯಲ್ಲಿ ತಿಳಿಸಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ.
ಇದನ್ನೂ ಓದಿ : ನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ವೃತ್ತಿ ತೆರಿಗೆ ಪಾವತಿ ಮಾಡುವವರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ.
ಪಡಿತರ ಚೀಟಿಯಲ್ಲಿ ಯಾರು ಮುಖ್ಯಸ್ಥರಿದ್ದಾರೆ? ಇಲ್ಲೇ ಚೆಕ್ ಮಾಡಿ
ಬಿಪಿಎಲ್, ಅಂತ್ಯೋದಯ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಕುಟುಂಬದ ಮುಖ್ಯಸ್ಥರು ಯಾರೆಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಇ ಪಡಿತ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಿದ ನಂತರ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ನಿಮ್ಮ ಊರು ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ ಕುಟುಂಬದ ಮುಖ್ಯಸ್ಥರು ಯಾರೆಂಬುದನ್ನು ಚೆಕ್ ಮಾಡಬಹುದು.
ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅವಕಾಶ
ಪಡಿತರ ಚೀಟಿ ಹೊಂದಿರುವ ಅದರಲ್ಲಿ ಪುರುಷ ಮುಖ್ಯಸ್ಥರಾಗಿರುವ ಕಾರ್ಡ್ ದಾರರು ಮಹಿಳಾ ಮುಖ್ಯಸ್ಥರೆಂದು ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ. ಏಕೆಂದರೆ ಗೃಹಲಕ್ಷ್ಮೀ ಯೋಜನೆಯ ಲಾಭ ಪುರುಷ ಮುಖ್ಯಸ್ಥ ಕುಟುಂಬ ಕಾರ್ಡ್ ಹೊಂದಿರುವವರಿಗೆ ಸಿಗುತ್ತಿಲ್ಲ ಈ ಕುಟುಂಬವು ಗೃಹಲಕ್ಷ್ಮೀ ಯೋಜನೆಯಿಂತ ವಂಚಿತರಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಮನೆ ಮುಖ್ಯಸ್ಥರ ಹೆಸರು ಬದಲಾವವಣೆಗೆ ಅವಕಾಶ ನೀಡಿದೆ.