ಐದು ದಿನ ಮೊದಲೇ ಇಲ್ಲಿ ಮಳೆ ಮಾಹಿತಿ ಸಿಗುತ್ತದೆ

Written by Ramlinganna

Updated on:

Heavy rain alert here ಮಳೆ ಬರುವ ಐದು ದಿನ ಮೊದಲೇ ಸಾರ್ವಜನಿಕರಿಗೆ ಮಳೆಯ ಮಾಹಿತಿ ನೀಡುತ್ತದೆ ಮೇಘದೂತ್ ಆ್ಯಪ್. ಹೌದು,ರೌತರು ಮೇಘದೂತ್ ಆ್ಯಪ್ ನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ಐದು ದಿನ ಮೊದಲೇ ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿಯನ್ನು ರೈತರು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

Heavy rain alert here ಐದು ದಿನ ಮೊದಲೇ ಮಳೆಯ ಮಾಹಿತಿ ಬೇಕೇ?

ರೈತರು ಐದು ದಿನ ಮೊದಲೇ ತಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ ಪ್ಸೇ ಸ್ಟೋರ್ ನಲ್ಲಿ Meghdoot ಎಂದು ಟೈಪ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

ನೀವು ಇಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬಹುದು. ನಂತರ ನೀವು ಯಾವ ಯಾವ ಮಾಹಿತಿಗಳನ್ನು ಚೆಕ್ ಮಾಡಬಹುದು ಎಂಬುದು ಕಾಣಿಸುತ್ತದೆ. ನಂತರ ಮುಂದೆ ಮೇಲೆ ಕ್ಲಿಕ್ ಮಾಡಿದ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕಾಗುತ್ತದೆ. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಪಿಎಂ ಕಿಸಾನ್ ಅನರ್ಹ ರೈತರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿರುವವರಿಗೆ ಹಣ ಜಮೆಯಾಗಲ್ಲ

ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತತ್ದೆ. ಅಲ್ಲೇ ಕಾಣುವ ಮುನ್ಸೂಚನೆ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಮುಂದಿನ ಐದು ದಿನಗಳ ಕಾಲ ಹವಾಮಾನದ ವರದಿ ಕಾಣಿಸುತ್ತದೆ.

ಫೋನ್ ಮೂಲಕವೂ ಮಳೆಯ ಮಾಹಿತಿ ಪಡೆಯುವುದು ಹೇಗೆ?

ರೈತರು ತಮ್ಮ ಬಳಿಯಿರುವ ಫೋನ್ ನಿಂದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿಯೂ ಮಳೆಯ ಮಾಹಿತಿ ಪಡೆಯಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್

92433 45433 ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಪಡೆಯಬಹುದು.

ಈ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಈ ಮಾಹಿತಿ ಸಂಪೂರ್ಣ ಉಚಿತವಾಗಿರುತ್ತದೆ. ರೈತರು ಈ ಆ್ಯಪ್ ಸಹಾಯದಿಂದ ಹವಾಮಾನದ ಮಾಹಿತಿ ಪಡೆದು ತಮ್ಮ ಕೃಷಿ ಚಟುವಟಿಕೆಯನ್ನು ಮುಂದುವರಿಸಬಹುದು. ಇಂದು ಬಹಳಷ್ಟು ರೈತರು ಈ ಉಚಿತ ಸಹಾಯವಾಣಿಗೆ ಕರೆ ಮಾಡಿ ಹವಾಮಾನ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Leave a Comment