ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ

Written by Ramlinganna

Published on:

Heavy rain alert in these district ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು  ವಾರ ಮಳೆಯಾಗಲಿದೆ. ಅದರಲ್ಲೂ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಳಗಾವಿ, ಗದಕ, ಧಾರವಾಡ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಶಿವಮೊಗ್ಗ, ವಿಜಯನಗರ, ತುಮಕೂರು, ಕೊಡಗು,  ಹಾಸನ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಹಾಗೂ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Heavy rain alert in these district  ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

 ಕಾರ್ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Taxi car purchase subsidy : ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ, ಟಾಟಾ ಎಸಿ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು  ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ? ಇಲ್ಲೇ ಚೆಕ್ ಮಾಡಿ

ಅರಿವು ಶೈಕ್ಷಣಿಕ ಸಾಲ ಯೋಜನೆ (ಫ್ರೆಶ್ ಸ್ಟುಡೆಂಟ್ಸ್), ಅರಿವು ಶೈಕ್ಷಣಿಕ ಸಾಲ ಯೋಜನೆ (ರಿನಿವಲ್), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು (ಫ್ರೆಶ್ ಸ್ಟುಡಂಟ್ಸ್), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 225 ಬಿಸಿಎ 2000, ದಿನಾಂಕ 30.03.2002ರ ಆದೇಶದಲ್ಲಿನ ಪ್ರವರ್ಗ-1ರ 6(ಚಿ) ಯಿಂದ 6(ಚಿಞ) ವರೆಗೆ ಬರುವ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗೆ ಸೇರಿದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ 2025ರ ಜುಲೈ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ

https://ambigaradevelopment.karnataka.gov.in/

080-22864099 ಅಥವಾ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ  ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635ಗೆ  ಸಂಪರ್ಕಿಸಲು ಕೋರಲಾಗಿದೆ

Leave a Comment