ಕರಾವಳಿಯಲ್ಲಿ 25 ರವರೆಗೆ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್

Written by By: janajagran

Updated on:

Heavy rain in 13 district ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 25ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 13 ಜಿನಲ್ಲೆಗಳಲ್ಲಿ  ಮಳೆಯಾಗಲಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗದೆ.

ಉತ್ತರಕನ್ನಡ, ದಕ್ಷಿಣಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು ಮೇ 22ರಂದು ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 26 ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಲಯಲಿದೆ. ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Heavy rain in 13 district ಶುಕ್ರವಾರ ರಾಜ್ಯ ವಿವಿಧೆಡೆ ಮಳೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಬೆಳಗಾವಿ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ಹೊಸಪೇಟೆಯಲ್ಲಿ ಧಾರಾಕಾರ ಮಳೆಯಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಅಲ್ಲಲ್ಲಿ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಹಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದೆ.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ತೌಕ್ತೆ ಚಂಡಮಾರುತದ ನಂತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಹೊತ್ತಿನಲ್ಲಿ ಮಳೆ ಸುರಿಯುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯವ್ಯಾಪಿ ಮಳೆ ಪ್ರಮಾಣ ಕಡಿಮೆ ಆಗಿದೆಯಾದರೂ ಮಲೆನಾಡು, ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪು ಹವೆಯ ಪರಿಣಾಮ ಮಳೆಗಾಲದ ವಾತಾವರಣದಂತೆಯೇ ಪರಿಸರ ಕಾಣಿಸುತ್ತಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ.

ಯಾವ ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಿಮ್ಮ ಜಿಲ್ಲೆಯಲ್ಲಿ ಯಾವಾಗ ಮಳೆಯಾಗಲಿದೆ?

ನಿಮ್ಮ ಜಿಲ್ಲೆಯಲ್ಲಿ ಯಾವಾಗ ಮಳೆಯಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.  ಈ ಉಚಿತ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಹಾಗಾಗಿ ರೈತರು ಯಾವುದೇ ಸಮಯದಲ್ಲಿ ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಈಗಲೇ ಕರೆ ಮಾಡಿ ಮಳೆಯ ಮಾಹಿತಿ ಪಡೆಯಿರಿ

Leave a Comment