ಜೀವಜಲ ಯೋಜನೆಯಡಿ ರೈತರಿಗೆ ಸಿಗಲಿದೆ 3 ಲಕ್ಷ ಸಬ್ಸಿಡಿ

Written by Ramlinganna

Published on:

Jeevajala scheme subsidy : ಜೀವಜಲ ಯೋಜನೆ ಅಡಿಯಲ್ಲಿ ರೈತರಿಗೆ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ. ಹೌದು, ರೈತರು ಎಲ್ಲಿ  ಅರ್ಜಿ  ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು? ಯಾರು ಯಾರು ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಯ (ಪ್ರವರ್ಗ-3ಬಿ) ಸೇರಿದ ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Jeevajala scheme subsidy ಜೀವ ಜಲ ಯೋಜನೆ ಸೇರಿದಂತೆ ಯಾವ ಯಾವ ಸೌಲಭ್ಯ ಸಿಗಲಿದೆ?

ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ (ಫ್ರೇಶ್ ಸ್ಟುಡೆಂಟ್ಸ್) (Fresh Students), ಬಸವ ಬೆಳಗು ಯೋಜನೆ (ರಿನಿವಲ್ಸ್) (Renewals),  ವಿದೇಶ ವಿದ್ಯಾವಿಕಾಸ ಯೋಜನೆ (ಫ್ರೇಶ್ ಸ್ಟುಡೆಂಟ್ಸ್) (Fresh Students) ಹಾಗೂ ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ,  ಸ್ವಾವಲಂಭಿ ಸಾರಥಿ ಯೋಜನೆ,  ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ದಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಅಭ್ಯರ್ಥಿಗಳು

https://www.kaushalkar.com

ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಹ ಫಲಾನುಭವಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ 2025ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ

https://kvldcl.karnataka.gov.in

ವೆಬ್‌ಸೈಟ್‌ನ್ನು ಅಥವಾ ಹಾಗೂ ದೂರವಾಣಿ ಸಂಖ್ಯೆ 080-22865522/ 9900012351/ 9900012352  ಹಾಗೂ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು    ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ ಟ್ರ್ಯಾಕ್ಟರ್ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆಯಡಿಯ ಶೈಕ್ಷಣಿಕ ಸಾಲ ಯೋಜನೆ (ಫ್ರೇಶ್ ಸ್ಟುಡೆಂಟ್ಸ್) (Fresh Students) ಮತ್ತು ಶೈಕ್ಷಣಿಕ ಸಾಲ ಯೋಜನೆ (ರಿನಿವಲ್)( Renewal,  ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ  (ಫ್ರೇಶ್ ಸ್ಟುಡೆಂಟ್ಸ್) (Fresh Students) ಅರ್ಜಿದಾರರು ಸೇವಾಸಿಂಧು ಪೋರ್ಟಲ್, ಗ್ರಾಮ ಒನ್/ಕಲಬುರಗಿ ಒನ್ / ಕರ್ನಾಟಕ ಒನ್ ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರ‍್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ  ಯೋಜನೆಯಡಿ ಅರ್ಜಿಯನ್ನು   ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ    https://www.kaushalkar.com    ವೆಬ್‌ಸೈಟ್‌ದಲ್ಲಿ  2025ರ ಜುಲೈ 2ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (ಉoತಿಜಚಿ) / ಗೌಡ  (ಉouಜಚಿ),  ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ / ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ  ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ   https://kvcdc.karnataka.gov.in

ವೆಬ್‌ಸೈಟ್‌ನ್ನು ಅಥವಾ ನಿಗಮದ ದೂರವಾಣಿ ಸಂಖ್ಯೆ 080-29904350, 29904268 ಗೆ ಅಥವಾ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ/ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ   ನಿಗಮದ ಕಚೇರಿ ದೂರವಾಣಿ ಸಂಖ್ಯೆ  08472-278635 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment