ಕಿಸಾನ್ ಕ್ರೇಡಿಟ್ ಕಾರ್ಡ್ ದಿಂದ 3 ಲಕ್ಷ ರೂಪಾಯಿ ಪಡೆಯಿರಿ

Written by Ramlinganna

Updated on:

Kisan credit card benefits ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರು  ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇ. 4 ರ ಬಡ್ಡಿ ದರದಲ್ಲಿ ಯಾವುದೇ ಅಡಮಾನವಿಲ್ಲದೆ 1.6 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುವುದು. ಕಿಸಾನ್ ಕ್ರೆಡಿಟ್ ಕಾರ್ಡ್ ದಿಂದ ರೈತರು 3 ಲಕ್ಷ ರೂಪಾಯಿಯವರೆಗೆ ಸಾಲ ಪಡೆಯಬಹುದು. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಯಾವ ರೈತರು ಅರ್ಜಿ ಸಲ್ಲಿಸಬೇಕು? ಈ ಕಾರ್ಡ್ ದಿಂದ ರೈತರಿಗೆ ಉಪಯೋಗಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Kisan credit card benefits ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬೇಕಾದ ಅರ್ಹತೆಗಳು

ಅರ್ಜಿದಾರರು ರೈತರಾಗಿರಬೇಕು. ಈ ಕಾರ್ಡನ್ನು ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗೆ ಸಾಲ ನೀಡಲಾಗುವುದು. ಅರ್ಜಿದಾರರ ವಯಸ್ಸು 18 ರಿಂದ 75 ವಯೋಮಾನದೊಳಗಿರಬೇಕು. ರೈತರ ಬಳಿ ಜಮೀನಿನ ದಾಖಲೆ ಇರಬೇಕು. ಆಧಾರ್ ಕಾರ್ಡ್  ಹೊಂದಿರಬೇಕು. ಪಾಸ್ ಪೋರ್ಟ್ ಸೈಜಿನ ಫೋಟೋ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ರೈತರು ಬೇರೆ ಯಾವುದೇ ಬ್ಯಾಂಕಿನಲ್ಲಿ ಸಾಲ ಪಡೆದಿರಬಾರದು.

ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಎಲ್ಲಿ ಸಿಗುತ್ತದೆ?

ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಎಲ್ಲಾ ಬ್ಯಾಂಕಿನಲ್ಲಿ ಸಿಗುತ್ತದೆ. ನೀವು ಆನ್ಲೈನ್ ನಲ್ಲಿ ಅರ್ಜಿ ಪಡೆಯಬೇಕಾದರೆ ಈ

https://pmkisan.gov.in/Documents/Kcc.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು, ಆಗ ಕಿಸಾನ್ ಕ್ರೆಡಿಟ್ ಕಾರ್ಡ್ ಫಾರ್ಮ್ ಓಪನ್ ಆಗುತ್ತದೆ. ಇದನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೇಳಲಾದ ಎಲ್ಲಾ ದಾಖಲೆಗಳನ್ನು ಹತ್ತಿರದ ಬ್ಯಾಂಕಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಬ್ಯಾಂಕ್ ಮ್ಯಾನೇಜರ್ ಅರ್ಜಿ ಪರಿಶೀಲಿಸಿ 15 ದಿನಗಳೊಳಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವರು. ಈ ಕಾರ್ಡ್ ಸಹಾಯದಿಂದ ರೈತರು 3 ಲಕ್ಷ ರೂಪಾಯಿಯವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವಾಗ ನಿಮ್ಮ ಹಳೆಯ ಕೃಷಿ ಸಾಲದ ಬಗೆಗಿನ ಸಂಪೂರ್ಣ ಮಾಹಿತಿ ನೀಡಬೇಕಾಗುತ್ತದೆ. ಅದರ ಬಗ್ಗೆ ಸರಿಯಾದ ಮಾಹಿತಿಯನ್ನು ಒದಗಿಸದಿದ್ದರೆ ಕಿಸಾನ್ ಕ್ರೇಡಿಟ್ ಕಾರ್ಡ್ ನೀಡಲಾಗುವುದಿಲ್ಲ. ಮೂರು ವರ್ಷಗಳ ಅವಧಿಗೆ ಸಾಲ ಲಭ್ಯವಿರುತ್ತದೆ.

ಯಾವ ಚಟುವಟಿಕೆಗಳಿಗೆ ಸಾಲ ಪಡೆಯಬಹುದು?

ರೈತರು ತಮ್ಮ ಹೊಲಗಳಿಗೆ ಬಿತ್ತನೆ ಮಾಡುವುದು, ಬೆಳೆಗಳಿಗೆ ರಸಗೊಬ್ಬರ ಹಾಕುವುದು ಸೇರಿದಂತೆ ಇತರ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಕಿಸಾನ್ ಕ್ರೇಡಿಟ್ ಕಾರ್ಡ್ ಬಳಸಬಹುದು.

ಮೀನುಗಾರಿಕೆಗೆ ವಿಸ್ತರಣೆಯಾಯಿತು ಕಿಸಾನ್ ಕ್ರೆಡಿಟ್ ಕಾರ್ಡ್

ರೈತರ ಬಳಿ ಕಿಸಾನ್ ಕ್ರೇಡಿಟ್ ಕಾರ್ಡ್ ಇದ್ದರೆ ನಿಮ್ಮ ಹತ್ತಿರದ ಬ್ಯಾಂಕುಗಳಿಂದ ನಿಮಗೆ ಕೃಷಿ ಚಟುವಟಿಕೆ, ಪಶುಪಾಲನೆಗೆ ಹಾಗೂ ಮೀನುಗಾರಿಕೆಗೂ ಸಾಲ ಸೌಲಭ್ಯ ನೀಡಬೇಕೆಂದು ಇತ್ತೀಚೆಗೆ ಮುಖ್ಯಮಂತ್ರಿಯುವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಆದ್ಯತೆ ಮೇಲೆ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿಮೊಬೈಲ್ ನಲ್ಲೇ ಚೆಕ್ ಮಾಡಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಸ್ಟೇಟಸ್

ಅವರು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ ಮೀನುಗಾರರಿಗೆ ಮೊದಲ ಹಂತದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ತ್ವರಿತವಾಗಿ ವಿತರಿಸುವಂತೆ ಸೂಚಿಸಿದ್ದಾರೆ. ಪ್ರ,ಸ್ತುತ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ವ್ಯಾಪ್ತಿಗೆ ಕೃಷಿ, ಪಶುಸಂಗೋಪನೆ, ಈಗ ಮೀನುಗಾರಿಕೆಯನ್ನು ಸೇರಿಸಲಾಗಿದೆ.ಈ ಕಾರ್ಡ್ ಮೂಲಕ ರೈತರಿಗೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.

Leave a Comment