ರಾಜ್ಯದ ಕರಾವಳಿಯಾದ್ಯಂತ ಮುಂಗಾರು (Monoon) ಮಳೆಯ ಅಬ್ಬರ ಜೋರಾಗಿತ್ತು. ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡ ರಭಸದ ಮಳೆ ಶನಿವಾರ ಇಡೀ ದಿನ ಧಾರಾಕಾರವಾಗಿ ಸುರಿದಿದೆ.

ಮುಂಗಾರು ಹಾಗೂ ಪೂರ್ವ ಅರಬ್ಬಿ ಸಮುದ್ರ-ಬಂಗಾಳ ಉಪಸಗಾರದಲ್ಲಿ ವಾಯುಭಾರ ಕುಸಿತ ಮತ್ತು ಮೈಲ್ಮೈ ಸುಳಿಗಾಳಿ ಉಂಟಾಗಿದ್ದರಿಂದ ರಾಜ್ಯ ಕರಾವಳಿ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಭಾರೀ ಮಳೆ(Hevy rain) ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲುಸಹಿತ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಆರೇಂಜ್ ಅಲರ್ಟ್ (Orange alert)ಘೋಷಿಸಲಾಗಿದೆ. ಪ್ರತಿಗಂಟೆಗೆ 50.ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ಯಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ.

ಸಮುದ್ರದಲ್ಲಿ 45  ರಿಂದಜ 55 ಕಿ.ಮೀ ವೇಗದಲ್ಲಿ ಗಾಳಇ ಬೀಸುವ ಸಾಧ್ಯತೆಯಿರುವುದರಿಂದ ಬಹಳಷ್ಟು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಐದು ದಿನಗಳ ಮೊದಲೇ ಮಳೆಯ ಮುನ್ಸೂಚನೆ ಪಡೆಯುವ (Meghdoot app) ಆ್ಯಪ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರು, ಯಾದಗಿರಿ, ಹಾಸನ, ಕೊಡಗು, ಶಿವಮೊಗ್ಗ, ವಿಜಯಪುರ, ಕೊಪ್ಪಳ, ಬೆಳಗಾವಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಸಹ ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ.

ರಾಜ್ಯದಲ್ಲಿ ಚುರುಕುಗೊಂಡ ಮಳೆ- ಶನಿವಾರ ರಾತ್ರಿ ಬಹುತೇಕ ಜಿಲ್ಲೆಗಳಲ್ಲಿ ಸುರಿದ ಮಳೆ

ಕರಾವಳಿ ಭಾಗದಲ್ಲಿ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದಿದೆ. ಮಂಗಳೂರು, ಉಡುಪಿ, ಕಲಬುರಗಿ, ಯಾದಗಿರಿ ಜಿಲ್ಲೆಯಾದ್ಯಂತ ಶನಿವಾರ ಉತ್ತಮ ಮಳೆಯಾಗಿದೆ.ಮಂಗಳೂರಿನಲ್ಲಿ ಶನಿವಾರ ರಾತ್ರಿ ದಿನಪೂರ್ತಿ ಮಳೆಯಾಗಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರವೂ ಬಿರುಸುಗೊಂಡಿದೆ.

ಮಹಾರಾಷ್ಟ್ರದ ಮುಂಬೈನಲ್ಲಿಯೂ ಬಿರುಸುಗೊಂಡ ಮಳೆ

ವಾಣಿಜ್ಯ ನಗರ ಮುಂಬೈಯಲ್ಲಿ ಬಿರುಗಾಳಿ ಮತ್ತು ಗುಡುಗುಸಹಿತ ಮಳೆಯಾಗಿದೆ. ಶನಿವಾರ ಇಡೀ ದಿನ ಧಾರಾಕಾರ ಮಳೆ ಸುರಿದಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಎಱಡು ದಿನ ಮುಂಬೈಯಲ್ಲಿ ಮಳೆಯಾಗಲಿದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *