ನಾಲ್ಕು ದಿನ ಮುಂಚಿತವಾಗಿ ಮುಂಗಾರು ಪ್ರವೇಶ

Written by By: janajagran

Updated on:

Monsoon ಭಾರತೀಯ ರೈತರ ಜೀವನಾಡಿ ಎಂದು ಕರೆಯಲ್ಪಡುವ ನೈಋರುತ್ಯ ಮಾನ್ಸೂನ್ (ಮುಂಗಾರು ಮಳೆ)  ಈವರ್ಷ ತೌಕ್ತೆ, ಯಾಸ್ ಚಂಡಮಾರುತದಪರಿಣಾಮವಾಗಿ ನಾಲ್ಕು ದಿನಗಳ  ಮುಂಚಿತವಾಗಿಯೇ ರಾಜ್ಯಕ್ಕೆ ಮುಂಗಾರುಪ್ರವೇಶಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು ಪ್ರತಿವರ್ಷ  ಕೇರಳದ ಕಡೆಯಿಂದ ನೈಋತ್ಯ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಿಸುತ್ತಿತ್ತು. ಆದರೆ ಈ ವರ್ಷ ತೌಕ್ತೆ ಮತ್ತು ಯಾಸ್ ಚಂಡಮಾರುತದ ಪರಿಣಾಮವಾಗಿ ನಾಲ್ಕು ದಿನಗಳ ಮೊದಲೇ ರಾಜ್ಯಕ್ಕೆ ಪ್ರವೇಶಿಸಲಿದೆ.

Monsoon ಮುಂಗಾರು ಮಳೆ ಹೇಗಿರುತ್ತದೆ?

ಸಾಮಾನ್ಯವಾಗಿ ಮುಂಗಾರು ಕಾಲದಲ್ಲಿ ಗುಡುಗು, ಸಿಡಲಿನ ಆರ್ಭಟ ಹೆಚ್ಚು ಇರುವುದಿಲ್ಲ. ಆದರೆ ತೌಕ್ತೆ ಮತ್ತು ಯಾಸ್ ತಂಡಮಾರುತದ ಪರಿಣಾಮವಾಗಿ ಅಬ್ಬರದ ಮಳೆಯಾಗಲಿದೆ.

ರೈತರು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿರುವುದರಿಂದ ಜೂನ್‌ ಮೊದಲ ಎರಡು ವಾರಗಳಲ್ಲಿ ದೇಶದ ಅರ್ಧ ಭಾಗದಲ್ಲಿ ಮುಂಗಾರು ಚುರುಕುಗೊಂಡು ಕೃಷಿ ಚಟುವಟಿಕೆಗಳಿಗೆ ವೇಗ ದೊರೆಯಲಿದೆ. ಲಾಕ್‌ಡೌನ್‌ನಿಂದ ಬಹುತೇಕ ವಲಸೆ ಕಾರ್ಮಿಕರು ಮಹಾನಗರಗಳಿಂದ ಹಳ್ಳಿಗಳಿಗೆ ವಾಪಸ್‌ ಹೋಗಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.
ಭಾರತವು ನಾಲ್ಕು ತಿಂಗಳ ಮಳೆಗಾಲದಲ್ಲಿ ತನ್ನ ವಾರ್ಷಿಕ ಮಳೆಯ ಸುಮಾರು 70% ಮುಂಗಾರು ಮಳೆಯ ಮೇಲೆ ಆಧಾರವಾಗಿರುತ್ತದೆ. ದೇಶದಲ್ಲಿ ಈಗಲೂ ಸಹ ಶೇ. 50 ರಷ್ಟು ರೈತರು ಮುಂಗಾರು ಮೇಲೆಯೇ ಅವಲಂಬನೆಯಾಗಿರುತ್ತಾರೆ. ಮಳೆಯ ಮೇಲೆಯೇ ಅವಲಂಬಿತ ಕೃಷಿಕರ ಕೃಷಿ ಆರ್ಥಿಕತೆಗೆ ನಿರ್ಣಾಯಕವಾಗಿದೆ.

ಇದನ್ನೂ ಓದಿ ಚುನಾವಣೆ ಘೋಷಣೆ Voter listನಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಜೂನ್ 1 ರ ಸುಮಾರಿಗೆ ಕೇರಳಕ್ಕೆ ಅಪ್ಪಳಿಸುವ ಮತ್ತು ಜುಲೈ ಮಧ್ಯಭಾಗದಲ್ಲಿ ದೇಶದ ಉಳಿದ ಭಾಗಗಳನ್ನು ಆವರಿಸುವ ಸಾಮಾನ್ಯ ಮಾನ್ಸೂನ್ ಕೃಷಿ ವಲಯಕ್ಕೆ, ವಿಶೇಷವಾಗಿ ಈ ವರ್ಷ ಅನಿವಾರ್ಯವಾಗಿದೆ. ಕೊರೋನಾದಿಂದ ಸಂಕಷ್ಟದಲ್ಲಿರುವ ರೈತರಿಗೆ ಮುಂಗಾರು ಮಳೆಯೇ ಜೀವನಾಧಾರವಾಗಿದೆ.

ಈ ವರ್ಷ ಮುಂಗಾರು ಬಿರುಸು ಕಡಿಮೆ

ರಾಜ್ಯಕ್ಕೆ ಪ್ರವೇಶವಾಗಿರುವ ಮುಂಗಾರು ಅಷ್ಟೊಂದು ಬಿರುಸು ಕಾಣಿಸುತ್ತಿಲ್ಲ. ಹೀಗಾಗಿ ನಿರೀಕ್ಷಿತ ಮಳೆಯಾಗುವ ಸಾಧ್ಯತೆ ಕಡಿಮೆ ಕಾಣಿಸುತ್ತಿದೆ. ಈಗಾಗಲೇ ಜೂನ್ 11 ಆಗಿದ್ದು,ಆದರೂ ಸಹ ರಾಜ್ಯದ ವಿವಿಧ ಕಡೆ ಇನ್ನೂ ಮುಂಗಾರು ಮಳೆಯ ಒಂದು ಹನಿಯೂ ಉದುರಿಲ್ಲ. ಹಾಗಾಗಿ ಕೆಲವು ಕಡೆ ರೈತರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ

ಚಂಡಮಾರುತದ ಮತ್ತಷ್ಟು ಬಿರುಸು

ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್ ಜೋಯ್ ಚಂಡಮಾರುತ ಭಾನುವಾರ ಮತ್ತಷ್ಟು ತೀವ್ರತೆ ಪಡೆಯುವ ಸಾಧ್ಯತೆಯಿದೆ. ಮಾರುತವು ಉತ್ತರ ಮತ್ತು ಈಶಾನ್ಯ ದಿಕ್ಕಿನತ್ತ ಮುನ್ನುಗ್ಗುತ್ತಿದ್ದು, ಭಾನುವಾರ ಅಥವಾ ಸೋಮವಾರ ಗುಜರಾತ್ ನ ದಕ್ಷಿಣ ಭಾಗವನ್ನು ಸಮೀಪಿಸುವ ಸಾಧ್ಯತೆಯಿದೆ.

ಚಂಡಮಾರುತ ನಿಖರವಾಗಿ ಎಲ್ಲಿ ಅಪ್ಪಳಿಸಲಿದೆ ಎಂದು ಇನ್ನೂ ಖಚಿತಗೊಂಡಿಲ್ಲವಾದರೂ ಭಾರತದ ಕರಾವಳಿ ರಾಜ್ಯಗಳಾದ ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ಗಳಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಗುಜರಾತ್ ನ ವಲ್ಲದ್ ತಿಧಾಲ್ ಬೀಚ್ ಅನ್ನು ಜೂನ್ 14 ರವರೆಗೆ ಮುಚ್ಚಲಾಗಿದೆ. ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಉಳಿದಂತೆ ದೇಶದ ಕರಾವಳಿ ರಾಜ್ಯಗಳ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜೊತೆಗೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Comment