ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಸಹಕರಿಸಬೇಕು: ಬಿ.ಸಿ. ಪಾಟೀಲ್

Written by By: janajagran

Updated on:

no restrictions on farming activities ದೈನಂದಿನ ಕೃಷಿ ಚಟುವಟಿಕೆಗಳಿಗೆ ಮತ್ತು ಕೃಷಿ ಇಲಾಖೆಗೆ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚಿಸಿದ್ದಾರೆ.

no restrictions on farming activities ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಸಹಕರಿಸಬೇಕು

ವಿಕಾಸಸೌಧದ ಕಚೇರಿಯಲ್ಲಿ ಮಾತನಾಡಿದ ಅವರು, ಹೂವು, ಹಣ್ಮು, ದವಸಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್.ಟಿ.ಓ ಸೇರಿದಂತೆ ಯಾರೂ ತೊಂದರೆ ಮಾಡಬಾರದು. ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲಿ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ಮುಂಗಾರು ಬಿತ್ತನೆ ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಾಗಲಿ, ರೈತಸಂಪರ್ಕ ಕೇಂದ್ರಗಳಾಗಲಿ, ಬಿತ್ತನೆ ಕಾರ್ಯಕ್ಕಾಗಲಿ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು ಎಂದಿದ್ದಾರೆ.

ಇದನ್ನೂ ಓದಿ Rain alert these area ಮಾರ್ಚ್ 9ರವರೆಗೆ ಮಳೆಯ ಮುನ್ಸೂಚನೆ

ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಅಧಿಕಾರಿಗಳು ಈ ರೀತಿ ಮಾಡಿರುವುದು ತಪ್ಪು. ಎಲ್ಲಾ ಇಲಾಖೆಯ ಅಧಿಕಾರಿಗಳು ರೈತರಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕೊರಾನಾ ಸುರಕ್ಷತಾ ಕ್ರಮಗಳೊಂದಿಗೆ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಈ ನಂಬರಿಗೆ ಕರೆ ಮಾಡಿ ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆಯಿರಿ

ರಾಜ್ಯದ ರೈತರಿಗೆ ಅನುಕೂಲವಾಗಲೆಂದು ಕೃಷಿಗೆ ಸಂಬಂಧಿಸಿದ ಹೆಲ್ಪ್ ಲೈನ್ ಆರಂಭಿಸಿದೆ. ಹೌದು, ಈ ನಂಬರಿಗೆ ಕರೆ ಮಾಡಿದರೆ ಸಾಕು, ಒಂದೇ ನಿಮಿಷದಲ್ಲಿ ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಹಾಗಾದರೆ ಕೃಷಿಗೆ ಸಂಬಂಧಿಸಿದ ಯಾವ್ಯಾವ ಮಾಹಿತಿ ಪಡೆಯಬಹುದು? ಕೃಷಿಗೆ ಸಂಬಂಧಿಸಿದ ಹೆಲ್ಪ್ ಲೈನ್ ನಂಬರ್ ಯಾವುದು? ಈ ಹಿಂದಿನ ಹಳೆ ನಂಬರ್ ಗಳು ಕಾರ್ಯನಿರ್ವಹಿಸುತ್ತವೆಯೋ ಇಲ್ಲವೋ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಕೃಷಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಈ ಹಿಂದೆ 8 ಪ್ರತ್ಯೇಕ ಹೆಲ್ಪ್ ಲೈನ್ ನಂಬರ್ ಗಳಿದ್ದವು. ಈಗ ಇವುಗಳ ಬದಲಾಗಿ ಒಂದು ಸಹಾಯವಾಣಿಯನ್ನು ಆರಂಭಿಸಲಾಗಿದೆ. ರೈತರು ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆಯಲು 1800 425 3553 ಗೆ ಕರೆ ಮಾಡಿದರೆ ಸಾಕು, ಕೃಷಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯಬಹುದು. ಹೌದು, ರೈತರಿಗೆ ಎಲ್ಲಾ ಮಾಹಿತಿಸಿಗಲಿದೆ.

ಕೃಷಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ ಲೈನ್ ನಂಬರನ್ನು ಕೃಷಿ ಸಚಿವರ ಲೋಕಾರ್ಪಣೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಚಲುವರಾಯ ಸ್ವಾಮಿ, ಬೆಳೆ, ಹವಾಮಾನ, ವಿಮೆ, ರೈತ ವಿದ್ಯಾನಿಧಿ, ಕೃಷಿ ಸಂಜೀವಿನಿ ಮತ್ತಿತರ ಮಾಹಿತಿ ಪಡೆಯಲು 8 ಪ್ರತ್ಯೇಕ ಕರೆ ಸಂಖ್ಯೆಗಳಿದ್ದವು.ರೈತರಿಗೆ ಸುಲಭವಾಗಿ ಮಾಹಿತಿ ದೊರೆಯಲು ಇದೀಗ ನೂತನ ಸಹಾಯವಾಣಿ ಸಂಖ್ಯೆ 1800 425 3553 ಸ್ಥಾಪಿಸಿದ್ದು, ಎಲ್ಲಾ ಮಾಹಿತಿ ಪಡೆಯಬಹುದು ಎಂದು ಸ್ಪಷ್ಟಪಡಿಸಿದರು.

ಮಾಹಿತಿ ಹಾಗೂ ತಾಂತ್ರಿಕ ನೆರವಿನ ಜತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೂ ಇಲಾಖೆ ಮುಂದಾಗಿದೆ. ರೈತರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಬೆಳೆ ಸಮೀಕ್ಷೆ ಕೂಡ ಪ್ರಮುಖವಾಗಿದೆ. ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ನಡೆಸುವವರಿಗೆ ರಾಜ್ಯಮಟ್ಟದಲ್ಲಿ ಬೆಳೆ ಸಮೀಕ್ಷೆ ಮಾಸ್ಟರ್ ತರಬೇತುದಾರರ ತರಬೇತಿ ಹಮ್ಮಿಕೊಳ್ಳಲಾಗಿದೆ. ಎಲ್ಲಾಸಿಬ್ಬಂದಿ ಜವಾಬ್ದಾರಿಯಿಂದ ರೈತರ ಹಿತ ಗಮನದಲ್ಲಿ ಇಟ್ಟುಕೊಂಡು ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

Leave a Comment