ಶೇ. 75 ರಷ್ಟು ರಿಯಾಯಿತಿ ದರದಲ್ಲಿ ಭತ್ತ ವಿತರಿಸಲು ಅರ್ಜಿ ಆಹ್ವಾನ

Written by By: janajagran

Updated on:

paddy seed subsidy ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ವ್ಯಾಪ್ತಿಯ ರೈತರಿಗೆ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

paddy seed subsidy ಸಬ್ಸಿಡಿಯಲ್ಲಿ ಭತ್ತ ಎಲ್ಲಿ ವಿತರಿಸಲಾಗುವುದು?

ಕಸಬಾ ಹೋಬಳಿಯ ರೈತರಿಗೆ ಟಿಎಪಿಸಿಎಂಎಸ್,ಕಸಬಾ, ಕೆರೆತೊಣ್ಣೂರು, ಕ್ಯಾತನಹಳ್ಳಿ, ಕೆ. ಬೆಟ್ಟಹಳ್ಳಿ, ಪ್ರಾಥಮಿಕ  ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ, ಚಿನಕುರಳಿ ವ್ಯಾಪ್ತಿಯ ರೈತರಿಗೆ ಚಿನಕುರಳಿ, ಹರವು ಹಾಗೂ ಚಿಕ್ಕಯಾರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ ಮತ್ತು ಮೇಲುಕೋಟೆ ಹೋಬಳಿಯ ರೈತರಿಗೆ ಜಕ್ಕನಹಳ್ಳಿ, ಸುಂಕಾತೊಣ್ಣೂರು,  ಲಕ್ಷ್ಮೀಸಾಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವಿತರಿಸಲಾಗುವುದು.

ಇದನ್ನೂ ಓದಿ ಈ ರೈತರೇಕೆ ಪಿಎಂ ಕಿಸಾನ್ ಪಟ್ಟಿಯಿಂದ ಹೊರಗುಳಿಯಲಿದ್ದಾರೆ?

ಸಾಮಾನ್ಯ ರೈತರಿಗೆ ಶೇ| 50 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 75 ರಷ್ಟು ಸಹಾಯಧನದಲ್ಲಿ ಎಂಟಿಯು-1001, ಐಆರ್-64, ಜೆಜಿಎಲ್-1798, ತನು ಭತ್ತದ ತಳಿಗಳ ರಾಜ್ಯ ಬೀಜ ನಿಗಮದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುತ್ತಿದೆ. ರೈತ ಬಾಂಧವರು ತಮ್ಮ ಜಮೀನಿನ ಆರ್ಟಿಸಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪುಸ್ತಕದ ಪ್ರತಿ ಹಾಗೂ ಜಾತಿ ಪ್ರಮಾಣ ಪತ್ರಗಳನ್ನು ನೀಡಿ ಪಡೆಯಬಹುದು. ರೈತರು ಇದರ ಸದುಪಯೋಗ ಬಪಡೆದುಕೊಳ್ಳಬೇಕೆಂದು ಸಹಾಯಕ ಕೃಷಿ ನಿರ್ದೇಶಕಿ ಪ್ರಿಯದರ್ಶಿನಿ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿಯಿಂದಲೂ ಆರ್ಜಿ ಆಹ್ವಾನ

ರಾಮನಗರ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಎಸ್.ಸಿ.ಟಿ.ಎಸ್.ಪಿ ಯೋಜನೆಯಡಿ  (6+1) ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ ಮೇಕೆಘಟಕಗಳ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲೆಯ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿದ್ದು, ಯಾವುದೇ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಜಾತಿ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸದಸ್ಯತ್ವ ಹೊಂದಿರುವ ಕುರಿ ಮತ್ತುಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆರವರಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಜುಲೈ 20 ರೊಳಗೆ ಕಚೇರಿಗೆ ಸಲ್ಲಿಸಬಪೇಕು. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9731764326ಗೆ ಸಂಪರ್ಕಿಸಲು ಕೋರಲಾಗಿದೆ.

ಬೀದರ್ ಜಿಲ್ಲೆಯಲ್ಲಿಯೂ ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಕುರಿ ಮೇಕೆ ಘಟಕ ಸ್ಥಾಪನೆಗೆ ಅಱ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನವಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಜನವಾಡ ರಸ್ತೆ, ಬೀದರ್ ಸಲ್ಲಿಸಬೇಕು. ಕೂಡಲೇ ಅರ್ಜಿ ಸಲ್ಲಿಸಿ ಸಬ್ಸಿಡಿ ಪಡೆದುಕೊಳ್ಳಬಹುದು.

Leave a Comment