ಈ ಲಿಸ್ಟ್ ನಲ್ಲಿರುವ ರೈತರಿಗೆ PM kisan ಹಣ ಜಮೆಯಾಗಲ್ಲ

Written by Ramlinganna

Published on:

ಇನ್ನೂ ಮುಂದೆ PM kisan ಪಿಎಂ ಕಿಸಾನ್ ಹಣ ಕೆಲವು ರೈತರಿಗೆ ಮಾತ್ರ ಜಮಯಾಗಲಿದೆ. ಹೌದು, ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇಲ್ಲದ ರೈತರಿಗೆ ಮುಂದಿನ ಕಂತು ಜಮೆಯಾಗಲ್ಲ.

ಹಾಗಾದರೆ ಯಾವ ಯಾವ ರೈತರಿಗೆ ಮುಂದಿನ ಕಂತು ಜಮೆಯಾಗಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪಿಎಂ ಕಿಸಾನ್ ಯೋಜನೆಗೆ ನೊಂದಣಿ ಮಾಡಿಸಿದರೂ ಸಹ ಮುಂದಿನ 16ನೇ ಕಂತಿನ ಹಣ  ಹಣ ಅನರ್ಹ ರೈತರಿಗೆ ಜಮೆಯಾಗಲ್ಲ. ಯಾವ ರೈತರು ಅನರ್ಹರಾಗಿದ್ದಾರೆ? ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಕೆಲವು ರೈತರಿಗೆ ತಡೆಹಿಡಿಯಲಾಗಿದೆ?  ಇಲ್ಲಿದೆ ನೋಡಿ ಮಾಹಿತಿ.

2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಲಾಗಿದ್ದು ತಮಗೆಲ್ಲಾ ಗೊತ್ತಿದ್ದ ಸಂಗತಿ.  ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈಗಾಗಲೇ ದೇಶದ ರೈತರಿಗೆ 15 ಕಂತುಗಳ ಹಣ ಜಮೆಯಾಗಿದೆ. ಆದರೆ ಇಲ್ಲಿ ಕೆಲವು ರೈತರಿಗೆ ಈಗ ಪಿಎಂ ಕಿಸಾನ್ ಯೋಜನೆಯ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಏಕೆಂದರೆ ಆ ರೈತರು ಯೋಜನೆಗೆ ಅರ್ಹತೆ ಪಡೆದಿಲ್ಲ. ಹಾಗಾಗಿ ಅವರ ಹೆಸರನ್ನು ತೆಗೆದುಹಾಕಲಾಗಿದೆ.

ಅನರ್ಹ PM kisan ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡ ನಂತರ ಬಿಡುಗಡೆಯಾದ ಅನರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಅನರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಬಹುದು.

ಮೇಲಿನ ಲಿಂಕ್ ಕ್ಲಿಕ್ ಮಾಡಿದ ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ  ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು.  ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ Submit ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ನಿಮಗೆ summary  payment status, Aadhaar authentication status ಹಾಗೂ  online Registration status  ಹೀಗೆ ನಾಲ್ಕು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು Aadhaar Authentication status ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : Baragala parihara status 2024 ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತೆ . ಅಲ್ಲಿಯೂ ನಿಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Total ineligible  ಕಾಲಂ ಕೆಳಗಡೆ ಅನರ್ಹ ರೈತರ   ಹೆಸರುಗಳು ಕಾಣಿಸುತ್ತವೆ.  ಅಲ್ಲಿ ಎ ದಿಂದ ಅಕ್ಷರಗಳು ಆರಂಭವಾಗಿರುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೋ ಇಲ್ಲ ವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಅಲ್ಲಿ ನಿಮ್ಮ ಹೆಸರು ಇದ್ದರೆ ನೀವು ಯೋಜನೆಗೆ ಅನರ್ಹರಾಗಿರುತ್ತೀರೆಂದರ್ಥ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಬೇಕು.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ, ನಿಮಗೆ ಪಿಎಂ ಕಿಸಾನ್ ಯೋಜನೆಯ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಕೊಳ್ಳಬೇಕು.. ಏಕೆಂದರೆ ನಿಮ್ಮ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯುತ್ತಿರಬಹುದು. ಅಥವಾ ನೀವು ತೆರಿಗೆ ಪಾವತಿದಾರರಾಗಿರಬಹುದು. ಅಥವಾ ನಿಮ್ಮ ಕುಟುಂಬದಲ್ಲಿ ನಿಮ್ಮ ಮಕ್ಕಳು ಸರ್ಕಾರಿ ನೌಕರರಾಗಿರಬಹುದು.ಅಥವಾ ನಿಮ್ಮ ಹೆಸರು ಬ್ಯಾಂಕ್, ಆಧಾರ್ ಕಾರ್ಡ್, ಜಮೀನಿನ ಪಹಣಿಯಲ್ಲಿ ಹೊಂದಾಣಿಕೆಯಾಗುತ್ತಿರಲಿಕ್ಕಿಲ್ಲ. ಅಥವಾ ಇನ್ನಾವುದೋ ಕಾರಣದಿಂದ ನೀವು ಅನರ್ಹ ರಾಗಿರುತ್ತೀರಿ. ನಿಮ್ಮ ಹೆಸರು ಏಕೆ ತೆಗೆದು ಹಾಕಲಾಗಿದೆ ಎಂಬುದನ್ನು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ವಿಚಾರಿಸಬಹುದು.

Leave a Comment