ಕೃಷಿ ಕೋರ್ಸ್ ಗಳಲ್ಲಿ ಮೀಸಲಾತಿ ಹೆಚ್ಚಿಸಿದ ಸರ್ಕಾರ

Written by By: janajagran

Updated on:

ರೈತರ ಮಕ್ಕಳಿಗೆ ಸಂತಸದ ಸುದ್ದಿ. ರಾಜ್ಯ ಕೃಷಿ ಕಾಲೇಜುಗಳಲ್ಲಿನ ಡಿಪ್ಲೋಮಾ ಮತ್ತು ಪದವಿ ಕೋರ್ಸ್ ಮಾಡ ಬಯಸುವ ರೈತರ ಮಕ್ಕಳಿಗೆ  ಹೆಚ್ಚಿನ ಅವಕಾಶ ಸಿಗಬೇಕೆಂಬ ಕಾರಣಕ್ಕೆ ಮೀಸಲಾತಿ ಪ್ರಮಾಣವನ್ನು (Reservation raised for agriculture course ) ರಾಜ್ಯ ಸರ್ಕಾರ ಹೆಚ್ಚಿಸಿದೆ.

Reservation raised for agriculture course ಕೃಷಿ ಕೋರ್ಸ್ ಗಳಲ್ಲಿ ಮೀಸಲಾತಿ ಹೆಚ್ಚಿಸಿದ ಸರ್ಕಾರ

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಪ್ಲೋಮಾ, ಬಿ.ಎಸ್.ಸಿ ಅಗ್ರಿ ಮತ್ತು ಅದರ ಸರಿಸಮಾನ ಪದವ ಕೋರ್ಸ್ ಗಳ ಪ್ರವೇಶಕ್ಕೆ ಇರುವ ಮೀಸಲಾತಿ ಪ್ರಮಾಣವನ್ನು ಶೇ. 10 ರಷ್ಟು ಮೀಸಲಾತಿಯನ್ನು ಹೆಚ್ಚಿಸಿ ಮಹತ್ವದ ತೀರ್ಮಾನ ಕೈಗೊಂಡಿದೆ.  ಇದಕ್ಕಿಂತ ಮೊದಲು ರೈತರ ಮಕ್ಕಳಿಗೆ ಶೇ. 40 ರಷ್ಟು ಮೀಸಲಾತಿಯಿತ್ತು. ಈಗ ಶೇ. 50 ರಷ್ಟು ಮೀಸಲಾತಿ ರೈತರ ಮಕ್ಕಳಿಗೆ ಸಿಗಲಿದೆ.

ಇದನ್ನೂ ಓದಿ  ಹಸಿರು ಪಟ್ಟಿಯಲ್ಲಿದ್ದರೂ ಸಾಲ ಮನ್ನಾಏಕಾಗಿಲ್ಲಾ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಒಟ್ಟು ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಆರು ವಿಶ್ವವಿದ್ಯಾಲಯಗಳಿನವೆ. ಬೆಂಗಳೂರು, ಧಾರವಾಡ, ರಾಯಚೂರು, ಶಿವಮೊಗ್ಗ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ, ಬೀದರ್ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಧೀನದಲ್ಲಿ 26 ಸರ್ಕಾರಿ ಕಾಲೇಜುಗಳು, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳು ನಡೆಯುತ್ತಿವೆ.

ಪ್ರತಿ ವರ್ಷ ಶೈಕ್ಷಣಿಕ ಸಾಲಿನಲ್ಲಿ ಸುಮಾರು ನಾಲ್ಕು ಸಾವಿರ ಸೀಟುಗಳಿಗೆ ದಾಖಲಾತಿ ನಡೆಯುತ್ತವೆ.  ಇದರಲ್ಲಿ ಕೃಷಿ ಕುಟುಂಬದಿಂದ ಬಂದ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಸಿಗಲಿದೆ. ಡಿಪ್ಲೋಮಾ ಮತ್ತು ಪದವಿ ಕೋರ್ಸ್ ಮಾಡಲಿಚ್ಚಿಸುವ ರೈತರ ಮಕ್ಕಳಿಗೆ ಇನ್ನೂ ಮುಂದೆ ಹೆಚ್ಚಿನ ಸೀಟುಗಳು ಸಿಗಲಿವೆ. ಇದಕ್ಕಿಂತ ಮುಂಚಿತವಾಗಿ ಬಹಳಷ್ಟು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗದೆ ಕೃಷಿ ಕೋರ್ಸ್ ಗಳಿಂದ ವಂಚಿತರಾಗುತ್ತಿದ್ದರು.

ನಿರುದ್ಯೋಗಿಗಳಿಗೆ ಉಚಿತ ತರಬೇತಿ

ನಿರುದ್ಯೋಗಿಗಳಿಗೆ ಉಚಿತ ತರಬೇತಿ ನೀಡಲು ಮೈಸೂರು ತಾಲೂಕು ನಾಗನಹಳ್ಳಿಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಆರ್ಜಿ ಆಹ್ವಾನಿಸಲಾಗಿದೆ.

ಫೆಬ್ರವರಿ 12 ರಂದು ಮೈಸೂರು ತಾಲೂಕು ದೇವಲಾಪುರ ಗ್ರಾಮದಲ್ಲಿ, ಫೆಬ್ರವರಿ 13 ರಂದು ಟಿ. ನರಸೀಪುರ ತಾಲೂಕಿನ ಯಾಚೀನಹಳ್ಳಿ, ಫೆಬ್ರವರಿ 14 ರಂದು ಮೈಸೂರು ತಾಲೂಕು ರಟ್ಟನಹಳ್ಳಿ ಮತ್ತು ಫೆಬ್ರವರಿ 15 ರಂದು ಕೆ.ಆರ್. ನಗರ ತಾಲೂಕಿನ ಹನುಮನಹಳ್ಳಿಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ತೋಟಗಾರಿಕೆ ಮತ್ತು ಕೃಷಿ ಬೆಳಗಳಲ್ಲಿ ಹನಿ ನೀರಾವರಿ ಹಾಗೂ ರಸಾವರಿ ತಾಂತ್ರಿಕತೆಗಳ ಅಳವಡಿಕೆ ಕುರಿತು ಜಿಲ್ಲೆಯ ರೈತ, ರೈತ ಮಹಿಳೆಯರಿಗೆ ಕ್ಷೇತ್ರಾಧಾರಿತ ತರಬೇತಿಗಳನ್ನು ಆಯೋಜಿಸಲಾಗಿದೆ.

ಈ ತರಬೇತಿಯಲ್ಲಿ ಉಪಹಾರದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ರೈತರು ತಮ್ಮ ಹೆಸರನ್ನು ಪೆಬ್ರವರಿ 12 ರ ತರಬೇತಿಗಾಗಿ ಮೊಬೈಲ್ ನಂಬರ್ 9945493589, ಫೆಬ್ರವರಿ 13 ರ ತರಬೇತಿಗಾಗಿ 91643 97510, ಫೆಬ್ರವರಿ 14 ರ ತರಬೇತಿಗಾಗಿ 82779 33154 ಹಾಗೂ ಫೆಬ್ರವರಿ 15 ರ ತರಬೇತಿಗಾಗಿ82779 33180 ಸಂಪರ್ಕಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು. ಕೇವಲ50 ರೈತರು, ರೈತ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರದ ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Leave a Comment