ಹಣ್ಣು, ತರಕಾರಿ ಶೇಖರಣೆ, ಸಾಗಾಣಿಕೆಗೆ ಶೇ.50 ರಷ್ಟು ಸಹಾಯಧನ

Written by By: janajagran

Updated on:

Subsidy for vegetable fruits storage ರೈತರಿಗೆ ‘ಆಪರೇಷನ್ ಗ್ರೀನ್ಸ್’ ಕಾರ್ಯಕ್ರಮದಡಿಯಲ್ಲಿ  ಹಣ್ಣು ಮತ್ತು ತರಕಾರಿ ಸಾಗಾಣಿಕೆ ಹಾಗೂ ಶೇಖರಣೆಗಾಗಿ ಶೇ.50 ರಷ್ಟು ಸಹಾಯಧನ ನೀಡಲಾಗುವುದು. ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆದಾರರು, ರೈತರು, ರೈತ ಉತ್ಪಾದಕ ಸಂಸ್ಥೆ ಮತ್ತು ರೈತರ ಗುಂಪು, ವರ್ತಕರು, ಪರವಾನಗಿ (ಲೈಸನ್ಸ್) ಹೊಂದಿರುವ ಕಮಿಷನ್ ಏಜೆಂಟರುಗಳು, ರಫ್ತುದಾರರು ಹಾಗೂ ಇನ್ನಿತರೆ ಭಾಗಿದಾರರಿಗೆ ಅವಕಾಶ ಕಲ್ಪಿಸಲಾಗಿದೆ.

Subsidy for vegetable fruits storage  ಹಣ್ಣು, ತರಕಾರಿ ಶೇಖರಣೆ, ಸಾಗಾಣಿಕೆಗೆ ಶೇ.50 ರಷ್ಟು ಸಹಾಯಧನ ನೀಡುವ ಉದ್ದೇಶ

ಹಣ್ಣು ಮತ್ತು ತರಕಾರಿ ಬೆಳೆಗಾರರು ವಿಶೇಷವಾಗಿ ಕೋವಿಡ್ ಲಾಕ್‌ಡೌನ್ ರೀತಿಯ ಸಂಕಷ್ಟದ ಸಂದರ್ಭದಲ್ಲಿ ತಾವು ಬೆಳೆದ ಉತ್ಪನ್ನಗಳನ್ನು ಸರಿಯಾಗಿ ಮಾರಾಟ ಮಾಡಲು ಸಾಧ್ಯವಾಗದೇ ಕಷ್ಟ-ನಷ್ಟ ಅನುಭವಿಸಿರುವುದನ್ನು ಹಾಗೂ ಬೆಳೆಗಳ ಕಟಾವಿನ ನಂತರ ಆದ ಉತ್ಪನ್ನಗಳ ನಷ್ಟವನ್ನು ನಿಯಂತ್ರಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಮಾರ್ಗಸೂಚಿಗೆ ಅನುಗುಣವಾಗಿ ಹಣ್ಣು ಮತ್ತು ತರಕಾರಿ ಉತ್ಪನ್ನಗಳ ಸಾಗಾಣಿಕೆಗೆ ಮತ್ತು ಶೇಖರಣೆಗೆ ಶೇ.50 ಸಹಾಯಧನ ನೀಡಲು ಅವಕಾಶವಿರುತ್ತದೆ.

ಇದನ್ನೂ ಓದಿ FIDನಲ್ಲಿ ಯಾವ ಯಾವ ಸರ್ವೆ ನಂಬರ್ ಲಿಂಕ್ ಆಗಿದೆ? ಇಲ್ಲೆ ಚೆಕ್ ಮಾಡಿ

ಆತ್ಮನಿರ್ಭರ ಭಾರತ ಅಭಿಯಾನದಡಿಯಲ್ಲಿ ಸಹಾಯಧನ ಪಡೆಯಲು ಇಚ್ಛಿಸುವ ಜಿಲ್ಲೆಯಲ್ಲಿನ ಹಣ್ಣು ಮತ್ತು ತರಕಾರಿ ಬೆಳೆಗಾರರು, ಅಗತ್ಯವಿರುವ ದಾಖಲಾತಿಗಳು ಹಾಗೂ ಇನ್ನಾವುದೇ ಮಾಹಿತಿಗಾಗಿ ಆಯಾ ತಾಲೂಕು ತೋಟಗಾರಿಕೆ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.. ಹೆಚ್ಚಿನ ಮಾಹಿತಿಗೆ ಶಿವಮೊಗ್ಗ: 08182-270415, ಭದ್ರಾವತಿ: 08282-268239, ಶಿಕಾರಿಪುರ: 08187-223544, ಸೊರಬ: 08184-272112, ಸಾಗರ: 08183-226193, ತೀರ್ಥಹಳ್ಳಿ: 08181-2281514, ಹೊಸನಗರ: 08185-221364 ಈ ತಾಲೂಕುವಾರು ತೋಟಗಾರಿಕೆ ಕಚೇರಿ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಿುಶ್ರ ತಳಿ ಹಸು/ಎಮ್ಮೆ ಖರೀದಿಗೆ 20 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ಪಶು ಸಂಗೋಪನೆಯಲ್ಲಿ ಆಸಕ್ತಿಯಿರುವ ರೈತರಿಗೆ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹೈನುಗಾರಿಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಒಂದು ಮಿಶ್ರ ತಳಿ ಹಸು ಅಥವಾ ಎಮ್ಮೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕೆ.ಜಿ. ನಂದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ ಒಂದು ಮಿಶ್ರ ತಳಿ ಹಸು ಅಥವಾ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ 62 ಸಾವಿರ ರೂಪಾಯಿ ಇರುತ್ತದೆ. ಈ ಯೋಜನೆಯಲ್ಲಿ ಘಟಕ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 33.33 ಹಾಗೂ ಇತರೆ ಜನಾಂಗದವರಿಗೆ ಶೇ. 25 ರಷ್ಟು ಸಹಾಯಧನ ನೀಡಲಾಗುವುದು. ಯೋಜನೆಯಡಿ ತಿಪಟೂರು ತಾಲೂಕಿಗೆ ನಿಗದಿಪಡಿಸಿದ ಗುರಿ ಒಟ್ಟು 15 ಆಗಿದೆ. ಅರ್ಜಿ ನಮೂನೆಯನ್ನು ರೈತರು ಹತ್ತಿರದ ಪಶು ಸಂಸ್ಥೆಗಳಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸ್ಥಳೀಯ ಪಶುವೈದ್ಯ ಸಂಸ್ಥೆಗಳಿಗೆ ಜನವರಿ 15 ರೊಳಗೆ ಸಲ್ಲಿಸಲು ಕೋರಲಾಗಿದೆ.  ಆಸಕ್ತ ರೈತರು ಈ ಯೋಜನೆಯಗಳ ಪ್ರಯೋಜನೆ ಪಡೆದುಕೊಳ್ಳಬಹುದು.

Leave a Comment