ಕಾರ್ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Taxi car purchase subsidy : ನಿರುದ್ಯೋಗಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಸ್ವಾವಂಲಬಿಯಾಗಿ ಜೀವನ ನಡೆಸಲು ಆಸಕ್ತಿಯಿರುವ ನಿರುದ್ಯೋಗಿಗಳಿಗೆ ಈಗ ಟ್ಯಾಕ್ಸಿ ಕಾರ್ ಹಾಗೂ ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲಾಗುವುದು. ಯಾರು ಯಾರು ಅರ್ಜಿ ಸಲ್ಲಿಸಬಹುದು. ಎಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಯಾರು ಯಾರು ಅರ್ಹರಿರುತ್ತಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಟ್ಯಾಕ್ಸಿ ಕಾರ್, ಗೂಡ್ಸ್ ವಾಹನ ಖರೀದಿಗೆ ಫಲಾನುಭವಿಗಳಿಗಹೆ  3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ವಾಹನ ಚಾಲನ ಪರವಾನಗಿ ಪಡೆದಿರುವ ಟ್ಸಾಕಿ ಚಾಲನೆ ಮಾಡಿ ಸ್ವಾವಲಂಬಿಯಾಗಿ ಜೀವನ ನಡೆಸಲಿಚ್ಚಿಸುವವರು ಆಗಸ್ಟ್  31 ರೊಳಗಗಾಗಿ ಅರ್ಜಿ ಸಲ್ಲಿಸಬಹುದು. ಹಾಗಾದರೆ ಅರ್ಜಿ ಎಲ್ಲಿ ಸಲ್ಲಿಸಬೇಕು ಅಂದುಕೊಂಡಿದ್ದೀರಾ?  ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್ನಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

Taxi car purchase subsidy ವಾಹನ ಖರೀದಿಗೆ ಯಾರು ಯಾರು ಅರ್ಜಿ ಸಲ್ಲಿಸಬಹುದು?

ಹೌದು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಮಗ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ,  ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೋರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ. 50 ರಷ್ಟು  ಅಥವಾ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಮಂಜೂರು ಮಾಡಲಾಗುವುದು.ಉಳಿದ ಮೊತ್ತವನ್ನು ಬ್ಯಾಂಕ್ ಮೂಲಕ ಅವರು ವಿಧಿಸಿರುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು. ವಯೋಮಿತಿ 21 ರಿಂದ 45 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ :  ನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಚೆಕ್ ಮಾಡಿ

ಈ ಯೋಜನೆ ಅಡಿಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಅಥವಾ ಸರ್ಕಾರಿ ಇಲಾಖೆಗಳಲ್ಲಿ ಈ ಉದ್ದೇಶಕ್ಕೆ ಯಾವುದೇ ಯೋಜನೆಗಳಿಂದ ಸೌಲಭ್ಯ ಪಡೆದಿರಬಾರದು. ಈ ಯೋಜನೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಈ ಯೋಜನೆಯಲ್ಲಿ ಮಂಗಳಮುಖಿಯರಿಗೂ ಸಹ ಆದ್ಯತೆ ನೀಡಲಾಗುವುದು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ  ಚಾಲನೆ (ಯೆಲ್ಲೋ ಬೋರ್ಡ್) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?

ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿರಬೇಕು. ಹಾಗೂ ಸಂಬಂಧಿಸಿದ ತಾಲೂಕು .ತಹಶೀಲ್ದಾರ ಅಥವಾ ಕಂದಾಯ ಅಧಿಕಾರಿಗಳಿಂದ ನಿಗದಿತ ನಮೂನೆಯಲ್ಲಿ ಪಡೆದ ಜಾತಿ ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಆಧಾರ್ ಕಾರ್ಡ್ ಅಥವಾ ಚುನಾವಣಾ ಗುರುತಿನ ಚೀಟಿ ಸಲ್ಲಿಸಬೇಕು. ಲಘು ವಾಹನ ಚಾಲನಾ ಪರವಾನಗಿಯ ದೃಢೀಕೃತ ಪ್ರತಿ ಸಲ್ಲಿಸಬೇಕು. ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಇರಬೇಕು. ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಯಾರಿಗೆ ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ  ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ. ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

Leave a Comment