ಮಾರ್ಚ್ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Written by Ramlinganna

Published on:

Three days rain here : ಬಿಸಿಲಿನಿಂದ ತತ್ತರಿಸಿದ ಜನತೆಗೆ ಮತ್ತೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು, ರಾಜ್ಯದಲ್ಲಿ ಮತ್ತೆ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇದೇ ಮಾರ್ಚ್ 19 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ

ಮಾರ್ಚ್ 19 ರಿಂದ 21 ರವರೆಗೆ ದಕ್ಷಿಣ ಕನ್ನಡ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಈ ವೇಳೆ ಬಿರುಗಾಳಿಯೂ ಜಾಸ್ತಿ ಇರಲಿದೆ. ಉತ್ತರ ಕರ್ನಾಟಕದ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮಧ್ಯಾಹ್ನ ಅತವಾ ಸಂಜೆಯ ವೇಳೆಗೆ ಭಾಗಶ ಮೋಡ ಕವಿದ ವಾತಾವರಣ ಇರಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇದನ್ನೂ ಓದಿ ಈ ರೈತರಿಗೇಕೆ ಬೆಳೆ ವಿಮೆ ಹಣ ಜಮೆಯಾಗಲ್ಲ? ಇಲ್ಲಿದೆ ಮಾಹಿತಿ

ನಿಮ್ಮ ಊರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ? ಎಂಬ ಮಾಹಿತಿಯನ್ನು ಸಹ ರೈತರು ಸಾರ್ಜನಿಕರು ಈಗ ಮನೆಯಲ್ಲೇ ಕುಳಿತು ಪಡೆಯಬಹುದು. ಹೌದು ಮಿತ್ರರೇ ಸಾರ್ಜಜನಿಕರಿಗೆ ರೈತರಿಗೆ ಅನುಕೂಲವಾಗಲೆಂದು ವರುಣಮಿತ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. 92433 45433 ನಂಬರಿಗೆ ಕರೆ ಮಾಡಿದರೆ ಸಾಕು, ಅಂದಿನ ಹವಾಮಾನ ವರದಿ, ಮಳೆ ಯಾವಾಗ ಬರುತ್ತದೆ. ಗಾಳಿಯ ಯಾವ ದಿಕ್ಕಿನಿಂದ ಯಾವ ದಿಕ್ಕಿನ ಕಡೆಗೆ ಬೀಸುತ್ತಿದೆ. ಮಳೆಯ ಪ್ರಮಾಣ ಹೇಗಿರಲಿದೆ ಎಂಬ ಮಾಹಿತಿ ಸಿಗಲಿದೆ.

Three days rain alert ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಗುಡುಗು ಸಿಡಿಲಿನ ಆರ್ಭಟವಿದ್ದಾಗ ನಾಗಕಿಕರು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳು

ಸಿಡಿಲು ಮೊಬೈಲ್ ಆ್ಯಪ್ ಬಳಸುವ ಮೂಲಕ ನಾಗರಿಕರು ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆಯಬಹುದು. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಬಯಲಿನಲ್ಲಿ ಮಾಡಬೇಕಾದ ಕೆಲಸಗಳನ್ನು ಮುಂದೂಡಿ. ಮನೆಯಲ್ಲಿಯ ಸುರಕ್ಷಿತವಾಗಿ ಇರಲು ಸಹಾಯವಾಗುತ್ತದೆ.

ಸಿಡಲು ಬಡಿಯುವ ಮುನ್ಸೂಚನೆ ಇದ್ದಾಗಮನೆಯ ಕಿಟಕಿಯಿಂದ ದೂರ ಇರಬೇಕು. ಸಿಡಿಲು ಬಡಿಯುವ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು.

ಇದನ್ನೂ ಓದಿ PM Kisan ಲಿಸ್ಟ್ ನಲ್ಲಿದ್ದರೂ ಹಣವೇಕೆ ಜಮೆಯಾಗುತ್ತಿಲ್ಲ? ಇಲ್ಲಿದೆ ಮಾಹಿತಿ

ಗೃಹಪಯೋಗಿ ಉಪಕರಣಗಳ ಪ್ಲಗ್ ಗಳನ್ನು ತೆಗೆದಿರಿಸಬೇಕು. ಸಿಡಿಲಿನ ಸಂದರ್ಭದಲ್ಲಿ ಮನೆಯ ಹೊರಗಡೆ ಸ್ಟಾನ ಮಾಡುವುದು ಸುರಕ್ಷಿತವಲ್ಲ. ಹೊರಾಂಗಣದಲ್ಲಿದ್ದವರು ಸುರಕ್ಷಿತ ಕಟ್ಟಡಗಳ ಒಳಗೆ ಹೋಗಬೇಕು. ಎತ್ತರದ ಪ್ರದೇಶಗಳಲ್ಲಿ ಸಿಡಿಲು ಬಡಿಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸಾದ್ಯವಾದಷ್ಟು ತಗ್ಗು ಪ್ರದೇಶಗಳಿಗೆ ತೆರಳಬೇಕು.

Leave a Comment