ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆ

Written by By: janajagran

Updated on:

today weather forecast ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾರ್ಚ್ 26 ರಿಂದ 30ರವರೆಗೆ ಐದು ದಿನಗಳ ಕಾಲ (Weather forecast five days rain alert)ಮಳೆಯಾಗಲಿದೆ ಎಂದು ಹವಾಮಾನ ತಿಳಿಸಿದೆ.

ಕಳೆದ ನಾಲ್ಕೈದು ದಿನಗಳಿಂದ ಅಲ್ಲಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುತ್ತಿದ್ದರಿಂದ ಮಾವು, ದ್ರಾಕ್ಷಿ ಬೆಳೆಗಾರರನ್ನು ಆತಂಕಕ್ಕೀಡುಮಾಡಿದೆ.

ಇದನ್ನೂ ಓದಿ ನಿಮ್ಮ ಮಕ್ಕಳಿಗೆ ಎಷ್ಟು ಸ್ಕಾಲರ್ ಶಿಪ್ ಬರುತ್ತಿದೆ? ಇಲ್ಲೇ ಚೆಕ್ ಮಾಡಿ

ಕಲಬುರಗಿ ಜಿಲ್ಲೆ ಹುಲಸೂರ, ದೇವನಾಳ, ಮಾಚನಾಳ, ಮಿರಕಲ್ ಗ್ರಾಮಗಳಲ್ಲಿ ಸುರಿದ ಗುಡುಗು ಮಿಂಚಿನ ಅಕಾಲಿಕ ಮಳೆಯಿಂದಾಗಿ ಬೀಸಿದ ಗಾಳಿಗೆ ಮಾವಿನ ಹಣ್ಣುಗಳು ಧರೆಗುರುಳಿವೆ. ಬಿಳಿಜೋಳ ನೆಲಸಮವಾಗಿದೆ. ಟೊಮ್ಯಾಟೋ, ಹೀರೇಕಾಯಿ, ಸೌತೆಕಾಯಿ, ಗೋಧಿ, ಇತರ ತರಕಾರಿಗಳು ಹಾನಿಯಾಗಿವೆ.

ಗುರುವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ, ಮೂಡುಬಿದಿರೆ, ಬೆಳ್ತಂಗಡಿ, ಸುಳ್ಯತಾಲೂಕು ಹಾಗೂ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿಯೂ  ಚದುರಿದ ಮಳೆಯಾಗಿದೆ.

ಇದನ್ನೂ ಓದಿ: ಸಿಡಿಲು ಬೀಳುವ ಮೊದಲೇ ಮುನ್ಸೂಚನೆ ನೀಡುತ್ತದೆ ದಾಮಿನಿ ಆ್ಯಪ್‌: ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ರಾಮನಗರ ಹಾಗೂ ಮೈಸೂರಿನಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಬೆಳಗಾವಿ ಸೇರಿದಂತೆ ಇತರ ಕೆಲವು ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ.

today weather forecast ವರುಣಮಿತ್ರ ಸಹಾಯವಾಣಿ (Varunmitra Helpline Number)

ಹೌದು, ರೈತರು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ಪಡೆಯಬಹುದು. ರೈತರು ವರುಣಮಿತ್ರ ಸಹಾಯವಾಣಿ ನಂಬರ್  92433 45433 ನಂಬರಿಗೆ ಕರೆ ಮಾಡಿದರೆ ಸಾಕು, ಈ ಉಚಿತ ಸಹಾಯವಾಣಿಯ ಸಿಬ್ಬಂದಿ ನಿಮ್ಮ ಕರೆ ಸ್ವೀಕರಿಸಿ ನಿಮ್ಮೂರಿನಲ್ಲಿ ಮಳೆಯಾಗಲಿದೆಯೇ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ನೀಡಲಿದ್ದಾರೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.

ಮಳೆಯ ಮಾಹಿತಿಯೊಂದಿಗೆ ನಿಮ್ಮೂರಿನ ಸುತ್ತಮುತ್ತ ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿನೆಡೆಗೆ ಬೀಸುತ್ತಿದೆ.  ಮಳೆ ಸಾಧಾರಣವಾಗಿದೆಯೋ ಅಥವಾ ರಭಸವಾಗಿದೆಯೋ? ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಒಂದೇ ನಿಮಿಷದಲ್ಲಿ ಪಡೆಯಬಹುದು.

ರೈತರು ತಮ್ಮ ಬಳಿ ವರುಣಮಿತ್ರ ಸಹಾಯವಾಣಿ ನಂಬರ್ ಸೇವ್ ಮಾಡಿಕೊಳ್ಳಬೇಕು. ಆಗಾಗ ಹವಾಮಾನದ ವರದಿ ಪಡೆಯಲು ಅನುಕೂಲವಾಗುತ್ತದೆ. ಮಳೆಯ ಮುನ್ಸೂಚನೆ ಕುರಿತು ಪತ್ರಿಕೆಗಳಲ್ಲಿ ನೀಡಲಾಗಿರುತ್ತದೆ.ಆದರೆ ಹಳ್ಳಿಗಳಲ್ಲಿ ಕೆಲವು ಪತ್ರಿಕೆಗಳು ತಲುಪದೆ ಇರುವುದರಿಂದ ಹವಾಮಾನದ ವರದಿ ಕೆಲವು ಸಲ ರೈತರಿಗೆ ತಲುಪುವುದಿಲ್ಲ. ಹಾಗಾಗಿ ರೈತರು ವರುಣಮಿತ್ರ ಸಹಾಯವಾಣಿ ನಂಬರ್ ಸೇವ್ ಮಾಡಿಕೊಂಡು  ನಿಮ್ಮೂರಿನ ವಾತಾವರಣ, ಮಳೆಯ ಕುರಿತಂತೆ ಸಾರ್ವಜನಿಕರು ಮಾಹಿತಿಗಳನ್ನು ಸುಲಭವಾಗಿ ಪಡೆಯಬಹುದು.

 

Leave a Comment