ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಕಲ್ಸಿಸಿಕೊಡುವುದಕ್ಕಾಗಿ ಟೂರಿಸ್ಟ್ ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ.  ಬೇಗನೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.

ಹೌದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ  ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ಅಡಿಯಲ್ಲಿ ಬರುವ ಫಲಾನುಭವಿಗಳಿಗೆ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಉಳಿದ ಹಣವನ್ನು ಬ್ಯಾಂಕಿನಿಂದ ಸಾಲ ಮಾಡಿಸಲಾಗುವುದು.

ಒಕ್ಕಲಿಗ ಸಮುದಾಯದವರಿಗೆ ಅರ್ಜಿ ಸಲ್ಲಿಸಲು ಈ ಅರ್ಹತೆಗಳಿರಬೇಕು

ಒಕ್ಕಲಿಗ ಸಮುದಾಯದಲ್ಲಿ ಬರುವ ಒಕ್ಕಲಿಗ, ವಕ್ಕಲಗಿ, ಸರ್ಪ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರುಸು ಒಕ್ಕಲಿಗ,  ಗಂಗಡಕಾರ್ ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಗ, ಕಾಪು, ಕಮ್ಮಾ, ಹೆಗ್ಗಡೆ, ಗೌಡರ್ ಸಮುದಾಯಕ್ಕೆ ಸೇರಿದವರಾಗಿರಬೇಕು.

ಟೂರಿಸ್ಟ್ ವಾಹನ ಹಾಗೂ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನ ಪಡೆಯಲಿಚ್ಚಿಸುವ ಅಭ್ಯರ್ಥಿಗಳು 18-55 ವರ್ಷದೊಳಗಿರಬೇಕು. ಕರ್ನಾಟಕದ ನಿವಾಸಿಯಾಗಿರಬೇಕು. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಈ ಸೌಲಭ್ಯ ಒದಗಿಸಲಾಗುವುದು. ಈ ಹಿಂದೆ ಸರ್ಕಾರದಿಂದ ಮೇಲೆ ತಿಳಿಸಿದ ನಿಗಮಗಳಿಂದ ಸೌಲಭ್ಯ ಪಡೆದಿದ್ದರೆ ಮತ್ತೇ ಅಂತಹ ಅಭ್ಯರ್ಥಿಗಳಿಗೆ ಸೌಲಭ್ಯ ನೀಡಲಾಗುವುದಿಲ್ಲ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು.  ಕುಟುಂಬದ ವಾರ್ಷಿಕ ವರಮಾನ ನಗರ ಪ್ರದೇಶದವರಿಗೆ 1.20 ಲಕ್ಷ ಹಾಗೂ ಗ್ರಾಮೀಣ ಪ್ರದೇಶದವರಿಗೆ 98 ಸಾವಿರ ಇರಬೇಕು.ಲಘು ವಾಹನ ಚಾಲನೆಯ ಪರವಾನಗಿ ಲೈಸೆನ್ಸ್ ಝರಾಕ್ಸ್ ಪ್ರತಿ ಇರಬೇಕು. ಆಧಾರ್ ಕಾರ್ಡ್ ಇರಬೇಕು.ಇತ್ತೀಚಿನ ಫೋಟೋ ಇರಬೇಕು.

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ.

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆಯಲು ಈ

https://kvcdc.karnataka.gov.in/uploads/media_to_upload1658122534.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಈ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಒಕ್ಕಲಿಗರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಲ್ಲಿಸಬೇಕು.

ಎಸ್.ಸಿ, ಎಸ್.ಟಿ ಸಮುದಾಯದವರಿಗೆ ಅರ್ಹತೆಗಳು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆರ್.ಡಿ ಸಂಖ್ಯೆ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅರ್ಜಿಯೊಂದಿಗೆ ಲಗತ್ತಿಸಬೇಕು, ಆಧಾರ್ ಕಾರ್ಡ್. ಬ್ಯಾಂಕ್ ಪಾಸ್ಬುಕ್, ಇತ್ತೀಚಿನ ಫೋಟೋ, ಲಘುವ ಾಹನ ಚಾಲನಾ ಪರವಾನಗಿ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಅರ್ಜಿಗಳನ್ನು ಎಲ್ಲಿ ಸಲ್ಲಿಸಬೇಕು?

ಟೂರಿಸ್ಟ್ ವಾಹನ ಹಾಗೂ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸುವಿಧಾ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನಾಂಕವಾಗಿದೆ.

ಎಸ್.ಸಿ, ಎಸ್.ಟಿ ಅಭ್ಯರ್ಥಿಗಳು ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಈ

https://suvidha.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಎಸ್.ಸಿ ಎಸ್ಟಿ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ನಿಗಮದ ಜಿಲ್ಲಾ ವ್ಯವಸ್ಥಾಪಕರಗಳ ಕಚೇರಿ ಅಥವಾ ಕಲ್ಯಾಣಮಿತ್ರ ಸಹಾಯವಾಣಿಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಗೆ ಸಂಪರ್ಕಿಸಬಹುದು.

6 Replies to “ಟ್ಯಾಕ್ಸಿ ಕಾರ್, ಸರುಕು ಸಾಗಾಣಿಕೆ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂಪಾಯಿ ಸಹಾಯಧನ -ಇಂದೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ”

Leave a Reply

Your email address will not be published. Required fields are marked *