ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

Written by By: janajagran

Updated on:

weather forecast karnataka ಕರ್ನಾಟಕ ರಾಜ್ಯದ ಎಂಟು ಜಿಲ್ಲಗಳಲ್ಲಿ ಮಾರ್ಚ್ 24 ರವರೆಗೆ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡದ ಕೆಲವು ಭಾಗ, ದಕ್ಷಿಣ ಕನ್ನಡ ಜಿಲ್ಲೆ, , ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ : ಬೆಳೆಹಾನಿ ಪರಿಹಾರ ಯಾವ ರೈತರಿಗೆ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ

ಮಳೆಯ ನಂತರ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಉಂಟಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ  ತಾಪಮಾನ ಎಂದಿನಂತೆ ಏರಲಿದೆ.

ವಿವಿಧ ಸ್ಪರ್ಧಾತ್ಮಕ ಉಚಿತ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

ಐಎಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್.ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್.ಆರ್. ಬಿ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ, ಆರ್.ಆರ್.ಬಿ ಹಾಗೂ ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವ್ರಗಹಾಗೂ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಆನ್ಲೈನ್  ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 4 ರವರೆಗೆ ವಿಸ್ತರಿಸಲಾಗಿದೆ. ಪದವಿ ಮುಕ್ತಾಯಗೊಳಿಸಿದ ಹಾಗೂ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿಸುತ್ತಾರೆ. ಅರ್ಹ ಅಭ್ಯರ್ಥಿಗಳು  ಅಕ್ಟೋಬರ್ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಆನ್ಲೈಲ್ ಮೂಲಕ ಅರ್ಜಿ ಹೇಗೆ ಸಲ್ಲಿಸಬೇಕು?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ

https://sw.kar.nic.in/swprelims/petccoaching/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಸಮಾಜ ಕಲ್ಯಾಣ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಆಗ ಅಲ್ಲಿ ಕಾಣುವ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಮಾಡಬೇಕು.ಆಗ ವಿದ್ಯಾರ್ಥಿಗಳು ಕ್ರಿಯೇಟ್ ಅಕೌಂಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ನಮೂದಿಸಬೇಕು. ನಂತರ ಮೊಬೈಲ್ ನಂಬರ್ ನಮೂದಿಸಬೇಕು ನಂತರ ಸೆಂಡ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ಅಭ್ಯರ್ಥಿಗೆ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಅಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

Leave a Comment