ಕರಾವಳಿಯ ಉಡುಪಿ, ಉತ್ತರಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 15 ಮತ್ತು 16 ರಂದು ಭಾರಿ ಮಳೆ (Heavy rain) ಯಾಗುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಜೂನ್ 15 ರಂದು ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಜೂನ್ 16 ಮತ್ತು 17 ರಂದು ಭಾರಿ ಮಳೆಯಾಗಲಿರುವುದರಿಂದ ಆ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೇರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ  ಜೂನ್ 17 ರವರೆಗೆ ಮಳೆಯಾಗಲಿರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.

ಕರಾವಳಿ ತೀರ ಪ್ರದೇಶದಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 45 ರಿಂದ 55 ಕಿ.ಮೀ ಇರುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಣ್ಣೆತೋರಾ ಜಲಾಶಯದಿಂದ ನದಿಗೆ ನೀರು ಬಿಡುವ ಸಂಭವ:ನದಿಯ ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ

ಬೆಣ್ಣೆತೋರಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರಬಾಗಿ ಒಳಹರಿವು ಬರುತ್ತಿದೆ. ಅಲ್ಲದೇ ಮೇಲ್ಭಾಗದ ಜಲಾಯಶದಿಂದ ನೀರು ಬಿಡುವ ಸಂಭವವಿರುವುದರಿಂದ ಈ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿ ಮುಖಾಂತರ ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ-4ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಆದ್ದರಿಂದ ಬೆಣ್ಣೆತೋರಾ ನದಿ ಸುತ್ತಮುತ್ತಲಿನ ಗ್ರಾಮಗಳು ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *