ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು?

Written by Ramlinganna

Updated on:

for crop insurance do this ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಹಾಳಾದರೆ ಬೆಳೆ ವಿಮೆ ಹಣ ಜಮೆಯಾಗಲು ಏನು ಮಾಡಬೇಕು? ಯಾವಾಗ ಜಮೆಯಾಗುತ್ತದೆ? ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಈಗಾಗಲೇ ಬೆಳೆ ವಿಮೆಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಲು ಕೋರಲಾಗಿದೆ. ಹೌದು, ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯು ರೈತರಿಗೆ ಅತ್ಯಂತ ಉಪಯುಕ್ತವಾಗಿದೆ.

ಬೆಳೆ ವಿಮೆಯು ಬಿತ್ತನೆಯಿಂದ ಕೊಯ್ಲು ಮಾಡುವವರೆಗೂ ವಿಮೆಗೆ ಬೆಳೆ ಒಳಪಟ್ಟಿರುತ್ತದೆ. ರೈತರು ವಿಮಾ ಮೊತ್ತದ ಶೇ. 2 ರಷ್ಟು ಪಾವತಿ ಮಾಡಬೇಕಾಗುತ್ತದೆ.

ಬೆಳೆ ಯಾವಾಗ ಹಾಳಾದರೆ ವಿಮೆ ನಿರ್ಧರಿಸಲಾಗುವುದು?

ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡ ರೈತರ ಜಮೀನು ಸ್ಥಳ, ನಿರ್ಧಿಷ್ಠ, ಪ್ರಕೃತಿ ವಿಕೋಪ, ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಳೆ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟವಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸು ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ಮುಂಗಾರು ಹಂಗಾಮಿಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?

ಮುಂಗಾರು ಹಂಗಾಮಿನ ಬೆಳೆಗಳಾದ ಹೆಸರು, ಉದ್ದು, ತೊಗರಿ, ಮುಸುಕಿನ ಜೋಳ, ಸಜ್ಜೆ, ಸೋಯಾ ಅವರೆ, ಎಳ್ಳು, ನೆಲಗಡಲೆ (ಶೇಂಗಾ), ಹತ್ತಿ, ಅರಿಶಿಣ, ಭತ್ತ, ಸೂರ್ಯಕಾಂತಿ, ಟೋಮ್ಯಾಟೋ, ಈರುಳ್ಳಿು, ಕೆಂಪು ಮೆಣಸಿನ ಕಾಯಿ, ಪಪ್ಪಾಯ ಸೇರಿದಂತೆ ಇನ್ನಿತರ ಬೆಳೆಗಳ ವಿಮೆ ಮಾಡಿಸಬಹುದು. ಆದರೆ ಈ ಬೆಳೆಗಳು ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸವಾಗಿರುತ್ತದೆ. ಹಾಗಾಗಿ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ವಿಚಾರಿಸಿ ವಿಮೆ ಮಾಡಿಸಬೇಕು.

 for crop insurance do this ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಈಗೆ ಚೆಕ್ ಮಾಡಿ

ನಿಮ್ಮ ಊರಿನಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದೆಂಬುದನ್ನು ಚೆಕ್ ಮಾಡಲು ಈ

https://samrakshanereports.karnataka.gov.in/Premium/Crops_You_Can_Insure.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಆಯ್ಕೆ ಮಾಡಿಕೊಂಡು Display ಮೇಲೆ ಕ್ಲಿಕ್ ಮಾಡಿದರೆ ಸಾಕು, ನೀವು ಯಾವ ಯಾವ ಬೆಳೆಗಳ್ಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಬಹುದು.

ಬೆಳೆ ವಿಮೆ ಪರಿಹಾರ ಯಾವಾಗ ಎಷ್ಟು ಪ್ರಮಾಣದಲ್ಲಿ ನೀಡಲಾಗುವುದು?

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಇಂತಹ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಬೆಳೆ ವಿಮೆ ಘಟಕದಲ್ಲಿ ಶೇ. 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಪರಿಹಾರವನ್ನು ವಿತರಿಸಲು ಯೋಜನೆಯಲ್ಲಿ ಅವಕಾಶ ಇರುತ್ತದೆ. ಈ ರೀತಿಯ ಪರಿಹಾರವು ಗ್ರಾಮ ಪಂಚಾಯತಿ ಮಟ್ಟದ ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಿದ ರೈತರಿಗೆ ಮಾತ್ರ ಅನ್ವಯವಾಗುತ್ತದೆ. ಈಗಾಗಲೇ ಬಿತ್ತನೆ ಮಾಡಿರುವ ರೈತರು ಬೆಳೆವಿಮೆ ನೋಂದಣಿ ಮಾಡಿಸದೆ ಇದ್ದಲ್ಲಿ ತಮ್ಮ ಗ್ರಾಮ ಪಂಚಾಯತ್ ಮಟ್ಟದ ಅಧಿಸೂಚಿತ ಬೆಳೆಗಳಿಗೆ ಕೊನೆಯ ದಿನಾಂಕದೊಳಗಾಗಿ ಬೆಳೆ ವಿಮೆ ನೋಂದಣಿ ಮಾಡಿಸಲು ಕೋರಲಾಗಿದೆ.

ಬೆಳೆ ಹಾನಿಯಾದಾಗ ರೈತರೇನು ಮಾಡಬೇಕು?

ಮುಂಗಾರು ಹಂಗಾಮಿಗೆ ಬೆಳೆಯಲಾದ ಬೆಳೆಗಳು ಪ್ರಕೃತಿ ವಿಕೋಪದಿಂದಾಗಿ ಅಂದರೆ ಅತೀವೃಷ್ಟಿ, ಅನಾವಷ್ಟಿ, ಪ್ರವಾರ, ಗುಡುಗು, ಮಿಂಚಿನಿಂದಾಗು ಬೆಂಕಿ ಅವಘಡ, ಭೂ ಕುಸಿತದಿಂದಾಗಿ ಬೆಳ ಹಾನಿಯಾದರೆ ರೈತರೂ 72 ಗಂಟೆಯೊಳಗೆ ವಿಮಾ ಕಂಪನಿಗೆ ತಿಳಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು 72 ಗಂಟೆಯೊಳಗೆ ವಿಮಾ ಕಂಪನಿಗೆ ತಿಳಿಸದೆ ಇದ್ದಲ್ಲಿ ನಿಮಗೆ ವಿಮೆಯ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ರೈತರು ಯಾವ ವಿಮಾ ಕಂಪನಿಗೆ ವಿಮೆ ಪಾವತಿಸಿದ್ದಾರೋ ಆ ವಿಮಾ ಕಂಪನಿಯ ಸಿಬ್ಬಂದಿಗೆ ಕರೆ ಮಾಡಿ ತಿಳಿಸಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ನಿಮ್ಮ ಜಮೀನಿಗೆ ಬಂದು ಬೆಳೆ ಹಾನಿಯಾಗಿರುವ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ ನಂತರ ನಿಮಗೆ ವಿಮೆ ಹಣ ಜಮೆಯಾಗುತ್ತದೆ.

ಇದನ್ನೂ ಓದಿ ಅನ್ನಭಾಗ್ಯದ ಹಣ ನಿಮಗೆಷ್ಚು ಜಮೆ ಆಗಿದೆ? ಚೆಕ್ ಮಾಡಿ

Leave a Comment